ಮನರಂಜನೆ

ಲೀಡರ್‌ ಅಂದರೆ ಸಾವಿರ ಜನ ಹಿಂದೆ ಬರೋದಲ್ಲ ಎಂದ ಶಿವರಾಜಕುಮಾರ್‌

ಲೀಡರ್‌ ಎಂದರೆ ಅವನು ಮುಂದೆ ಇದ್ದು, ಸಾವಿರ ಜನ ಹಿಂದಿರುವುದಲ್ಲ. ಸಾವಿರ ಜನರ ಮಧ್ಯೆ ಇರೋನೇ ಲೀಡರ್‌ ಎಂದು ನಟ ಶಿವರಾಜಕುಮಾರ್‌ ಹೇಳಿದ್ದಾರೆ.

ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್‍ 27), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕನ್ನಡ ಚಿತ್ರರಂಗದ ಸದಸ್ಯರು ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್, ಶಿವರಾಜಕುಮಾರ್, ಧ್ರುವ ಸರ್ಜಾ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ನಾಯಕತ್ವದ ಕುರಿತು ಪ್ರಶ್ನೆ ಬಂತು. ಹಿಂದೆ ಡಾ. ರಾಜಕುಮಾರ್‌ ಚಿತ್ರರಂಗವನ್ನು ಸಮರ್ಥವಾಗಿ ಮುನ್ನಡೆಸಿದ್ದರು. ಆದರೆ, ಈಗ ಚಿತ್ರರಂಗದಲ್ಲಿ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ ಎಂಬ ಮಾತಿಗೆ ಉತ್ತರಿಸಿದ ಅವರು, ‘ಇಲ್ಲಿ ಲೀಡ್‍ ವಿಷಯ ಬರುವುದಿಲ್ಲ. ಎಲ್ಲರೂ ಭಾಗವಹಿಸಬೇಕು ಅಷ್ಟೇ. ನಾವು ಇದ್ದೇ ಇದ್ದೀವಿ. ಯುವಕರು ಸಹ ಬರಬೇಕು. ನಾನೊಬ್ಬ ಮುಂದೆ ಹೋಗುತ್ತೇನೆ, ಎಲ್ಲರೂ ಹಿಂದೆ ಬನ್ನಿ ಎನ್ನುವುದು ತಪ್ಪಾಗುತ್ತದೆ. ಹಿಂದೆ ಬರುವ ಕಾಲ ಹೊರಟು ಹೋಯಿತು. ಹಿಂದೆ ಬರುವುದು ಮುಖ್ಯವಲ್ಲ. ಲೀಡರ್‍ ಎಂದರೆ ಅವನು ಮುಂದೆ ಇದ್ದು, ಸಾವಿರ ಜನ ಹಿಂದಿರುವುದಲ್ಲ. ಸಾವಿರ ಜನರ ಮಧ್ಯೆ ಇರೋನೇ ಲೀಡರ್‍. ಆಗ ಪ್ರತಿಯೊಬ್ಬರೂ ಲೀಡರ್‌ ಆಗಿರುವ ಫೀಲ್‍ ಮಾಡುತ್ತಾರೆ. ಆಗ ಸಮಸ್ಯೆ ಬಗೆಹರಿಯುತ್ತದೆ’ ಎಂದರು.

ಚಿತ್ರರಂಗದ ಸದ್ಯದ ಸ್ಥಿತಿಗತಿಯ ಬಗ್ಗೆ ಮತ್ತು ಚಿತ್ರರಂಗ ಎದುರಿಸುತ್ತಿರುವ ಸವಾಲುಗಳ ಕುರಿತು ಮಾತನಾಡಿರುವ ಅವರು, ‘ಕೆಲವು ಸಮಯ-ಸಂದರ್ಭಗಳಲ್ಲಿ ಏನೂ ಮಾಡುವುದಕ್ಕೆ ಸಾಧ್ಯವಿಲ್ಲ. ಅದರಲ್ಲಿ ಯಾರದ್ದು ತಪ್ಪು, ಯಾರದ್ದು ಸರಿ ಎಂದು ಹೇಳುವುದು ಕಷ್ಟ. ಇಂಥ ಸಂದರ್ಭಗಳು ಬರುತ್ತವೆ, ಹೋಗುತ್ತವೆ. ಬಂದಾಗ ಅದನ್ನು ಎದುರಿಸದೇ ಬೇರೆ ದಾರಿ ಇಲ್ಲ. ಅದನ್ನು ಸರಿಯಾದ ರೀತಿಯಲ್ಲಿ ಎದುರಿಸಬೇಕು. ನೀವು ಸರಿಯಾಗಿ ಯೋಚಿಸಿ, ಹೆಜ್ಜೆ ಇಡಬೇಕು. ಅವಸರಪಟ್ಟು ತಪ್ಪು ಹೆಜ್ಜೆ ಇಡಬಾರದು. ಕಲೆ ಎನ್ನುವುದು ಬರೀ ಕನ್ನಡಕ್ಕೆ ಮಾತ್ರ ಸೀಮಿತವಲ್ಲ. ಬೇರೆ ಭಾಷೆಗಳೂ ಇವೆ. ಅವೆಲ್ಲವನ್ನೂ ಒಗ್ಗೂಡಿಸಿಕೊಂಡು ನಾವು ಹೆಜ್ಜೆ ಇಡಬೇಕು’ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

1 min ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

40 mins ago

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

2 hours ago

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

3 hours ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

3 hours ago