ಮನರಂಜನೆ

ಮಗಳ ಸಿನಿಮಾದಲ್ಲಿ ಶಿವಣ್ಣ ಪಿಜ್ಜಾ ಡೆಲಿವರಿ ಮಾಡಿದ್ದಾರೆ …

ಶಿವರಾಜಕುಮಾರ್ ಮಗಳು ನಿವೇದಿತಾ ಶಿವರಾಜಕುಮಾರ್‍ ತಮ್ಮ ಶ್ರೀ ಮುತ್ತು ಸಿನಿ ಕ್ರಿಯೇಷನ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿರುವ ‘ಫೈರ್‍ ಫ್ಲೈ’ ಚಿತ್ರವು ಡಾ. ರಾಜಕುಮಾರ್‍ ಅವರ ಹುಟ್ಟುಹಬ್ಬದ ಪ್ರಯುಕ್ತ ಏಪ್ರಿಲ್‍ 24ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ವಿಶೇಷವೆಂದರೆ ಚಿತ್ರದಲ್ಲಿ ಶಿವರಾಜ್ ಕುಮಾರ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಪಿಜ್ಜಾ ಡೆಲಿವರಿ ಮಾಡುವ ಪಾತ್ರದಲ್ಲಿ ಶಿವರಾಜಕುಮಾರ್‍ ನಟಿಸಿದ್ದಾರೆ. ಇಲ್ಲಿ ಅವರ ಪಾತ್ರೆ ತೆರೆಯ ಮೇಲೆ ಎಷ್ಟು ಹೊತ್ತು ಇರುತ್ತದೆ? ಏನು ಮಾಡುತ್ತದೆ? ಮುಂತಾದ ಯಾವ ವಿಷಯವನ್ನೂ ಚಿತ್ರತಂಡ ಬಹಿರಂಗಪಡಿಸಿಲ್ಲ.

ಟ್ರೇಲರ್‌ ಬಿಡುಗಡೆ ಬಳಿಕ ಮಾತನಾಡಿದ ಶಿವರಾಜಕುಮಾರ್, ‘ಮಗಳು ಸಿನಿಮಾ ಮಾಡಿರುವುದು ಬಹಳ ಖುಷಿಯಾಗಿದೆ. ಕಥೆ ಬಹಳ ವಿಭಿನ್ನವಾಗಿರುವುದಷ್ಟೇ, ನನ್ನ ಹೃದಯಕ್ಕೆ ತಟ್ಟಿತು. ಚಿತ್ರದಲ್ಲಿ ಸಾಕಷ್ಟು ವಿಷಯಗಳಿವೆ. ಇದೊಂದು ಮೌಲ್ಯವಿರುವ ಚಿತ್ರ. ವಂಶಿ ಒಳ್ಳೆಯ ಕಥೆ ಮಾಡಿದ್ದಾರೆ. ಒಳ್ಳೆಯ ತಂಡ ಚಿತ್ರಕ್ಕೆ ಕೆಲಸ ಮಾಡಿದೆ. ಚರಣ್ ರಾಜ್‌ ಸಂಗೀತ ಬಗ್ಗೆ ಮಾತನಾಡುವ ಆಗಿಲ್ಲ. ನಮ್ಮ ಕನ್ನಡದಲ್ಲಿಯೂ ಹೊಸ ತಂಡ ಬರಬೇಕು. ಹೊಸ ಅಲೆ ಬರಬೇಕು ಎಂಬುದು ನನ್ನ ಆಸೆ. ಅವರೇ ನಮ್ಮ ಭಾಷೆ, ಸಂಸ್ಕೃತಿಯನ್ನು ಮುಂದೆ ತೆಗೆದುಕೊಂಡು ಹೋಗಬೇಕು. ಚಿತ್ರವನ್ನು ಜನ ಹೇಗೆ ಸ್ವೀಕರಿಸುತ್ತಾರೆ ಎನ್ನುವುದು ನಂತರ ದವಿಷಯ. ಆದರೆ, ನಮ್ಮ ಪ್ರಯತ್ನ ಇರಬೇಕು. ನಾನು ಈ ಚಿತ್ರದಲ್ಲಿ ನಟಿಸಿದ್ದೇನೆ. ಹೊಸ ಹುಡುಗರು ನಮ್ಮನ್ನು ಇನ್ನಷ್ಟು ಯಂಗ್‌ ಆಗಿ ತೋರಿಸಿದ್ದಾರೆ’ ಎಂದರು.

ನಿರ್ಮಾಪಕಿ ನಿವೇದಿತಾ ಶಿವರಾಜಕುಮಾರ್‌ ಮಾತನಾಡಿ, ‘ಇದು ನನ್ನ ಮೊದಲ ಸಿನಿಮಾ. ತಾತನ ಹುಟ್ಟುಹಬ್ಬದ ದಿನ ಬರುತ್ತಿರುವುದು ಬಹಳ ಖುಷಿ ಇದೆ. ಕನ್ನಡ ಸಿನಿಮಾ ನೋಡಲು ಪ್ರೇಕ್ಷಕರು ಬರುತ್ತಿಲ್ಲ ಎಂಬ ಮಾತು ಕೇಳಿಬರುತ್ತಿದೆ. ನಾವು ಒಳ‍್ಳೆಯ ಸಿನಿಮಾ ಮಾಡಿದರೆ, ಜನ ಖಂಡಿತಾ ಬರುತ್ತಾರೆ’ ಎಂದರು.

‘ಫೈರ್‌ ಫ್ಲೈ’ ಚಿತ್ರಕ್ಕೆ ವಂಶಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ರಚನಾ ಇಂದರ್‍ ನಟಿಸಿದ್ದು, ಮಿಕ್ಕಂತೆ ಸುಧಾರಾಣಿ, ರಚನಾ ಇಂದರ್, ಅಚ್ಯುತ್ ಕುಮಾರ್, ಮೂಗು ಸುರೇಶ್, ಶೀತಲ್ ಶೆಟ್ಟಿ‌ ಮುಂತಾದವರು ನಟಿಸಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ಮತ್ತು ರಘು ನಿಡುವಳ್ಳಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

29 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

2 hours ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

3 hours ago