ಮನರಂಜನೆ

ಗಲ್ಲಿ ಕಿಚನ್‍ ಬಿಟ್ಟು ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶೈನ್‍ ಶೆಟ್ಟಿ

ನಟ ಹಾಗೂ ‘ಬಿಗ್‍ ಬಾಸ್‍’ ವಿಜೇತ ಶೈನ್‍ ಶೆಟ್ಟಿ, ನಟನೆಗಿಂತ ಹೆಚ್ಚಾಗಿ ತಮ್ಮ ಗಲ್ಲಿ ಕಿಚನ್‍ನಿಂದಲೂ ಗುರುತಿಸಿಕೊಂಡವರು. ಮೊದಲು ಬನಶಂಕರಿ ಬಿ.ಡಿ.ಎ. ಕಾಂಪ್ಲೆಕ್ಸ್ ಬಳಿ ‘ಗಲ್ಲಿ ಕಿಚನ್‍’ ಎಂಬ ವಾಹನದಲ್ಲಿ ದೋಸೆ ಕ್ಯಾಂಪ್‍ ಶುರು ಮಾಡಿದ ಶೈನ್‍, ನಂತರ ಬನಶಂಕರಿ ಮತ್ತು ರಾಜರಾಜೇಶ್ವರಿ ನಗರಗಳಲ್ಲಿ ಅದೇ ಹೆಸರಿನ ಹೋಟೆಲ್‍ಗಳನ್ನು ಪ್ರಾರಂಭಿಸಿದರು. ಈಗ ಅವರು ಅದರಿಂದ ದೂರವಾಗುವುದಕ್ಕೆ ಮುಂದಾಗಿದ್ದಾರೆ.

ಹಾಗಂತ ಅವರೇ ಹೇಳಿಕೊಂಡಿದ್ದಾರೆ. ಇನ್‍ಸ್ಟಾಗ್ರಾಂನಲ್ಲಿ ಒಂದು ಪತ್ರ ಶೇರ್‍ ಮಾಡಿರುವ ಅವರು, ಗಲ್ಲಿ ಕಿಚನ್‍ ಪ್ರಯಾಣಕ್ಕೆ ವಿದಾಯ ಹೇಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಹೊಸದೊಂದು ಪ್ರಯಾಣ ಶುರು ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಏನದು ಹೊಸ ಪ್ರಯಾಣ ಎಂದು ಶೈನ್‍ ಹೇಳಿಲ್ಲ. ತಮ್ಮ ಹೊಸ ಪ್ರಯತ್ನಕ್ಕೆ ಅವರು ಎಲ್ಲರ ಸಹಕಾರ, ಬೆಂಬಲ ಕೋರಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು, ‘ಜೀವನದ ಕೆಲವೊಂದು ಪ್ರಯಾಣ ನಮ್ಮ ಅಸ್ತಿತ್ವನ ತೋರ್ಸಿ ನಮ್ಮ ವ್ಯಕ್ತಿತ್ವನ ಎತ್ತಿ ಹಿಡಿಯುತ್ತೆ ನನ್ನ ಲೈಫ್ ಅಲ್ಲಿ ಅದು ಗಲ್ಲಿ ಕಿಚನ್. ಜೀವನ ಸಾಗ್ಸೋಕೆ ಅಂತ ಶುರು ಮಾಡಿದ ಒಂದು ಪುಟ್ಟ ದೋಸೆ ಕ್ಯಾಂಪ್, ನೀವೆಲ್ಲಾ ಇಷ್ಟಪಟ್ಟು ಕೊಂಡಾಡಿ ಎರಡು ಬ್ರಾಂಚ್‍ಗಳ ಹೋಟೆಲ್ ಮಟ್ಟಕ್ಕೆ ಪ್ರೀತಿಯಿಂದ ಬೆಳೆಸಿದ್ರಿ. ಆ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರಋಣಿ. ಆದ್ರೆ ಬೆಳೀತಾ, ಬೆಳಸ್ತಾ ಮುಂದಕ್ಕೆ ಸಾಗೋದೆ ಜೀವನ ಅಲ್ವಾ. So, ಮುಂದೊಂದಿಷ್ಟು ಕೆಲಸ ಮಾಡೋದ್ ಇದೆ. ಅದಕ್ಕಾಗಿ ಹೊಸದೊಂದು ಪ್ರಯಾಣ ಶುರು ಮಾಡಬೇಕಾಗಿದೆ. ಹಾಗಾಗಿ 6 ವರ್ಷಗಳ ಗಲ್ಲಿ ಕಿಚನ್ ಪ್ರಯಾಣಕ್ಕೆ ವಿದಾಯ ಹೇಳೋ ಸಮಯ. ವಿದಾಯ ಹೇಳೋದು ಇಲ್ಲಿ ಬರದಷ್ಟು ಸುಲಭ ಅಲ್ಲ ಅಂತ ನಿಮ್ಗೂ ಗೊತ್ತು. ಆದ್ರೆ, ಜೀವನದಲ್ಲಿ ದಿಕ್ಕು ಮತ್ತು ಗುರಿ ಬದಲಾದಾಗ ಅದಕ್ಕೆ ಹೊಂದ್ಕೊಂಡು ಹೋಗೋದು ಅನಿವಾರ್ಯ.

ಗಲ್ಲಿ ಕಿಚನ್ನನ ನನ್ನಂತೆ ಆಸಕ್ತಿ ಇರೋ ಯುವ ಪ್ರತಿಭೆಗೆ ಹಸ್ತಾಂತ್ರ ಮಾಡಿದೀನಿ. ಈ ಕನಸಿಗೆ ಹೊತ್ತಿದ್ದ ಜ್ವಾಲೆ ಇನ್ನು ಮುಂದೆ ಹೊಸ ಪಾಲುದಾರನ ಕೈಯಲ್ಲಿ ಹೊಸ ರೀತಿಯಲ್ಲಿ ಮುಂದುವರಿಯಲಿದೆ. ಶ್ರದ್ಧೆಯಿಂದ ಜನರ ಪ್ರೀತಿನ ಉಳಸ್ಕೊಂಡು ಬೆಳಸ್ಕೊಂಡು ಹೋಗ್ಲಿ ಅಂತ ಆಶಿಸ್ತೀನಿ.

ತಿಂದುಂಡು ಹೊಗಳಿದ, ತಪ್ಪಿದ್ದಲ್ಲಿ ತಿದ್ದಿದ ನನ್ನೆಲ್ಲ ಅಭಿಮಾನಿಗಳೇ, ಭೋಜನ ಪ್ರಿಯರೇ, ಗಲ್ಲಿ ಕಿಚನ್ ಕುಟುಂಬಸ್ಥರೆ, ಮತ್ತೊಂದು ಪ್ರಯತ್ನದೊಂದಿಗೆ ಮರಳಿ ಬರುವೆ. ಮತ್ತೊಮ್ಮೆ ನಿಮ್ಮೆಲ್ಲರ ಸಹಕಾರ ಪ್ರೀತಿ ಬೇಡುವೆ’ ಎಂದು ಶೈನ್‍ ಪತ್ರ ಮುಗಿಸಿದ್ದಾರೆ.

ಶೈನ್‍ ಸದ್ಯ ‘ಮರ್ಯಾದೆ ಪ್ರಶ್ನೆ’ ಮತ್ತು ‘ನಿದ್ರಾದೇವಿ ನೆಕ್ಸ್ಟ್ ಡೋರ್‍’ ಎಂಬ ಚಿತ್ರಗಳಲ್ಲಿ ನಟಿಸಿದ್ದು, ಆ ಚಿತ್ರಗಳು ಸದ್ಯದಲ್ಲೇ ಬಿಡುಗಡೆಯಾಗಲಿವೆ.

ಆಂದೋಲನ ಡೆಸ್ಕ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

11 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

11 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

11 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

12 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

12 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

12 hours ago