ಗಣೇಶ್ ಪತ್ನಿ ಶಿಲ್ಪಾ ಗಣೇಶ್ ಅವರಿಗೆ ಚಿತ್ರ ನಿರ್ಮಾಣ ಹೊಸದೇನಲ್ಲ. ಈಗಾಗಲೇ ಅವರು ‘ಮಳೆಯಲಿ ಜೊತೆಯಲಿ’ ಮತ್ತು ‘ಕೂಲ್’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಕಳೆದ ಒಂದು ದಶಕದಿಂದ ಚಿತ್ರ ನಿರ್ಮಾಣದಿಂದ ದೂರವೇ ಇದ್ದ ಅವರು, ಇದೀಗ ಹೊಸ ಚಿತ್ರವೊಂದರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.
ಈ ಬಾರಿ ಶಿಲ್ಪಾ ನಿರ್ಮಿಸುತ್ತಿರುವುದು ಕನ್ನಡ ಚಿತ್ರವನ್ನಲ್ಲ, ಬದಲಿಗೆ ತುಳು ಚಿತ್ರವನ್ನು. ಮೂಲತಃ ದಕ್ಷಿಣ ಕನ್ನಡದವರಾದ ಶಿಲ್ಪಾ ಅವರ ಮಾತೃಭಾಷೆ ತುಳು. ಆದರೆ, ಇದುವರೆಗೂ ಅವರು ತುಳು ಚಿತ್ರರಂಗಕ್ಕೆ ಕಾಲಿಟ್ಟಿರಲಿಲ್ಲ. ಈಗ ಮೊದಲ ಬಾರಿಗೆ ಅವರು ತಮ್ಮ ಗೋಲ್ಡನ್ ಮೂವೀಸ್ ಬ್ಯಾನರ್ನಡಿ ಒಂದು ಹೊಸ ತುಳು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಇದೊಂದು ಕಾಮಿಡಿ ಚಿತ್ರವಾಗಿದ್ದು ಸಂದೀಪ್ ಬೆದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರಂತೆ. ಈ ಹಿಂದೆ ‘ಅಪ್ಪೆ ಟೀಚರ್’, ‘ಬರ್ಸ’, ‘ಅಂಬರ್ ಕ್ಯಾಟರರ್ಸ್’ ಮುಂತಾದ ಚಿತ್ರಗಳಿಗೆ ಸಹಾಕ ನಿರ್ದೇಕರಾಗಿ ಕೆಲಸ ಮಾಡಿದ್ದ ಸಂದೀಪ್, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.
ವಿಶೇಷವೆಂದರೆ, ಬಿಜೆಪಿ ಮುಖಂಡ ಹರಿಕೃಷ್ಣ ಭಂಟ್ವಾಳ ಅವರ ಮಗ ನಿತ್ಯಪ್ರಕಾಶ್ ಭಂಟ್ವಾಳ ಚಿತ್ರಕ್ಕೆ ನಾಯಕರಾಗಿ ನಟಿಸುತ್ತಿದ್ದಾರೆ. ಅವರಿಗೆ ಸೂಕ್ತವಾದ ನಾಯಕಿಯ ಹುಡುಕಾಟ ನಡೆದಿದೆ. ಇದೊಂದು ಕೌಟುಂಬಿಕ ಚಿತ್ರವಾಗಿದ್ದು, ಕರಾವಳಿ ಭಾಗದಲ್ಲೇ ಚಿತ್ರೀಕರಣ ನಡೆಯಲಿದೆ ಎಂದು ಹೇಳಲಾಗಿದೆ. ‘ಗೋಲ್ಡನ್ ಸ್ಟಾರ್’ ಗಣೇಶ್ ಸಹ ಚಿತ್ರದಲ್ಲಿ ಒಂದು ಅತಿಥಿ ಪಾತ್ರದಲ್ಲಿ ನಟಿಸುತ್ತಿರುವ ನಿರೀಕ್ಷೆ ಇದೆ.
ಈಗಾಗಲೇ ಪ್ರೀ-ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತದಲ್ಲಿದ್ದು, ಡಿಸೆಂಬರ್ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…