ಮನರಂಜನೆ

ಬ್ರಹ್ಮ ವಿಷ್ಣು ಮಹೇಶ್ವರರಾದ ಶಿವಣ್ಣ ಉಪೇಂದ್ರ ಮತ್ತು ರಾಜ್ ಶೆಟ್ಟಿ

ಶಿವರಾಜಕುಮಾರ್,  ಉಪೇಂದ್ರ ಮತ್ತು ರಾಜ ಬಿ. ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಚಿತ್ರೀಕರಣ ಇದೀಗ ಸಂಪೂರ್ಣವಾಗಿದೆ ಕಳೆದ ವರ್ಷ ಜುಲೈನಲ್ಲಿ ಪ್ರಾರಂಭವಾದ ರಮೇಶ್ ರೆಡ್ಡಿ ನಿರ್ಮಾಣದ ಮತ್ತು ಅರ್ಜುನ್ ಜನ್ಯ ನಿರ್ದೇಶನದ ಈ ಚಿತ್ರವು ಹಲವು ಹಂತಗಳ ಚಿತ್ರೀಕರಣ ಮುಗಿಸಿ ಇದೀಗ ಕುಂಬಳಕಾಯಿ ಒಡೆಯಲಾಗಿದೆ.

ಈ ಚಿತ್ರದ ಕುರಿತು ಮಾತನಾಡುವ ಶಿವರಾಜಕುಮಾರ್, ‘ಇದೇ ಮೊದಲ ಬಾರಿಗೆ ನಾವು ಮೂವರು ಒಟ್ಟಿಗೆ ನಟಿಸಿದ್ದೇವೆ. ಎಲ್ಲರೂ ಸಮನಾದ ಪಾತ್ರಗಳಿವೆ. ಉಪೇಂದ್ರ ಅವರ ಜೊತೆ ನಟಿಸುವುದಕ್ಕೆ ನಾನು ಯಾವಾಗಲೂ ಸಿದ್ಧ. ರಾಜ್‍ ಬಿ. ಶೆಟ್ಟಿ ಜೊತೆ ಇದೆ ಮೊದಲ ಬಾರಿಗೆ ನಟಿಸಿದ್ದೇನೆ. ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ. ಹಾಗಂತ ಅವರ ಕೆಲಸ ನೋಡಿ ಅನಿಸುವುದಿಲ್ಲ. ಅಷ್ಟು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದಾರೆ. ಇಡೀ ಭಾರತೀಯ ಚಿತ್ರರಂಗವೇ ಮೆಚ್ಚುವಂತಹ ಒಂದು ಆಕ್ಷನ್ ಚಿತ್ರವಾಗಲಿದೆ’ ಎಂದರು

ಅರ್ಜುನ್ ಜನ್ಯ ಅವರ ನಿರ್ದೇಶನ ಶೈಲಿ ನೋಡಿ ಉಪೇಂದ್ರ ಸಹ ಬಹಳ ಖುಷಿಯಾಗಿದ್ದಾರೆ. ‘ಅನಿಮೇಶನ್ ಮೂಲಕ ಕಥೆ ಹೇಳುವುದನ್ನು ಹಾಲಿವುಡ್ ನಲ್ಲಿ ಮಾಡ್ತಾರೆ ಎಂದು ಕೇಳಿದ್ದೆ. ಕನ್ನಡದಲ್ಲಿ ಮೊದಲ ಬಾರಿಗೆ ಅದನ್ನು ಮಾಡಿ ತೋರಿಸಿದ್ದಾರೆ. ಅನಿಮೇಶನ್ ನಲ್ಲಿ ಅವರು ಏನು ತೋರಿಸಿದರೋ, ಚಿತ್ರ ಸಹ ಅದೇ ರೀತಿ ಮೂಡಿ ಬಂದಿದೆ. ಶಿವಣ್ಣ ಮತ್ತು ರಾಜ್ಬಿ ಶೆಟ್ಟಿ ಅವರ ಜೊತೆಗೆ ಕೆಲಸ ಮಾಡಿದ್ದು ಬಹಳ ಸಂತೋಷವಾಗಿದೆ’ ಎಂದರು

ಶಿವರಾಜಕುಮಾರ್, ಉಪೇಂದ್ರ, ರಾಜೇಶ್ ಬಿ ಶೆಟ್ಟಿಯವರನ್ನು ಬ್ರಹ್ಮ ವಿಷ್ಣು ಮಹೇಶ್ವರರಿಗೆ ಹೋಲಿಸುತ್ತಾರೆ ಅರ್ಜುನ್‍ ಜನ್ಯ. ‘ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಈ ಮೂವರು ಬ್ರಹ್ಮ ವಿಷ್ಣು ಮಹೇಶ್ವರರಿದ್ದ ಹಾಗೆ. ರಮೇಶ್ ರೆಡ್ಡಿ ಈ ಮೂವರನ್ನು ಇಟ್ಟುಕೊಂಡು ಒಂದು ದೇವಸ್ಥಾನ ಕಟ್ಟಿಸಿದ್ದಾರೆ. ಸತ್ಯ ಹೆಗಡೆ ಈ ದೇವಸ್ಥಾನದ ಪ್ರಧಾನ ಅರ್ಚಕರು. ಇವರೆಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ ಮುಂದೆ ಗ್ರಾಫಿಕ್ಸ್ ಕೆಲಸ ಪ್ರಾರಂಭವಾಗಲಿದೆ. ಚಿತ್ರ ಮುಗಿದ ಮೇಲೆ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗುವುದು’ ಎಂದು ಹೇಳಿದರು

‘45’ ಚಿತ್ರವನ್ನು ಸೂರಜ್ ಪ್ರೊಡಕ್ಷನ್ಸ್ ನಡಿ ಉಮಾ ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ, ರವಿವರ್ಮ ಸಾಹಸ ಇದೆ. ‘45’ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ, ರಾಜ್‍ ಬಿ ಶೆಟ್ಟಿ, ಕೌಸ್ತುಭ ಮಣಿ ಮುಂತಾದವರು ನಟಿಸಿದ್ದಾರೆ

ಭೂಮಿಕಾ

Recent Posts

ಶಂಕಿತ ಶೂಟರ್‌ನ ಚಿತ್ರ, ವಿಡಿಯೊ ಬಿಡುಗಡೆ ಮಾಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಗವಹಿಸಿದ್ದ ವೈಟ್‌ ಹೌಸ್‌ ಕರೆಸ್ಪಾಂಡೆಂಟ್ಸ್  ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ…

6 mins ago

ಟ್ರಂಪ್‌ ಭಾಗವಹಿಸಿದ್ದ ಡಿನ್ನರ್‌ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ : ಆಗಿದ್ದೇನು?

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಗವಹಿಸಿದ್ದ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ ನಡೆದಿದೆ. ಡೊನಾಲ್ಡ್ ಟ್ರಂಪ್,…

20 mins ago

ಆಂದೋಲನ ಹಾಡುಪಾಡು | ಸ್ಟೀಲು ಪ್ಲೇಟುಗಳ ಸಾಲ ಕೊಡುವ ಬ್ಯಾಂಕು

ಚಂದ್ರಶೇಖರ್ ಮೂರ್ತಿ ಕೆ.ಎಸ್. ಮೈಸೂರಿನಲ್ಲಿ ಅನೇಕ ಬ್ಯಾಂಕ್‌ಗಳಿವೆ. ಅವು ಹಣಕಾಸು ವ್ಯವಹಾರ ಮಾಡುವ ಬ್ಯಾಂಕ್. ಆದರೆ ಮೈಸೂರಿನ ಜೆ.ಪಿ.ನಗರದ ಅಕ್ಕಮಹಾದೇವಿ…

37 mins ago

ಆಂದೋಲನ ಹಾಡುಪಾಡು | ಹುಲಿಯ ಕಣ್ಣಿನಲ್ಲಿ ಕಂಡ ನನ್ನದೇ ಪ್ರತಿಬಿಂಬ

ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…

2 hours ago

ಅರಣ್ಯ ಸಿಬ್ಬಂದಿಗೆ ಇಲಾಖೆಯಿಂದ ಬೇಕಿದೆ ಪ್ರೋತ್ಸಾಹ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…

2 hours ago

ಹನೂರು | ಉಡುತೊರೆಹಳ್ಳ ಜಲಾಶಯದ ಹೂಳು ತೆಗೆಯದೆ ಸಮಸ್ಯೆ

ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…

2 hours ago