ಮನರಂಜನೆ

ಕುಮಾರ್‌ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಿದ ಶಿವಣ್ಣ ಅಭಿಮಾನಿಗಳು

ಬೆಂಗಳೂರು: 18ನೇ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಸೋಲು ಕಂಡಿದ್ದ ಸ್ಯಾಂಡಲ್‌ವುಡ್‌ ದೊಡ್ಮನೆ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಕುಮಾರ ಬಂಗಾರಪ್ಪ ವಿರುದ್ಧ ಕರುನಾಡ ಚಕ್ರವರ್ತಿ ಶಿವರಾಜ್‌ ಕುಮಾರ್‌ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿ ನಾಯಕ ಕುಮಾರ್‌ ಬಂಗಾರಪ್ಪ ಅವರ ಸದಾಶಿವ ನಗರದ ಮನೆಗೆ ಶಿವರಾಜ್‌ ಕುಮಾರ್‌ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ. ಕುಮಾರ್‌ ಬಂಗಾರಪ್ಪ ಅವರ ಪೋಸ್ಟ್‌ನಲ್ಲಿ ರಾಜ್‌ಕುಮಾರ್‌, ಶಿವರಾಜ್‌ ಕುಮಾರ್‌ ಬಗ್ಗೆ ಬಹಳ ಲಘುವಾಗಿ ಮಾತನಾಡಿದ್ದಾರೆ. ಅವರನ್ನು ಹೊರಗೆ ಕರೆಸಿ ಬಹಿರಂಗ ಕ್ಷಮೆ ಕೇಳಿಸಬೇಕು ಎಂದು ಶಿವಣ್ಣ ಅಭಿಮಾನಿಗಳು ಒತ್ತಾಯಿಸಿದರು. ಕುಮಾರ್‌ ಬಂಗಾರಪ್ಪ ಮನೆಗೆ ನುಗ್ಗಿ ದಾಂದಲೆ ನಡೆಸಿದ ಕಾರಣಕ್ಕಾಗಿ ಪೊಲೀಸರು ಕೆಲವರನ್ನು ಬಂಧಿಸಿದರು.

ಕುಮಾರ್‌ ಬಂಗಾರಪ್ಪ ಪೋಸ್ಟ್‌ನಲ್ಲೇನಿದೆ?

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸೋತ ಗೀತಾ ಶಿವರಾಜ್‌ ಕುಮಾರ್‌ ಹಾಗೂ ಮಧು ಬಂಗಾರಪ್ಪರನ್ನು ಅಣಕಿಸುವ ರೂಪದಲ್ಲಿ ನಟ ಶಿವರಾಜ್‌ ಕುಮಾರ್‌ ವಿರುದ್ಧ ವ್ಯಂಗ್ಯವಾಡಿದ್ದರು. “ಶಿವರಾಜ್‌ ಕುಮಾರ್‌ ನಿರುದ್ಯೋಗಿ ಆಗಬೇಕಾಗಿಲ್ಲ. ನಮ್ಮೂರ ಜಾತ್ರೆಯಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಬಹುದು. ನನ್ನ ತಂಗಿ ಸಿನಿಮಾ ಡಾನ್‌ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ. ದೊಡ್ಮನೆಯ ವ್ಯವಹಾರ ಸಾಕಷ್ಟಿರುತ್ತದೆ. ಬೇರೆಯವರಿಗೆ ಅವಕಾಶ ಸಿಗುವುದಿಲ್ಲ.

ಹೆದರಿಸುವ ಬೆದರಿಸುವ, ಹುಷಾರ್‌ ಎನ್ನುವ ಮಾತುಗಳೇನಿದ್ದರೂ ಗಂಟಲೊಳಗೇ, ನಾಲ್ಕು ಗೋಡೆಗಳ ಮಧ್ಯೆಯೇ, ತಮ್ಮ ಪಟಾಲಂ ಮುಂದೆ ಮಾತ್ರವೇ ಸೀಮಿತವಾಗಿರಬೇಕು. ದಿಕ್ಕು ಕೆಟ್ಟು ದಿಕ್ಕಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು” ಎಂದು ಬರೆದುಕೊಂಡಿದ್ದರು. ಇದು ಶಿವಣ್ಣ ಹಾಗೂ ದೊಡ್ಮನೆ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

7 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

8 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

8 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

14 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

14 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

14 hours ago