ಮನರಂಜನೆ

ಮತ್ತೆ ನಿರ್ಮಾಣಕ್ಕೆ ಶಿಲ್ಪಾ ಗಣೇಶ್‍; ಈ ಬಾರಿ ತುಳು ಚಿತ್ರ ನಿರ್ಮಾಣ

ಗಣೇಶ್‍ ಪತ್ನಿ ಶಿಲ್ಪಾ ಗಣೇಶ್‍ ಅವರಿಗೆ ಚಿತ್ರ ನಿರ್ಮಾಣ ಹೊಸದೇನಲ್ಲ. ಈಗಾಗಲೇ ಅವರು ‘ಮಳೆಯಲಿ ಜೊತೆಯಲಿ’ ಮತ್ತು ‘ಕೂಲ್‍’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಕಳೆದ ಒಂದು ದಶಕದಿಂದ ಚಿತ್ರ ನಿರ್ಮಾಣದಿಂದ ದೂರವೇ ಇದ್ದ ಅವರು, ಇದೀಗ ಹೊಸ ಚಿತ್ರವೊಂದರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

ಈ ಬಾರಿ ಶಿಲ್ಪಾ ನಿರ್ಮಿಸುತ್ತಿರುವುದು ಕನ್ನಡ ಚಿತ್ರವನ್ನಲ್ಲ, ಬದಲಿಗೆ ತುಳು ಚಿತ್ರವನ್ನು. ಮೂಲತಃ ದಕ್ಷಿಣ ಕನ್ನಡದವರಾದ ಶಿಲ್ಪಾ ಅವರ ಮಾತೃಭಾಷೆ ತುಳು. ಆದರೆ, ಇದುವರೆಗೂ ಅವರು ತುಳು ಚಿತ್ರರಂಗಕ್ಕೆ ಕಾಲಿಟ್ಟಿರಲಿಲ್ಲ. ಈಗ ಮೊದಲ ಬಾರಿಗೆ ಅವರು ತಮ್ಮ ಗೋಲ್ಡನ್‍ ಮೂವೀಸ್‍ ಬ್ಯಾನರ್‍ನಡಿ ಒಂದು ಹೊಸ ತುಳು ಚಿತ್ರವನ್ನು ನಿರ್‍ಮಾಣ ಮಾಡುತ್ತಿದ್ದಾರೆ.

ಇದೊಂದು ಕಾಮಿಡಿ ಚಿತ್ರವಾಗಿದ್ದು ಸಂದೀಪ್‍ ಬೆದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರಂತೆ. ಈ ಹಿಂದೆ ‘ಅಪ್ಪೆ ಟೀಚರ್‍’, ‘ಬರ್ಸ’, ‘ಅಂಬರ್‍ ಕ್ಯಾಟರರ್ಸ್’ ಮುಂತಾದ ಚಿತ್ರಗಳಿಗೆ ಸಹಾಕ ನಿರ್ದೇಕರಾಗಿ ಕೆಲಸ ಮಾಡಿದ್ದ ಸಂದೀಪ್‍, ಈ ಚಿತ್ರದ ಮೂಲಕ ಸ್ವತಂತ್ರ ನಿರ್‍ದೇಶಕರಾಗುತ್ತಿದ್ದಾರೆ.

ವಿಶೇಷವೆಂದರೆ, ಬಿಜೆಪಿ ಮುಖಂಡ ಹರಿಕೃಷ್ಣ ಭಂಟ್ವಾಳ ಅವರ ಮಗ ನಿತ್ಯಪ್ರಕಾಶ್‍ ಭಂಟ್ವಾಳ ಚಿತ್ರಕ್ಕೆ ನಾಯಕರಾಗಿ ನಟಿಸುತ್ತಿದ್ದಾರೆ. ಅವರಿಗೆ ಸೂಕ್ತವಾದ ನಾಯಕಿಯ ಹುಡುಕಾಟ ನಡೆದಿದೆ. ಇದೊಂದು ಕೌಟುಂಬಿಕ ಚಿತ್ರವಾಗಿದ್ದು, ಕರಾವಳಿ ಭಾಗದಲ್ಲೇ ಚಿತ್ರೀಕರಣ ನಡೆಯಲಿದೆ ಎಂದು ಹೇಳಲಾಗಿದೆ. ‘ಗೋಲ್ಡನ್‍ ಸ್ಟಾರ್‍’ ಗಣೇಶ್‍ ಸಹ ಚಿತ್ರದಲ್ಲಿ ಒಂದು ಅತಿಥಿ ಪಾತ್ರದಲ್ಲಿ ನಟಿಸುತ್ತಿರುವ ನಿರೀಕ್ಷೆ ಇದೆ.

ಈಗಾಗಲೇ ಪ್ರೀ-ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತದಲ್ಲಿದ್ದು, ಡಿಸೆಂಬರ್‍ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

53 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

3 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

3 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

3 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

5 hours ago