ಮನರಂಜನೆ

ರವಿ ಬಸ್ರೂರು ನಿರ್ದೇಶನದಲ್ಲಿ ‘ವೀರ ಚಂದ್ರಹಾಸ’ನಾದ ಶಿವಣ್ಣ

ಕಳೆದ ವರ್ಷ ರವಿ ಬಸ್ರೂರು ನಿರ್ದೇಶನದ ‘ಕಡಲ್‍’ ಎಂಬ ಚಿತ್ರ ಬಿಡುಗಡೆಯಾಗಿತ್ತು. ಕರಾವಳಿ ಪ್ರದೇಶದ ಈ ಚಿತ್ರವು ದೊಡ್ಡ ಯಶಸ್ಸು ಕಾಣದಿದ್ದರೂ, ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಇದೀಗ ರವಿ ಬಸ್ರೂರು ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಅವರ ಚಿತ್ರದಲ್‍ಲಿ ಶಿವರಾಜಕುಮಾರ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಬಾರಿ ರವಿ ಬಸ್ರೂರು ಪೌರಾಣಿಕ ಯಕ್ಷಗಾನ ಪ್ರಸಂಗವಾದ ‘ವೀರ ಚಂದ್ರಹಾಸ’ನನ್ನು ತೆರೆಗೆ ತರುತ್ತಿದ್ದಾರೆ. ಈ ಚಿತ್ರದ ಮೂಲಕ ಕರ್ನಾಟಕದ ಜನಪ್ರಿಯ ಜಾನಪದ ಕಲೆಯಾದ ಯಕ್ಷಗಾನವನದ ಸಂಸ್ಕೃತಿ ಮತ್ತು ಪರಂಪರೆಯನ್ನು ಸಿನಿಮಾ ಮೂಲಕ ತಲುಪಿಸುವ ಪ್ರಯತ್ನವನ್ನು ಅವರು ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಮಾಡುತ್ತಿದ್ದಾರೆ. ಈ ಚಿತ್ರದ ಮೋಷನ್‍ ಪೋಸ್ಟರ್‍ ಇತ್ತೀಚೆಗೆ ಬಿಡುಗಡೆಯಾಗಿದೆ.

ಕುಂತಲ ಸಾಮ್ರಾಜ್ಯದ ಚಂದ್ರಹಾಸನ ಕಥೆಯನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನವನ್ನು ರವಿ ಈ ಚಿತ್ರದ ಮೂಲಕ ಮಾಡುತ್ತಿದ್ದಾರೆ. ಇದು ಅವರ 12 ವರ್ಷಗಳ ಕನಸಂತೆ. ಈ ಚಿತ್ರದಲ್ಲಿ ಶಿವರಾಜಕುಮಾರ್‍ ಅವರು ಸಿಂಗಾನಲ್ಲೂರು ಸಂಸ್ಥಾನದ ‘ನಾಡಚಕ್ರವರ್ತಿ ಶಿವ ಪುಟ್ಟಸ್ವಾಮಿ’ಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಶಿವರಾಜಕುಮಾರ್‍ ಅವರ ನಿಜವಾದ ಹೆಸರು ನಾಗರಾಜು ಶಿವ ಪುಟ್ಟಸ್ವಾಮಿ ಎಂದು ಎಲ್ಲರಿಗೂ ಗೊತ್ತೇ ಇದೆ. ಈಗ ಅವರ ನಿಜಜೀವನದ ಹೆಸರನ್ನು ಪಾತ್ರಕ್ಕೂ ಇಡಲಾಗಿದೆ.

ಇಷ್ಟು ವರ್ಷಗಳ ಸಿನಿಜರ್ನಿಯಲ್ಲಿ ಶಿವರಾಜಕುಮಾರ್‍ ಯಕ್ಷಗಾನದ ವೇಷ ತೊಡತ್ತಿರುವುದು ಇದೇ ಮೊದಲು. ‘ವೀರ ಚಂದ್ರಹಾಸ’ ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ಸಾಕಷ್ಟು ತಯಾರಿಯನ್ನೂ ನಡೆಸಿ ಚಿತ್ರದಲ್ಲಿ ನಟಿಸಿದ್ದಾರೆ. ಯಕ್ಷಗಾನಕ್ಕೆ ಸಂಬಂಧಿಸಿದಂತೆ ಹಲವು ವೀಡಿಯೋಗಳನ್ನು ನೋಡಿ, ಅರ್ಥ ಮಾಡಿಕೊಂಡು, ಯಕ್ಷಗಾನದ ವೇಷ ತೊಟ್ಟು ಅವರು ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಯಕ್ಷಗಾನ ನೃತ್ಯ ಮಾಡುವ ಆಸೆಯೂ ಅವರಿಗಿತ್ತಂತೆ. ಆದರೆ, ಅನಾರೋಗ್ಯದ ಸಮಸ್ಯೆಯಿಂದ ಅದು ಸಾಧ್ಯವಾಗಲಿಲ್ಲ.

‘ವೀರ ಚಂದ್ರಹಾಸ’ ಚಿತ್ರದಲ್ಲಿ 450ಕ್ಕೂ ಹೆಚ್ಚು ಯಕ್ಷಗಾನ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರಂತೆ. ಈ ಚಿತ್ರವನ್ನು ಓಂಕಾರ್‍ ಮೂವೀಸ್‍ ಬ್ಯಾನರ್‍ ಅಡಿ ಎನ್‍.ಎಸ್. ರಾಜಕುಮಾರ್ ನಿರ್ಮಿಸಿದ್ದು, ಈಗಾಗಲೇ ಚಿತ್ರೀಕರಣ ಮುಗಿದು, ಪೋಸ್ಟ್-ಪ್ರೊಡಕ್ಷನ್‍ ಕೆಲಸಗಳು ನಡೆಯುತ್ತಿವೆ. ಚಿತ್ರವು 2025ರ ಜುಲೈ ನಂತರ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಭೂಮಿಕಾ

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 hour ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

1 hour ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

2 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

2 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

3 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

4 hours ago