ಲೀಡರ್ ಎಂದರೆ ಅವನು ಮುಂದೆ ಇದ್ದು, ಸಾವಿರ ಜನ ಹಿಂದಿರುವುದಲ್ಲ. ಸಾವಿರ ಜನರ ಮಧ್ಯೆ ಇರೋನೇ ಲೀಡರ್ ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ.
ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್ 27), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕನ್ನಡ ಚಿತ್ರರಂಗದ ಸದಸ್ಯರು ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್, ಶಿವರಾಜಕುಮಾರ್, ಧ್ರುವ ಸರ್ಜಾ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ನಾಯಕತ್ವದ ಕುರಿತು ಪ್ರಶ್ನೆ ಬಂತು. ಹಿಂದೆ ಡಾ. ರಾಜಕುಮಾರ್ ಚಿತ್ರರಂಗವನ್ನು ಸಮರ್ಥವಾಗಿ ಮುನ್ನಡೆಸಿದ್ದರು. ಆದರೆ, ಈಗ ಚಿತ್ರರಂಗದಲ್ಲಿ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ ಎಂಬ ಮಾತಿಗೆ ಉತ್ತರಿಸಿದ ಅವರು, ‘ಇಲ್ಲಿ ಲೀಡ್ ವಿಷಯ ಬರುವುದಿಲ್ಲ. ಎಲ್ಲರೂ ಭಾಗವಹಿಸಬೇಕು ಅಷ್ಟೇ. ನಾವು ಇದ್ದೇ ಇದ್ದೀವಿ. ಯುವಕರು ಸಹ ಬರಬೇಕು. ನಾನೊಬ್ಬ ಮುಂದೆ ಹೋಗುತ್ತೇನೆ, ಎಲ್ಲರೂ ಹಿಂದೆ ಬನ್ನಿ ಎನ್ನುವುದು ತಪ್ಪಾಗುತ್ತದೆ. ಹಿಂದೆ ಬರುವ ಕಾಲ ಹೊರಟು ಹೋಯಿತು. ಹಿಂದೆ ಬರುವುದು ಮುಖ್ಯವಲ್ಲ. ಲೀಡರ್ ಎಂದರೆ ಅವನು ಮುಂದೆ ಇದ್ದು, ಸಾವಿರ ಜನ ಹಿಂದಿರುವುದಲ್ಲ. ಸಾವಿರ ಜನರ ಮಧ್ಯೆ ಇರೋನೇ ಲೀಡರ್. ಆಗ ಪ್ರತಿಯೊಬ್ಬರೂ ಲೀಡರ್ ಆಗಿರುವ ಫೀಲ್ ಮಾಡುತ್ತಾರೆ. ಆಗ ಸಮಸ್ಯೆ ಬಗೆಹರಿಯುತ್ತದೆ’ ಎಂದರು.
ಚಿತ್ರರಂಗದ ಸದ್ಯದ ಸ್ಥಿತಿಗತಿಯ ಬಗ್ಗೆ ಮತ್ತು ಚಿತ್ರರಂಗ ಎದುರಿಸುತ್ತಿರುವ ಸವಾಲುಗಳ ಕುರಿತು ಮಾತನಾಡಿರುವ ಅವರು, ‘ಕೆಲವು ಸಮಯ-ಸಂದರ್ಭಗಳಲ್ಲಿ ಏನೂ ಮಾಡುವುದಕ್ಕೆ ಸಾಧ್ಯವಿಲ್ಲ. ಅದರಲ್ಲಿ ಯಾರದ್ದು ತಪ್ಪು, ಯಾರದ್ದು ಸರಿ ಎಂದು ಹೇಳುವುದು ಕಷ್ಟ. ಇಂಥ ಸಂದರ್ಭಗಳು ಬರುತ್ತವೆ, ಹೋಗುತ್ತವೆ. ಬಂದಾಗ ಅದನ್ನು ಎದುರಿಸದೇ ಬೇರೆ ದಾರಿ ಇಲ್ಲ. ಅದನ್ನು ಸರಿಯಾದ ರೀತಿಯಲ್ಲಿ ಎದುರಿಸಬೇಕು. ನೀವು ಸರಿಯಾಗಿ ಯೋಚಿಸಿ, ಹೆಜ್ಜೆ ಇಡಬೇಕು. ಅವಸರಪಟ್ಟು ತಪ್ಪು ಹೆಜ್ಜೆ ಇಡಬಾರದು. ಕಲೆ ಎನ್ನುವುದು ಬರೀ ಕನ್ನಡಕ್ಕೆ ಮಾತ್ರ ಸೀಮಿತವಲ್ಲ. ಬೇರೆ ಭಾಷೆಗಳೂ ಇವೆ. ಅವೆಲ್ಲವನ್ನೂ ಒಗ್ಗೂಡಿಸಿಕೊಂಡು ನಾವು ಹೆಜ್ಜೆ ಇಡಬೇಕು’ ಎಂದು ಹೇಳಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…