ಮನರಂಜನೆ

ಲೀಡರ್‌ ಅಂದರೆ ಸಾವಿರ ಜನ ಹಿಂದೆ ಬರೋದಲ್ಲ ಎಂದ ಶಿವರಾಜಕುಮಾರ್‌

ಲೀಡರ್‌ ಎಂದರೆ ಅವನು ಮುಂದೆ ಇದ್ದು, ಸಾವಿರ ಜನ ಹಿಂದಿರುವುದಲ್ಲ. ಸಾವಿರ ಜನರ ಮಧ್ಯೆ ಇರೋನೇ ಲೀಡರ್‌ ಎಂದು ನಟ ಶಿವರಾಜಕುಮಾರ್‌ ಹೇಳಿದ್ದಾರೆ.

ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್‍ 27), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕನ್ನಡ ಚಿತ್ರರಂಗದ ಸದಸ್ಯರು ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್, ಶಿವರಾಜಕುಮಾರ್, ಧ್ರುವ ಸರ್ಜಾ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ನಾಯಕತ್ವದ ಕುರಿತು ಪ್ರಶ್ನೆ ಬಂತು. ಹಿಂದೆ ಡಾ. ರಾಜಕುಮಾರ್‌ ಚಿತ್ರರಂಗವನ್ನು ಸಮರ್ಥವಾಗಿ ಮುನ್ನಡೆಸಿದ್ದರು. ಆದರೆ, ಈಗ ಚಿತ್ರರಂಗದಲ್ಲಿ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ ಎಂಬ ಮಾತಿಗೆ ಉತ್ತರಿಸಿದ ಅವರು, ‘ಇಲ್ಲಿ ಲೀಡ್‍ ವಿಷಯ ಬರುವುದಿಲ್ಲ. ಎಲ್ಲರೂ ಭಾಗವಹಿಸಬೇಕು ಅಷ್ಟೇ. ನಾವು ಇದ್ದೇ ಇದ್ದೀವಿ. ಯುವಕರು ಸಹ ಬರಬೇಕು. ನಾನೊಬ್ಬ ಮುಂದೆ ಹೋಗುತ್ತೇನೆ, ಎಲ್ಲರೂ ಹಿಂದೆ ಬನ್ನಿ ಎನ್ನುವುದು ತಪ್ಪಾಗುತ್ತದೆ. ಹಿಂದೆ ಬರುವ ಕಾಲ ಹೊರಟು ಹೋಯಿತು. ಹಿಂದೆ ಬರುವುದು ಮುಖ್ಯವಲ್ಲ. ಲೀಡರ್‍ ಎಂದರೆ ಅವನು ಮುಂದೆ ಇದ್ದು, ಸಾವಿರ ಜನ ಹಿಂದಿರುವುದಲ್ಲ. ಸಾವಿರ ಜನರ ಮಧ್ಯೆ ಇರೋನೇ ಲೀಡರ್‍. ಆಗ ಪ್ರತಿಯೊಬ್ಬರೂ ಲೀಡರ್‌ ಆಗಿರುವ ಫೀಲ್‍ ಮಾಡುತ್ತಾರೆ. ಆಗ ಸಮಸ್ಯೆ ಬಗೆಹರಿಯುತ್ತದೆ’ ಎಂದರು.

ಚಿತ್ರರಂಗದ ಸದ್ಯದ ಸ್ಥಿತಿಗತಿಯ ಬಗ್ಗೆ ಮತ್ತು ಚಿತ್ರರಂಗ ಎದುರಿಸುತ್ತಿರುವ ಸವಾಲುಗಳ ಕುರಿತು ಮಾತನಾಡಿರುವ ಅವರು, ‘ಕೆಲವು ಸಮಯ-ಸಂದರ್ಭಗಳಲ್ಲಿ ಏನೂ ಮಾಡುವುದಕ್ಕೆ ಸಾಧ್ಯವಿಲ್ಲ. ಅದರಲ್ಲಿ ಯಾರದ್ದು ತಪ್ಪು, ಯಾರದ್ದು ಸರಿ ಎಂದು ಹೇಳುವುದು ಕಷ್ಟ. ಇಂಥ ಸಂದರ್ಭಗಳು ಬರುತ್ತವೆ, ಹೋಗುತ್ತವೆ. ಬಂದಾಗ ಅದನ್ನು ಎದುರಿಸದೇ ಬೇರೆ ದಾರಿ ಇಲ್ಲ. ಅದನ್ನು ಸರಿಯಾದ ರೀತಿಯಲ್ಲಿ ಎದುರಿಸಬೇಕು. ನೀವು ಸರಿಯಾಗಿ ಯೋಚಿಸಿ, ಹೆಜ್ಜೆ ಇಡಬೇಕು. ಅವಸರಪಟ್ಟು ತಪ್ಪು ಹೆಜ್ಜೆ ಇಡಬಾರದು. ಕಲೆ ಎನ್ನುವುದು ಬರೀ ಕನ್ನಡಕ್ಕೆ ಮಾತ್ರ ಸೀಮಿತವಲ್ಲ. ಬೇರೆ ಭಾಷೆಗಳೂ ಇವೆ. ಅವೆಲ್ಲವನ್ನೂ ಒಗ್ಗೂಡಿಸಿಕೊಂಡು ನಾವು ಹೆಜ್ಜೆ ಇಡಬೇಕು’ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ: ತಂಬಾಕು ನಾಟಿ ಕಾರ್ಯ ಚುರುಕು

ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ  ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ…

2 hours ago

ಬಾಲ್ಯವನ್ನು ನೆನಪಿಸಿದ ಗುರು-ಶಿಷ್ಯರ ಸ್ನೇಹ ಸಮ್ಮಿಲನ

ಎಸ್.ಎ.ಹುಸೇನ್ ಡಿ.ಚೆನ್ನಮ್ಮ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಕಣ್ಣಾಲಿಗಳನ್ನು ಒದ್ದೆಯಾಗಿಸಿದ ಗುರು-ಶಿಷ್ಯರ ಬಾಂಧವ್ಯ ಮಡಿಕೇರಿ: ಕಾಲ ಚಕ್ರ ಉರುಳುತ್ತಾ ಸಾಗುತ್ತದೆ, ತಲೆಗೂದಲು…

2 hours ago

ಹೆದ್ದಾರಿಯಲ್ಲಿ ಮನಸ್ಸಿಗೆ ಮುದ ನೀಡುತ್ತಿರುವ ಕೆಂಬಣ್ಣದ ಹೂಗಳ ಚಿತ್ತಾರ!

ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ  ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ…

2 hours ago

ಪಾರಂಪರಿಕ ಕಟ್ಟಡ ತತ್ತರ; ನಿರ್ವಹಣೆಗಿಲ್ಲ ಸ್ಪಷ್ಟ ಉತ್ತರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ…

2 hours ago

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

13 hours ago