ಮನರಂಜನೆ

ಮಗಳ ಸಿನಿಮಾದಲ್ಲಿ ಶಿವಣ್ಣ ಪಿಜ್ಜಾ ಡೆಲಿವರಿ ಮಾಡಿದ್ದಾರೆ …

ಶಿವರಾಜಕುಮಾರ್ ಮಗಳು ನಿವೇದಿತಾ ಶಿವರಾಜಕುಮಾರ್‍ ತಮ್ಮ ಶ್ರೀ ಮುತ್ತು ಸಿನಿ ಕ್ರಿಯೇಷನ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿರುವ ‘ಫೈರ್‍ ಫ್ಲೈ’ ಚಿತ್ರವು ಡಾ. ರಾಜಕುಮಾರ್‍ ಅವರ ಹುಟ್ಟುಹಬ್ಬದ ಪ್ರಯುಕ್ತ ಏಪ್ರಿಲ್‍ 24ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ವಿಶೇಷವೆಂದರೆ ಚಿತ್ರದಲ್ಲಿ ಶಿವರಾಜ್ ಕುಮಾರ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಪಿಜ್ಜಾ ಡೆಲಿವರಿ ಮಾಡುವ ಪಾತ್ರದಲ್ಲಿ ಶಿವರಾಜಕುಮಾರ್‍ ನಟಿಸಿದ್ದಾರೆ. ಇಲ್ಲಿ ಅವರ ಪಾತ್ರೆ ತೆರೆಯ ಮೇಲೆ ಎಷ್ಟು ಹೊತ್ತು ಇರುತ್ತದೆ? ಏನು ಮಾಡುತ್ತದೆ? ಮುಂತಾದ ಯಾವ ವಿಷಯವನ್ನೂ ಚಿತ್ರತಂಡ ಬಹಿರಂಗಪಡಿಸಿಲ್ಲ.

ಟ್ರೇಲರ್‌ ಬಿಡುಗಡೆ ಬಳಿಕ ಮಾತನಾಡಿದ ಶಿವರಾಜಕುಮಾರ್, ‘ಮಗಳು ಸಿನಿಮಾ ಮಾಡಿರುವುದು ಬಹಳ ಖುಷಿಯಾಗಿದೆ. ಕಥೆ ಬಹಳ ವಿಭಿನ್ನವಾಗಿರುವುದಷ್ಟೇ, ನನ್ನ ಹೃದಯಕ್ಕೆ ತಟ್ಟಿತು. ಚಿತ್ರದಲ್ಲಿ ಸಾಕಷ್ಟು ವಿಷಯಗಳಿವೆ. ಇದೊಂದು ಮೌಲ್ಯವಿರುವ ಚಿತ್ರ. ವಂಶಿ ಒಳ್ಳೆಯ ಕಥೆ ಮಾಡಿದ್ದಾರೆ. ಒಳ್ಳೆಯ ತಂಡ ಚಿತ್ರಕ್ಕೆ ಕೆಲಸ ಮಾಡಿದೆ. ಚರಣ್ ರಾಜ್‌ ಸಂಗೀತ ಬಗ್ಗೆ ಮಾತನಾಡುವ ಆಗಿಲ್ಲ. ನಮ್ಮ ಕನ್ನಡದಲ್ಲಿಯೂ ಹೊಸ ತಂಡ ಬರಬೇಕು. ಹೊಸ ಅಲೆ ಬರಬೇಕು ಎಂಬುದು ನನ್ನ ಆಸೆ. ಅವರೇ ನಮ್ಮ ಭಾಷೆ, ಸಂಸ್ಕೃತಿಯನ್ನು ಮುಂದೆ ತೆಗೆದುಕೊಂಡು ಹೋಗಬೇಕು. ಚಿತ್ರವನ್ನು ಜನ ಹೇಗೆ ಸ್ವೀಕರಿಸುತ್ತಾರೆ ಎನ್ನುವುದು ನಂತರ ದವಿಷಯ. ಆದರೆ, ನಮ್ಮ ಪ್ರಯತ್ನ ಇರಬೇಕು. ನಾನು ಈ ಚಿತ್ರದಲ್ಲಿ ನಟಿಸಿದ್ದೇನೆ. ಹೊಸ ಹುಡುಗರು ನಮ್ಮನ್ನು ಇನ್ನಷ್ಟು ಯಂಗ್‌ ಆಗಿ ತೋರಿಸಿದ್ದಾರೆ’ ಎಂದರು.

ನಿರ್ಮಾಪಕಿ ನಿವೇದಿತಾ ಶಿವರಾಜಕುಮಾರ್‌ ಮಾತನಾಡಿ, ‘ಇದು ನನ್ನ ಮೊದಲ ಸಿನಿಮಾ. ತಾತನ ಹುಟ್ಟುಹಬ್ಬದ ದಿನ ಬರುತ್ತಿರುವುದು ಬಹಳ ಖುಷಿ ಇದೆ. ಕನ್ನಡ ಸಿನಿಮಾ ನೋಡಲು ಪ್ರೇಕ್ಷಕರು ಬರುತ್ತಿಲ್ಲ ಎಂಬ ಮಾತು ಕೇಳಿಬರುತ್ತಿದೆ. ನಾವು ಒಳ‍್ಳೆಯ ಸಿನಿಮಾ ಮಾಡಿದರೆ, ಜನ ಖಂಡಿತಾ ಬರುತ್ತಾರೆ’ ಎಂದರು.

‘ಫೈರ್‌ ಫ್ಲೈ’ ಚಿತ್ರಕ್ಕೆ ವಂಶಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ರಚನಾ ಇಂದರ್‍ ನಟಿಸಿದ್ದು, ಮಿಕ್ಕಂತೆ ಸುಧಾರಾಣಿ, ರಚನಾ ಇಂದರ್, ಅಚ್ಯುತ್ ಕುಮಾರ್, ಮೂಗು ಸುರೇಶ್, ಶೀತಲ್ ಶೆಟ್ಟಿ‌ ಮುಂತಾದವರು ನಟಿಸಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ಮತ್ತು ರಘು ನಿಡುವಳ್ಳಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

10 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

10 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

10 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

11 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

11 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

11 hours ago