ರೇಣುಕಾಸ್ವಾಮಿ ಕೊಲೆ ಪ್ರಕರಣ ಸದ್ದಾಗುತ್ತಿದ್ದಂತೆಯೇ ಶೆಡ್ ಎಂಬ ಪದ ಸಖತ್ ವೈರಲ್ ಆಗಿಬಿಟ್ಟಿದೆ. ಇದೀಗ ‘ಶೆಡ್ಡಿಗೆ ಹೋಗೋಣ ಬಾ’ ಎಂಬ ಹಾಡು ಸಹ ಕನ್ನಡ ಚಿತ್ರದಲ್ಲಿ ತಯಾರಾಗುತ್ತಿದೆ. ಭರತ್ ಅಭಿನಯದ ‘ಮೆಜೆಸ್ಟಿಕ್ 2’ ಚಿತ್ರಕ್ಕೆ ಈ ಹಾಡು ಇತ್ತೀಚೆಗೆ ಚಿತ್ರೀಕರಣಗೊಂಡಿದೆ.
‘ಮೆಜೆಸ್ಟಿಕ್ 2’ ಚಿತ್ರದ ಐಟಂ ಸಾಂಗ್ ವೊಂದರ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಹಾಕಲಾಗಿರುವ ವರ್ಣರಂಜಿತ ಸೆಟ್ನಲ್ಲಿ ಇತ್ತೀಚೆಗೆ ನಡೆದಿದೆ. ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಎಂಬ ಈ ಹಾಡಿಗೆ ನಿರ್ದೇಶಕ ರಾಮು ಅವರೇ ಸಾಹಿತ್ಯ ಬರೆದಿದ್ದು, ಮೇಘನಾ ಹಳ್ಳಿಹಾಳ ಧ್ವನಿಯಾಗಿದ್ದಾರೆ. ಈ ಹಾಡಿನಲ್ಲಿ ನಾಯಕ ಭರತ್ ಮತ್ತು ಹಲವು ಡ್ಯಾನ್ಸರ್ಗಳು ಕಾಣಿಸಿಕೊಂಡಿದ್ದು, ಸಂತೋಷ್ ನೃತ್ಯ ನಿರ್ದೇಶನ ಮಾಡಿದ್ದಾರೆ.
‘ಮೆಜೆಸ್ಟಿಕ್’ ಚಿತ್ರವು ದರ್ಶನ್ಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟ ಚಿತ್ರ. ಈಗ ಎರಡು ದಶಕಗಳ ನಂತರ ‘ಮೆಜೆಸ್ಟಿಕ್ 2’ ಚಿತ್ರ ತಯಾರಾಗುತ್ತಿದೆ. ಜನಪ್ರಿಯ ನಿರ್ಮಾಪಕ ಮತ್ತು ವಿತರಕ ಶಿಲ್ಪ ಶ್ರೀನಿವಾಸ್ ಅವರ ಮಗ ಭರತ್ ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಮೆಜೆಸ್ಟಿಕ್2’ ಚಿತ್ರದ ಮೂಲಕ, ಆ ಪ್ರದೇಶದಲ್ಲಿ ನಡೆಯುತ್ತಿರುವ ಕರಾಳ ದಂಧೆಗಳು, ಅಕ್ರಮ ಚಟುವಟಿಕೆಗಳು, ರೌಡಿಸಂ ಮುಂತಾದ ವಿಷಯಗಳನ್ನು ಈ ಚಿತ್ರದಲ್ಲಿ ನಿರ್ದೇಶಕ ರಾಮು ಹೇಳುವುದಕ್ಕೆ ಹೊರಟಿದ್ದಾರೆ.
ಅಮ್ಮಾ ಎಂಟರ್ ಪ್ರೈಸಸ್ ಮೂಲಕ ಚಿತ್ರದುರ್ಗದ ಹೆಚ್.ಹನುಮಂತಪ್ಪ ಅವರು ನಿರ್ಮಿಸುತ್ತಿರುವ ‘ಮೆಜೆಸ್ಟಿಕ್’ ಚಿತ್ರಕ್ಕೆ ಶೇ.50ರಷ್ಟು ಭಾಗದ ಚಿತ್ರೀಕರಣ ಮುಗಿದಿದೆ. ಜೊತೆಗೆ ಚಿತ್ರದುರ್ಗದ ಮುರುಘಾ ಮಠದಲ್ಲಿ ಡ್ಯುಯೆಟ್ ಸಾಂಗ್ ವೊಂದನ್ನು ಸಹ ಶೂಟ್ ಮಾಡಲಾಗಿದೆ.
‘ಮೆಜೆಸ್ಟಿಕ್ 2’ ಚಿತ್ರದಲ್ಲಿ ಭರತ್ಗೆ ನಾಯಕಿಯಾಗಿ ಸಂಹಿತಾ ವಿನ್ಯಾ ನಟಿಸಿದ್ದಾರೆ. ಹಿರಿಯ ನಟಿ ಶೃತಿ ಅವರು ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿನು ಮನಸು ಸಂಗೀತ ಮತ್ತು ವೀನಸ್ ಮೂರ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…