ಮನರಂಜನೆ

AFRO ಟಪಾಂಗ್’ ಹಾಡಿಗೆ ಶಿವಣ್ಣ ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಭರ್ಜರಿ ಸ್ಟೆಪ್

ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರದಲ್ಲಿ ಹಾಡುಗಳು ಕಡಿಮೆಯಂತೆ. ಅದರಲ್ಲೂ ಮೂವರು ಸ್ಟಾರ್‍ ನಟರು ಇದ್ದರೂ, ಮೂವರೂ ಇರುವ ಒಂದು ಹಾಡು ಇಲ್ಲದಿದ್ದರೆ, ಅವರ ಅಭಿಮಾನಿಗಳಿಗೆ ಬೇಸರವಾಗೋದು ಗ್ಯಾರಂಟಿ ಎಂದು ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ಅರ್ಜುನ್‍ ಜನ್ಯಗೆ ಗೊತ್ತಿದೆ. ಅದೇ ಕಾರಣಕ್ಕೆ ಅವರೊಂದು ಪ್ರಮೋಷನಲ್‍ ಹಾಡು ಮಾಡಿದ್ದಾರೆ. ಈ ಹಾಡು ಚಿತ್ರದಲ್ಲಿ ಇಲ್ಲದಿದ್ದರೂ, ಚಿತ್ರದ ಪ್ರಚಾರಕ್ಕಾಗಿ ಮಾತ್ರ ಮಾಡಲಾಗಿದೆ.

‘AFRO ಟಪಾಂಗ್’ ಎಂಬ ಈ ಹಾಡಿನ ವಿಶೇಷತೆಯೆಂದರೆ, ಈ ಹಾಡಿನಲ್ಲಿ ಉಗಾಂಡಾದ ಘೆಟ್ಟೋ ಕಿಡ್ಸ್ ಹೆಜ್ಜೆ ಹಾಕಿದ್ದಾರೆ. ಈ ಹಾಡಿನಲ್ಲಿ ಘೆಟ್ಟೋ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನ ಈ ಹಾಡಿನ ಬಿಡುಗಡೆ ಆಯಿತು.

ಇದನ್ನು ಓದಿ: ಡಿಸೆಂಬರ್ 25ರಂದು ಬಿಡುಗಡೆಯಾಗಲಿದೆ ‘45’

ನಾನು ನಿರ್ದೇಶಕನಾಗಲು ಶಿವರಾಜಕುಮಾರ್ ಅವರೆ ಕಾರಣ ಎನ್ನುವ ಅರ್ಜುನ್ ಜನ್ಯ, ‘ನಮ್ಮ ‘45’ ಚಿತ್ರದಲ್ಲಿ ಹಾಡಿಲ್ಲ. ಆದರೆ, ಪ್ರಮೋಷನಲ್ ಸಾಂಗ್ ಮಾಡಬೇಕೆಂಬ ಆಸೆ ಇತ್ತು. ಮಾಮೂಲಿ ತರಹ ಮಾಡುವುದು ಬೇಡ ಅಂದುಕೊಂಡೆವು. ಆಗ ನನಗೆ ಉಗಾಂಡದ ಘೆಟ್ಟೋ ಕಿಡ್ಸ್ ಈ ಪ್ರಮೋಷನ್ ಹಾಡಿನಲ್ಲಿ ಅಭಿನಯಿಸಿದರೆ ಚೆಂದ ಎನಿಸಿತು. ಕಷ್ಟಪಟ್ಟು ಅವರನ್ನು ಸಂಪರ್ಕ ಮಾಡಿದ್ದೆವು. ಇವರ ಜೊತೆಗೆ ನಮ್ಮ ಚಿತ್ರದ ಮೂರು ಜನ ನಾಯಕರು ಅಭಿನಯಿಸಿದ್ದಾರೆ. ಎಂ.ಸಿ.ಬಿಜ್ಜು ಈ ಹಾಡನ್ನು ಬರೆದು ಹಾಡಿದ್ದಾರೆ. ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.

‘45’ ಚಿತ್ರ ಬರೀ ಕರ್ನಾಟಕ ಮಾತ್ರ ಅಲ್ಲ, ಇಡೀ ದೇಶಕ್ಕೆ ಸಲ್ಲುವ ಸಿನಿಮಾ ಎನ್ನುವ ಶಿವರಾಜಕುಮಾರ್, ‘ಅಂತಹ ಕಂಟೆಂಟ್ ವುಳ್ಳ ಸಿನಿಮಾ ಇದು. ಅರ್ಜುನ್ ಜನ್ಯ ಈ ಚಿತ್ರದ ಕಥೆ ಹೇಳಿದಾಗ ನೀವೆ ನಿರ್ದೇಶನ ಮಾಡಿ ಎಂದು ಹೇಳಿದ್ದೆ. ಈಗ ಈ ಹಾಡು ನೋಡಿದಾಗ ಅವರ ನಿರ್ದೇಶನದ ಬಗ್ಗೆ ತಿಳಿಯುತ್ತಿದೆ. ನಾನು, ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಮೂರು ಜನ ಈ ಚಿತ್ರದ ನಾಯಕರು. ಇಲ್ಲಿ ಯಾರೂ ದೊಡ್ಡವರಲ್ಲ. ಅಭಿನಯದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶವಿದೆ’ ಎಂದು ಶಿವರಾಜಕುಮಾರ್ ತಿಳಿಸಿದರು.

ಈ ಚಿತ್ರದ ಬಗ್ಗೆ ನನಗೆ ಆರಂಭದಿಂದಲೂ ಪ್ರೀತಿ ಎನ್ನುವ ರಾಜ್‍ ಬಿ. ಶೆಟ್ಟಿ, ‘ಚಿತ್ರದ ಕುರಿತು ನಾನು ಅರ್ಜುನ್ ಜನ್ಯ ಅವರಿಗೆ ಕರೆ ಮಾಡಿ ಕೇಳುತ್ತಿರುತ್ತೇನೆ. ನಾನು ನೋಡಿ ಬೆಳೆದ ಇಬ್ಬರು ಕನ್ನಡ ಚಿತ್ರರಂಗದ ಮಹಾನ್ ನಟರ ಜೊತೆಗೆ ಅಭಿನಯಿಸಿರುವುದು ಬಹಳ ಖುಷಿಯಾಗಿದೆ. ಅವರಿಬ್ಬರು ತೆರೆಯ ಮೇಲೆ ಒಟ್ಟಿಗೆ ಬಂದಾಗ ವಿಷಲ್ ಹಾಕಿ ಸಂಭ್ರಮಿಸಿದ್ದೇನೆ’ ಎಂದರು.

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

5 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

5 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

5 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

5 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

5 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

5 hours ago