ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ ಬಿ. ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಚಿತ್ರೀಕರಣ ಇದೀಗ ಸಂಪೂರ್ಣವಾಗಿದೆ ಕಳೆದ ವರ್ಷ ಜುಲೈನಲ್ಲಿ ಪ್ರಾರಂಭವಾದ ರಮೇಶ್ ರೆಡ್ಡಿ ನಿರ್ಮಾಣದ ಮತ್ತು ಅರ್ಜುನ್ ಜನ್ಯ ನಿರ್ದೇಶನದ ಈ ಚಿತ್ರವು ಹಲವು ಹಂತಗಳ ಚಿತ್ರೀಕರಣ ಮುಗಿಸಿ ಇದೀಗ ಕುಂಬಳಕಾಯಿ ಒಡೆಯಲಾಗಿದೆ.
ಈ ಚಿತ್ರದ ಕುರಿತು ಮಾತನಾಡುವ ಶಿವರಾಜಕುಮಾರ್, ‘ಇದೇ ಮೊದಲ ಬಾರಿಗೆ ನಾವು ಮೂವರು ಒಟ್ಟಿಗೆ ನಟಿಸಿದ್ದೇವೆ. ಎಲ್ಲರೂ ಸಮನಾದ ಪಾತ್ರಗಳಿವೆ. ಉಪೇಂದ್ರ ಅವರ ಜೊತೆ ನಟಿಸುವುದಕ್ಕೆ ನಾನು ಯಾವಾಗಲೂ ಸಿದ್ಧ. ರಾಜ್ ಬಿ. ಶೆಟ್ಟಿ ಜೊತೆ ಇದೆ ಮೊದಲ ಬಾರಿಗೆ ನಟಿಸಿದ್ದೇನೆ. ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ. ಹಾಗಂತ ಅವರ ಕೆಲಸ ನೋಡಿ ಅನಿಸುವುದಿಲ್ಲ. ಅಷ್ಟು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದಾರೆ. ಇಡೀ ಭಾರತೀಯ ಚಿತ್ರರಂಗವೇ ಮೆಚ್ಚುವಂತಹ ಒಂದು ಆಕ್ಷನ್ ಚಿತ್ರವಾಗಲಿದೆ’ ಎಂದರು
ಅರ್ಜುನ್ ಜನ್ಯ ಅವರ ನಿರ್ದೇಶನ ಶೈಲಿ ನೋಡಿ ಉಪೇಂದ್ರ ಸಹ ಬಹಳ ಖುಷಿಯಾಗಿದ್ದಾರೆ. ‘ಅನಿಮೇಶನ್ ಮೂಲಕ ಕಥೆ ಹೇಳುವುದನ್ನು ಹಾಲಿವುಡ್ ನಲ್ಲಿ ಮಾಡ್ತಾರೆ ಎಂದು ಕೇಳಿದ್ದೆ. ಕನ್ನಡದಲ್ಲಿ ಮೊದಲ ಬಾರಿಗೆ ಅದನ್ನು ಮಾಡಿ ತೋರಿಸಿದ್ದಾರೆ. ಅನಿಮೇಶನ್ ನಲ್ಲಿ ಅವರು ಏನು ತೋರಿಸಿದರೋ, ಚಿತ್ರ ಸಹ ಅದೇ ರೀತಿ ಮೂಡಿ ಬಂದಿದೆ. ಶಿವಣ್ಣ ಮತ್ತು ರಾಜ್ಬಿ ಶೆಟ್ಟಿ ಅವರ ಜೊತೆಗೆ ಕೆಲಸ ಮಾಡಿದ್ದು ಬಹಳ ಸಂತೋಷವಾಗಿದೆ’ ಎಂದರು
ಶಿವರಾಜಕುಮಾರ್, ಉಪೇಂದ್ರ, ರಾಜೇಶ್ ಬಿ ಶೆಟ್ಟಿಯವರನ್ನು ಬ್ರಹ್ಮ ವಿಷ್ಣು ಮಹೇಶ್ವರರಿಗೆ ಹೋಲಿಸುತ್ತಾರೆ ಅರ್ಜುನ್ ಜನ್ಯ. ‘ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಈ ಮೂವರು ಬ್ರಹ್ಮ ವಿಷ್ಣು ಮಹೇಶ್ವರರಿದ್ದ ಹಾಗೆ. ರಮೇಶ್ ರೆಡ್ಡಿ ಈ ಮೂವರನ್ನು ಇಟ್ಟುಕೊಂಡು ಒಂದು ದೇವಸ್ಥಾನ ಕಟ್ಟಿಸಿದ್ದಾರೆ. ಸತ್ಯ ಹೆಗಡೆ ಈ ದೇವಸ್ಥಾನದ ಪ್ರಧಾನ ಅರ್ಚಕರು. ಇವರೆಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ ಮುಂದೆ ಗ್ರಾಫಿಕ್ಸ್ ಕೆಲಸ ಪ್ರಾರಂಭವಾಗಲಿದೆ. ಚಿತ್ರ ಮುಗಿದ ಮೇಲೆ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗುವುದು’ ಎಂದು ಹೇಳಿದರು
‘45’ ಚಿತ್ರವನ್ನು ಸೂರಜ್ ಪ್ರೊಡಕ್ಷನ್ಸ್ ನಡಿ ಉಮಾ ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ, ರವಿವರ್ಮ ಸಾಹಸ ಇದೆ. ‘45’ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ, ಕೌಸ್ತುಭ ಮಣಿ ಮುಂತಾದವರು ನಟಿಸಿದ್ದಾರೆ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…