ಮನರಂಜನೆ

ಕುಮಾರ್‌ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಿದ ಶಿವಣ್ಣ ಅಭಿಮಾನಿಗಳು

ಬೆಂಗಳೂರು: 18ನೇ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಸೋಲು ಕಂಡಿದ್ದ ಸ್ಯಾಂಡಲ್‌ವುಡ್‌ ದೊಡ್ಮನೆ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಕುಮಾರ ಬಂಗಾರಪ್ಪ ವಿರುದ್ಧ ಕರುನಾಡ ಚಕ್ರವರ್ತಿ ಶಿವರಾಜ್‌ ಕುಮಾರ್‌ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿ ನಾಯಕ ಕುಮಾರ್‌ ಬಂಗಾರಪ್ಪ ಅವರ ಸದಾಶಿವ ನಗರದ ಮನೆಗೆ ಶಿವರಾಜ್‌ ಕುಮಾರ್‌ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ. ಕುಮಾರ್‌ ಬಂಗಾರಪ್ಪ ಅವರ ಪೋಸ್ಟ್‌ನಲ್ಲಿ ರಾಜ್‌ಕುಮಾರ್‌, ಶಿವರಾಜ್‌ ಕುಮಾರ್‌ ಬಗ್ಗೆ ಬಹಳ ಲಘುವಾಗಿ ಮಾತನಾಡಿದ್ದಾರೆ. ಅವರನ್ನು ಹೊರಗೆ ಕರೆಸಿ ಬಹಿರಂಗ ಕ್ಷಮೆ ಕೇಳಿಸಬೇಕು ಎಂದು ಶಿವಣ್ಣ ಅಭಿಮಾನಿಗಳು ಒತ್ತಾಯಿಸಿದರು. ಕುಮಾರ್‌ ಬಂಗಾರಪ್ಪ ಮನೆಗೆ ನುಗ್ಗಿ ದಾಂದಲೆ ನಡೆಸಿದ ಕಾರಣಕ್ಕಾಗಿ ಪೊಲೀಸರು ಕೆಲವರನ್ನು ಬಂಧಿಸಿದರು.

ಕುಮಾರ್‌ ಬಂಗಾರಪ್ಪ ಪೋಸ್ಟ್‌ನಲ್ಲೇನಿದೆ?

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸೋತ ಗೀತಾ ಶಿವರಾಜ್‌ ಕುಮಾರ್‌ ಹಾಗೂ ಮಧು ಬಂಗಾರಪ್ಪರನ್ನು ಅಣಕಿಸುವ ರೂಪದಲ್ಲಿ ನಟ ಶಿವರಾಜ್‌ ಕುಮಾರ್‌ ವಿರುದ್ಧ ವ್ಯಂಗ್ಯವಾಡಿದ್ದರು. “ಶಿವರಾಜ್‌ ಕುಮಾರ್‌ ನಿರುದ್ಯೋಗಿ ಆಗಬೇಕಾಗಿಲ್ಲ. ನಮ್ಮೂರ ಜಾತ್ರೆಯಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಬಹುದು. ನನ್ನ ತಂಗಿ ಸಿನಿಮಾ ಡಾನ್‌ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ. ದೊಡ್ಮನೆಯ ವ್ಯವಹಾರ ಸಾಕಷ್ಟಿರುತ್ತದೆ. ಬೇರೆಯವರಿಗೆ ಅವಕಾಶ ಸಿಗುವುದಿಲ್ಲ.

ಹೆದರಿಸುವ ಬೆದರಿಸುವ, ಹುಷಾರ್‌ ಎನ್ನುವ ಮಾತುಗಳೇನಿದ್ದರೂ ಗಂಟಲೊಳಗೇ, ನಾಲ್ಕು ಗೋಡೆಗಳ ಮಧ್ಯೆಯೇ, ತಮ್ಮ ಪಟಾಲಂ ಮುಂದೆ ಮಾತ್ರವೇ ಸೀಮಿತವಾಗಿರಬೇಕು. ದಿಕ್ಕು ಕೆಟ್ಟು ದಿಕ್ಕಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು” ಎಂದು ಬರೆದುಕೊಂಡಿದ್ದರು. ಇದು ಶಿವಣ್ಣ ಹಾಗೂ ದೊಡ್ಮನೆ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

24 mins ago

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

2 hours ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

2 hours ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

3 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

3 hours ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago