ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ ಬಿ. ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಚಿತ್ರೀಕರಣ ಇದೀಗ ಸಂಪೂರ್ಣವಾಗಿದೆ ಕಳೆದ ವರ್ಷ ಜುಲೈನಲ್ಲಿ ಪ್ರಾರಂಭವಾದ ರಮೇಶ್ ರೆಡ್ಡಿ ನಿರ್ಮಾಣದ ಮತ್ತು ಅರ್ಜುನ್ ಜನ್ಯ ನಿರ್ದೇಶನದ ಈ ಚಿತ್ರವು ಹಲವು ಹಂತಗಳ ಚಿತ್ರೀಕರಣ ಮುಗಿಸಿ ಇದೀಗ ಕುಂಬಳಕಾಯಿ ಒಡೆಯಲಾಗಿದೆ.
ಈ ಚಿತ್ರದ ಕುರಿತು ಮಾತನಾಡುವ ಶಿವರಾಜಕುಮಾರ್, ‘ಇದೇ ಮೊದಲ ಬಾರಿಗೆ ನಾವು ಮೂವರು ಒಟ್ಟಿಗೆ ನಟಿಸಿದ್ದೇವೆ. ಎಲ್ಲರೂ ಸಮನಾದ ಪಾತ್ರಗಳಿವೆ. ಉಪೇಂದ್ರ ಅವರ ಜೊತೆ ನಟಿಸುವುದಕ್ಕೆ ನಾನು ಯಾವಾಗಲೂ ಸಿದ್ಧ. ರಾಜ್ ಬಿ. ಶೆಟ್ಟಿ ಜೊತೆ ಇದೆ ಮೊದಲ ಬಾರಿಗೆ ನಟಿಸಿದ್ದೇನೆ. ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ. ಹಾಗಂತ ಅವರ ಕೆಲಸ ನೋಡಿ ಅನಿಸುವುದಿಲ್ಲ. ಅಷ್ಟು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದಾರೆ. ಇಡೀ ಭಾರತೀಯ ಚಿತ್ರರಂಗವೇ ಮೆಚ್ಚುವಂತಹ ಒಂದು ಆಕ್ಷನ್ ಚಿತ್ರವಾಗಲಿದೆ’ ಎಂದರು
ಅರ್ಜುನ್ ಜನ್ಯ ಅವರ ನಿರ್ದೇಶನ ಶೈಲಿ ನೋಡಿ ಉಪೇಂದ್ರ ಸಹ ಬಹಳ ಖುಷಿಯಾಗಿದ್ದಾರೆ. ‘ಅನಿಮೇಶನ್ ಮೂಲಕ ಕಥೆ ಹೇಳುವುದನ್ನು ಹಾಲಿವುಡ್ ನಲ್ಲಿ ಮಾಡ್ತಾರೆ ಎಂದು ಕೇಳಿದ್ದೆ. ಕನ್ನಡದಲ್ಲಿ ಮೊದಲ ಬಾರಿಗೆ ಅದನ್ನು ಮಾಡಿ ತೋರಿಸಿದ್ದಾರೆ. ಅನಿಮೇಶನ್ ನಲ್ಲಿ ಅವರು ಏನು ತೋರಿಸಿದರೋ, ಚಿತ್ರ ಸಹ ಅದೇ ರೀತಿ ಮೂಡಿ ಬಂದಿದೆ. ಶಿವಣ್ಣ ಮತ್ತು ರಾಜ್ಬಿ ಶೆಟ್ಟಿ ಅವರ ಜೊತೆಗೆ ಕೆಲಸ ಮಾಡಿದ್ದು ಬಹಳ ಸಂತೋಷವಾಗಿದೆ’ ಎಂದರು
ಶಿವರಾಜಕುಮಾರ್, ಉಪೇಂದ್ರ, ರಾಜೇಶ್ ಬಿ ಶೆಟ್ಟಿಯವರನ್ನು ಬ್ರಹ್ಮ ವಿಷ್ಣು ಮಹೇಶ್ವರರಿಗೆ ಹೋಲಿಸುತ್ತಾರೆ ಅರ್ಜುನ್ ಜನ್ಯ. ‘ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಈ ಮೂವರು ಬ್ರಹ್ಮ ವಿಷ್ಣು ಮಹೇಶ್ವರರಿದ್ದ ಹಾಗೆ. ರಮೇಶ್ ರೆಡ್ಡಿ ಈ ಮೂವರನ್ನು ಇಟ್ಟುಕೊಂಡು ಒಂದು ದೇವಸ್ಥಾನ ಕಟ್ಟಿಸಿದ್ದಾರೆ. ಸತ್ಯ ಹೆಗಡೆ ಈ ದೇವಸ್ಥಾನದ ಪ್ರಧಾನ ಅರ್ಚಕರು. ಇವರೆಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ ಮುಂದೆ ಗ್ರಾಫಿಕ್ಸ್ ಕೆಲಸ ಪ್ರಾರಂಭವಾಗಲಿದೆ. ಚಿತ್ರ ಮುಗಿದ ಮೇಲೆ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗುವುದು’ ಎಂದು ಹೇಳಿದರು
‘45’ ಚಿತ್ರವನ್ನು ಸೂರಜ್ ಪ್ರೊಡಕ್ಷನ್ಸ್ ನಡಿ ಉಮಾ ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ, ರವಿವರ್ಮ ಸಾಹಸ ಇದೆ. ‘45’ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ, ಕೌಸ್ತುಭ ಮಣಿ ಮುಂತಾದವರು ನಟಿಸಿದ್ದಾರೆ
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…