ಮನರಂಜನೆ

ಆಗಸ್ಟ್ ತಿಂಗಳಲ್ಲಿ ಶಿವಣ್ಣ ಅಭಿನಯದ ಹೊಸ ಚಿತ್ರಕ್ಕೆ ಮುಹೂರ್ತ

ಇತ್ತೀಚೆಗೆಷ್ಟೇ, ಶಿವರಾಜಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಅಭಿನಯದ ಹಲವು ಚಿತ್ರಗಳು ಘೋಷಣೆಯಾಗಿವೆ. ಈ ಪೈಕಿ ಮೊದಲು ಯಾವುದು ಪ್ರಾರಂಭವಾಗುತ್ತವೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ.

ಶಿವರಾಜಕುಮಾರ್‍ ಅಭಿನಯದ ಶಿವಣ್ಣ 131 (ತಾತ್ಕಾಲಿಕ ಹೆಸರು) ಮೊದಲು ಪ್ರಾರಂಭವಾಗಲಿದೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದ್ದು, ತಕ್ಷಣವೇ ಚಿತ್ರೀಕರಣ ಪ್ರಾರಂಭವಾಗಲಿದೆ. ಇನ್ನು, ಎಚ್‍.ಎಂ.ಟಿ ಸ್ಟುಡಿಯೋದಲ್ಲಿ ಈ ಚಿತ್ರಕ್ಕಾಗಿ ವಿಶೇಷ ಸೆಟ್‍ ನಿರ್ಮಾಣ ಮಾಡಲಾಗುತ್ತಿದ್ದು, ಅಲ್ಲೇ ಚಿತ್ರೀಕರಣ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಚಿತ್ರತಂಡದವರು ಭಾನುವಾರ ಬೆಳಿಗ್ಗೆ, ಶಿವಣ್ಣ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕ ಕಾರ್ತಿಕ್ ಅದ್ವೈತ್, ನಿರ್ಮಾಪಕರಾದ ಎನ್.ಎಸ್. ರೆಡ್ಡಿ ಹಾಗೂ ಸುಧೀರ್, ಛಾಯಾಗ್ರಹಕ ಎಜೆ ಶೆಟ್ಟಿ, ಸಂಕಲನಕಾರ ದೀಪು ಎಸ್. ಕುಮಾರ್ ಮುಂತಾದವರು ಭೇಟಿ ಮಾಡಿ ಚಿತ್ರದ ಕುರಿತು ಮಾತನಾಡಿದ್ದಾರೆ.

ಶಿವರಾಜಕುಮಾರ್‍ ಅವರನ್ನು ನಿರ್ದೇಶಿಸುವ ಮೂಲಕ ಕಾರ್ತಿಕ್ ಅದ್ವೈತ್, ಇದೇ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ, ಇದು ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರಂತೆ. ಅವರ ಲುಕ್‍ ಸಹ ಈ ಚಿತ್ರದಲ್ಲಿ ಬದಲಾಗಲಿದೆ ಎಂದು ಹೇಳಲಾಗುತ್ತಿದೆ. ‘ಘೋಸ್ಟ್’ ಖ್ಯಾತಿಯ ವಿ.ಎಂ. ಪ್ರಸನ್ನ ಹಾಗೂ ‘ಸೀತಾರಾಮಂ’ ಖ್ಯಾತಿಯ ಜಯಕೃಷ್ಣ ಬರಹಗಾರರಾಗಿ ಈ ಚಿತ್ರದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.

ಇನ್ನು, ‘ವಿಕ್ರಂ ವೇದ’, ‘ಆರ್ ಡಿ ಎಕ್ಸ್’, ‘ಖೈದಿ’ ಸಿನಿಮಾ ಖ್ಯಾತಿಯ ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ಭುವನೇಶ್ವರಿ ಪ್ರೊಡಕ್ಷನ್ ಬ್ಯಾನರ್‍ ಅಡಿ ಈ ಚಿತ್ರ ನಿರ್ಮಾಣವಾಗುತ್ತಿದೆ.

ಭೂಮಿಕಾ

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 hour ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 hour ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 hour ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 hour ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 hour ago