ಮನರಂಜನೆ

ಕುಮಾರ್‌ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಿದ ಶಿವಣ್ಣ ಅಭಿಮಾನಿಗಳು

ಬೆಂಗಳೂರು: 18ನೇ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಸೋಲು ಕಂಡಿದ್ದ ಸ್ಯಾಂಡಲ್‌ವುಡ್‌ ದೊಡ್ಮನೆ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಕುಮಾರ ಬಂಗಾರಪ್ಪ ವಿರುದ್ಧ ಕರುನಾಡ ಚಕ್ರವರ್ತಿ ಶಿವರಾಜ್‌ ಕುಮಾರ್‌ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿ ನಾಯಕ ಕುಮಾರ್‌ ಬಂಗಾರಪ್ಪ ಅವರ ಸದಾಶಿವ ನಗರದ ಮನೆಗೆ ಶಿವರಾಜ್‌ ಕುಮಾರ್‌ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ. ಕುಮಾರ್‌ ಬಂಗಾರಪ್ಪ ಅವರ ಪೋಸ್ಟ್‌ನಲ್ಲಿ ರಾಜ್‌ಕುಮಾರ್‌, ಶಿವರಾಜ್‌ ಕುಮಾರ್‌ ಬಗ್ಗೆ ಬಹಳ ಲಘುವಾಗಿ ಮಾತನಾಡಿದ್ದಾರೆ. ಅವರನ್ನು ಹೊರಗೆ ಕರೆಸಿ ಬಹಿರಂಗ ಕ್ಷಮೆ ಕೇಳಿಸಬೇಕು ಎಂದು ಶಿವಣ್ಣ ಅಭಿಮಾನಿಗಳು ಒತ್ತಾಯಿಸಿದರು. ಕುಮಾರ್‌ ಬಂಗಾರಪ್ಪ ಮನೆಗೆ ನುಗ್ಗಿ ದಾಂದಲೆ ನಡೆಸಿದ ಕಾರಣಕ್ಕಾಗಿ ಪೊಲೀಸರು ಕೆಲವರನ್ನು ಬಂಧಿಸಿದರು.

ಕುಮಾರ್‌ ಬಂಗಾರಪ್ಪ ಪೋಸ್ಟ್‌ನಲ್ಲೇನಿದೆ?

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸೋತ ಗೀತಾ ಶಿವರಾಜ್‌ ಕುಮಾರ್‌ ಹಾಗೂ ಮಧು ಬಂಗಾರಪ್ಪರನ್ನು ಅಣಕಿಸುವ ರೂಪದಲ್ಲಿ ನಟ ಶಿವರಾಜ್‌ ಕುಮಾರ್‌ ವಿರುದ್ಧ ವ್ಯಂಗ್ಯವಾಡಿದ್ದರು. “ಶಿವರಾಜ್‌ ಕುಮಾರ್‌ ನಿರುದ್ಯೋಗಿ ಆಗಬೇಕಾಗಿಲ್ಲ. ನಮ್ಮೂರ ಜಾತ್ರೆಯಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಬಹುದು. ನನ್ನ ತಂಗಿ ಸಿನಿಮಾ ಡಾನ್‌ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ. ದೊಡ್ಮನೆಯ ವ್ಯವಹಾರ ಸಾಕಷ್ಟಿರುತ್ತದೆ. ಬೇರೆಯವರಿಗೆ ಅವಕಾಶ ಸಿಗುವುದಿಲ್ಲ.

ಹೆದರಿಸುವ ಬೆದರಿಸುವ, ಹುಷಾರ್‌ ಎನ್ನುವ ಮಾತುಗಳೇನಿದ್ದರೂ ಗಂಟಲೊಳಗೇ, ನಾಲ್ಕು ಗೋಡೆಗಳ ಮಧ್ಯೆಯೇ, ತಮ್ಮ ಪಟಾಲಂ ಮುಂದೆ ಮಾತ್ರವೇ ಸೀಮಿತವಾಗಿರಬೇಕು. ದಿಕ್ಕು ಕೆಟ್ಟು ದಿಕ್ಕಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು” ಎಂದು ಬರೆದುಕೊಂಡಿದ್ದರು. ಇದು ಶಿವಣ್ಣ ಹಾಗೂ ದೊಡ್ಮನೆ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

22 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

24 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

26 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

28 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

32 mins ago