ಮನರಂಜನೆ

ಶಿವರಾಜಕುಮಾರ್‌, ಧನಂಜಯ್‍ ಹೊಸ ಚಿತ್ರಕ್ಕೆ ಹೇಮಂತ್ ರಾವ್ ನಿರ್ದೇಶನ

ಧನಂಜಯ್‍ ಅಭಿನಯದಲ್ಲಿ ಹೇಮಂತ್‍ ರಾವ್‍ ಒಂದು ಚಿತ್ರ ನಿರ್ದೇಶಿಸುವ ಸಾಧ್ಯತೆ ಇದೆ, ಅದರಲ್ಲಿ ಶಿವರಾಜಕುಮಾರ್‌ ಸಹ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ಅದು ನಿಜವಾಗಿದೆ. ಗುರುವಾರ ಚಿತ್ರದ ಘೋಷಣೆಯಾಗಿದ್ದು, ಚಿತ್ರಕ್ಕೆ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಎಂದು ಹೆಸರಿಡಲಾಗಿದೆ.

ಈ ಚಿತ್ರವನ್ನು ಡಾ. ವೈಶಾಖ್ ಜೆ. ಗೌಡ ಅವರು ವೈಶಾಖ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರಲಿದೆ. ಹೇಮಂತ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಕೆಲಸ ಮಾಡಿದ್ದ ತಾಂತ್ರಿಕ ತಂಡವೇ ಇಲ್ಲೂ ಮುಂದುವರೆದಿದ್ದು, ಚರಣ್ ರಾಜ್ ಸಂಗೀತ ಸಂಯೋಜನೆ ಹಾಗೂ ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಶಿವರಾಜಕುಮಾರ್‌ ಅಭಿನಯದಲ್ಲಿ ‘ಭೈರವನ ಕೊನೆಯ ಪಾಠ’ ಎಂಬ ಚಿತ್ರವನ್ನು ಹೇಮಂತ್‍ ನಿರ್ದೇಶಿಸಬೇಕಿತ್ತು. ಈ ಚಿತ್ರದಲ್ಲಿ ಶಿವರಾಜಕುಮಾರ್‌ ಅವರ ಮೊದಲ ನೋಟದ ಪೋಸ್ಟರ್‌ ಸಹ ಬಿಡುಗಡೆ ಆಗಿತ್ತು. ಆದರೆ, ಶಿವರಾಜಕುಮರ್‌ ಅವರ ಅನಾರೋಗ್ಯದಿಂದ ಚಿತ್ರ ಸ್ವಲ್ಪ ಮುಂದಕ್ಕೆ ಹೋಗಿದೆ. ಅದಕ್ಕೂ ಮೊದಲು ಇನ್ನೊಂದು ಹೊಸ ಚಿತ್ರವನ್ನು ಹೇಮಂತ್‍ ಘೋಷಿಸಿದ್ದಾರೆ.

‘ಭೈರವನ ಕೊನೆಯ ಪಾಠ’ ಚಿತ್ರವನ್ನು ಡಾ. ವೈಶಾಖ್ ಜೆ. ಗೌಡ ನಿರ್ಮಿಸಬೇಕಿತ್ತು. ಅದು ಮುಂದೆ ಹೋದ ಕಾರಣ, ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರವನ್ನು ಅವರೇ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಧನಂಜಯ್ ಪ್ರಮುಖ ಪಾತ್ರ ವಹಿಸುತ್ತಿದ್ದು, ಶಿವರಾಜಕುಮಾರ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಶಿವರಾಜಕುಮಾರ್‌ ಅಭಿನಯದ ಮೊದಲ ಚಿತ್ರ ‘ಆನಂದ್‍’ ಬಿಡುಗಡೆಯಾಗಿ ಗುರುವಾರಕ್ಕೆ (ಜೂನ್‍ 19) 39 ವರ್ಷ ಮುಗಿದು, 40ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿದೆ. ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಿದ್ದಾರೆ ಎಂಬ ವಿಷಯವನ್ನು ಇನ್ನಷ್ಟೇ ಹೊರಬೀಳಬೇಕಿದೆ.

ಚಿತ್ರದ ಟೈಟಲ್‌ ಅನೌನ್ಸ್‌ಮೆಂಟ್‌ ಹೀಗಿದೆ..

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

8 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

9 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

10 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

11 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

11 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

11 hours ago