ಮನರಂಜನೆ

ಆಗಸ್ಟ್ ತಿಂಗಳಲ್ಲಿ ಶಿವಣ್ಣ ಅಭಿನಯದ ಹೊಸ ಚಿತ್ರಕ್ಕೆ ಮುಹೂರ್ತ

ಇತ್ತೀಚೆಗೆಷ್ಟೇ, ಶಿವರಾಜಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಅಭಿನಯದ ಹಲವು ಚಿತ್ರಗಳು ಘೋಷಣೆಯಾಗಿವೆ. ಈ ಪೈಕಿ ಮೊದಲು ಯಾವುದು ಪ್ರಾರಂಭವಾಗುತ್ತವೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ.

ಶಿವರಾಜಕುಮಾರ್‍ ಅಭಿನಯದ ಶಿವಣ್ಣ 131 (ತಾತ್ಕಾಲಿಕ ಹೆಸರು) ಮೊದಲು ಪ್ರಾರಂಭವಾಗಲಿದೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದ್ದು, ತಕ್ಷಣವೇ ಚಿತ್ರೀಕರಣ ಪ್ರಾರಂಭವಾಗಲಿದೆ. ಇನ್ನು, ಎಚ್‍.ಎಂ.ಟಿ ಸ್ಟುಡಿಯೋದಲ್ಲಿ ಈ ಚಿತ್ರಕ್ಕಾಗಿ ವಿಶೇಷ ಸೆಟ್‍ ನಿರ್ಮಾಣ ಮಾಡಲಾಗುತ್ತಿದ್ದು, ಅಲ್ಲೇ ಚಿತ್ರೀಕರಣ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಚಿತ್ರತಂಡದವರು ಭಾನುವಾರ ಬೆಳಿಗ್ಗೆ, ಶಿವಣ್ಣ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕ ಕಾರ್ತಿಕ್ ಅದ್ವೈತ್, ನಿರ್ಮಾಪಕರಾದ ಎನ್.ಎಸ್. ರೆಡ್ಡಿ ಹಾಗೂ ಸುಧೀರ್, ಛಾಯಾಗ್ರಹಕ ಎಜೆ ಶೆಟ್ಟಿ, ಸಂಕಲನಕಾರ ದೀಪು ಎಸ್. ಕುಮಾರ್ ಮುಂತಾದವರು ಭೇಟಿ ಮಾಡಿ ಚಿತ್ರದ ಕುರಿತು ಮಾತನಾಡಿದ್ದಾರೆ.

ಶಿವರಾಜಕುಮಾರ್‍ ಅವರನ್ನು ನಿರ್ದೇಶಿಸುವ ಮೂಲಕ ಕಾರ್ತಿಕ್ ಅದ್ವೈತ್, ಇದೇ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ, ಇದು ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರಂತೆ. ಅವರ ಲುಕ್‍ ಸಹ ಈ ಚಿತ್ರದಲ್ಲಿ ಬದಲಾಗಲಿದೆ ಎಂದು ಹೇಳಲಾಗುತ್ತಿದೆ. ‘ಘೋಸ್ಟ್’ ಖ್ಯಾತಿಯ ವಿ.ಎಂ. ಪ್ರಸನ್ನ ಹಾಗೂ ‘ಸೀತಾರಾಮಂ’ ಖ್ಯಾತಿಯ ಜಯಕೃಷ್ಣ ಬರಹಗಾರರಾಗಿ ಈ ಚಿತ್ರದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.

ಇನ್ನು, ‘ವಿಕ್ರಂ ವೇದ’, ‘ಆರ್ ಡಿ ಎಕ್ಸ್’, ‘ಖೈದಿ’ ಸಿನಿಮಾ ಖ್ಯಾತಿಯ ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ಭುವನೇಶ್ವರಿ ಪ್ರೊಡಕ್ಷನ್ ಬ್ಯಾನರ್‍ ಅಡಿ ಈ ಚಿತ್ರ ನಿರ್ಮಾಣವಾಗುತ್ತಿದೆ.

ಭೂಮಿಕಾ

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

4 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

5 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

5 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

5 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

5 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

6 hours ago