ಧನಂಜಯ್ ಅಭಿನಯದಲ್ಲಿ ಹೇಮಂತ್ ರಾವ್ ಒಂದು ಚಿತ್ರ ನಿರ್ದೇಶಿಸುವ ಸಾಧ್ಯತೆ ಇದೆ, ಅದರಲ್ಲಿ ಶಿವರಾಜಕುಮಾರ್ ಸಹ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ಅದು ನಿಜವಾಗಿದೆ. ಗುರುವಾರ ಚಿತ್ರದ ಘೋಷಣೆಯಾಗಿದ್ದು, ಚಿತ್ರಕ್ಕೆ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಎಂದು ಹೆಸರಿಡಲಾಗಿದೆ.
ಈ ಚಿತ್ರವನ್ನು ಡಾ. ವೈಶಾಖ್ ಜೆ. ಗೌಡ ಅವರು ವೈಶಾಖ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರಲಿದೆ. ಹೇಮಂತ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಕೆಲಸ ಮಾಡಿದ್ದ ತಾಂತ್ರಿಕ ತಂಡವೇ ಇಲ್ಲೂ ಮುಂದುವರೆದಿದ್ದು, ಚರಣ್ ರಾಜ್ ಸಂಗೀತ ಸಂಯೋಜನೆ ಹಾಗೂ ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ.
ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಶಿವರಾಜಕುಮಾರ್ ಅಭಿನಯದಲ್ಲಿ ‘ಭೈರವನ ಕೊನೆಯ ಪಾಠ’ ಎಂಬ ಚಿತ್ರವನ್ನು ಹೇಮಂತ್ ನಿರ್ದೇಶಿಸಬೇಕಿತ್ತು. ಈ ಚಿತ್ರದಲ್ಲಿ ಶಿವರಾಜಕುಮಾರ್ ಅವರ ಮೊದಲ ನೋಟದ ಪೋಸ್ಟರ್ ಸಹ ಬಿಡುಗಡೆ ಆಗಿತ್ತು. ಆದರೆ, ಶಿವರಾಜಕುಮರ್ ಅವರ ಅನಾರೋಗ್ಯದಿಂದ ಚಿತ್ರ ಸ್ವಲ್ಪ ಮುಂದಕ್ಕೆ ಹೋಗಿದೆ. ಅದಕ್ಕೂ ಮೊದಲು ಇನ್ನೊಂದು ಹೊಸ ಚಿತ್ರವನ್ನು ಹೇಮಂತ್ ಘೋಷಿಸಿದ್ದಾರೆ.
‘ಭೈರವನ ಕೊನೆಯ ಪಾಠ’ ಚಿತ್ರವನ್ನು ಡಾ. ವೈಶಾಖ್ ಜೆ. ಗೌಡ ನಿರ್ಮಿಸಬೇಕಿತ್ತು. ಅದು ಮುಂದೆ ಹೋದ ಕಾರಣ, ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರವನ್ನು ಅವರೇ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಧನಂಜಯ್ ಪ್ರಮುಖ ಪಾತ್ರ ವಹಿಸುತ್ತಿದ್ದು, ಶಿವರಾಜಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಶಿವರಾಜಕುಮಾರ್ ಅಭಿನಯದ ಮೊದಲ ಚಿತ್ರ ‘ಆನಂದ್’ ಬಿಡುಗಡೆಯಾಗಿ ಗುರುವಾರಕ್ಕೆ (ಜೂನ್ 19) 39 ವರ್ಷ ಮುಗಿದು, 40ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿದೆ. ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಿದ್ದಾರೆ ಎಂಬ ವಿಷಯವನ್ನು ಇನ್ನಷ್ಟೇ ಹೊರಬೀಳಬೇಕಿದೆ.
ಚಿತ್ರದ ಟೈಟಲ್ ಅನೌನ್ಸ್ಮೆಂಟ್ ಹೀಗಿದೆ..
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…