ಮನರಂಜನೆ

ಹೊಸ ಪಾಠ ಕಲಿಸಲು ಸಜ್ಜಾದ ಶಿವರಾಜ್‌ಕುಮಾರ್

ಶಿವರಾಜ್‌ಕುಮಾರ್ ಮುಂದಿನ ಚಿತ್ರ ಯಾರಿಗೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ದಿನಕರ್ ತೂಗುದೀಪ, ಲಕ್ಕಿ ಗೋಪಾಲ್‍, ಹೇಮಂತ್ ರಾವ್‍ ಸೇರಿದಂತೆ ಹಲವು ನಿರ್ದೇಶಕರು, ಶಿವರಾಜಕುಮಾರ್ ಜೊತೆಗೆ ಚಿತ್ರ ಮಾಡುವುದಕ್ಕೆ ಘೋಷಿಸಿದ್ದಾರೆ. ಈ ಪೈಕಿ ‘ಭೈರತಿ ರಣಗಲ್‍’ ಚಿತ್ರದ ನಂತರ ಶಿವರಾಜಕುಮಾರ್ ಯಾರ ಜೊತೆಗೆ ಸಿನಿಮಾ ಮಾಡುತ್ತಾರೆ ಎಂಬ ಪ್ರಶ್ನೆ ಸಹಜವಾಗಿಯೇ ಕೇಳಿಬಂದಿತ್ತು. ಅದಕ್ಕೆ ಸರಿಯಾಗಿ ಉತ್ತರ ಸಿಕ್ಕಿದ್ದು, ಹೇಮಂತ್ ರಾವ್ ಜೊತೆಗೆ ಶಿವರಾಜಕುಮಾರ್ ಚಿತ್ರ ಮಾಡುತ್ತಾರಂತೆ.

ಶಿವರಾಜಕುಮಾರ್‍ ಅಭಿನಯದಲ್ಲಿ ಹೇಮಂತ್‍ ರಾವ್‍ ಒಂದು ಚಿತ್ರ ನಿರ್ದೇಶಿಸುತ್ತಾರೆ ಎಂಬ ಸುದ್ದಿ ಫೆಬ್ರವರಿಯಲ್ಲೇ ಕೇಳಿ ಬಂದಿತ್ತು. ಆದರೆ, ಆ ಚಿತ್ರದ ಹೆಸರೇನು, ಯಾವಾಗ ಶುರುವಾಗುತ್ತದೆ ಎಂಬ ವಿಷಯವನ್ನು ಚಿತ್ರತಂಡದವರು ಬಿಟ್ಟುಕೊಟ್ಟಿರಲಿಲ್ಲ. ಚಿತ್ರದ ಹೆಸರು ಘೋಷಣೆಯಾಗಿದ್ದು, ಚಿತ್ರಕ್ಕೆ ‘ಭೈರವನ ಹೊಸ ಪಾಠ’ ಎಂಬ ಹೆಸರನ್ನು ಇಡಲಾಗಿದೆ. ಟೈಟಲ್‍ ಪೋಸ್ಟರ್‍ ಸಹ ಗುರುವಾರ ಬಿಡುಗಡೆ ಮಾಡಲಾಗಿದೆ.

ಹೇಮಂತ್ ರಾವ್ ಸಿನಿಮಾಗಳ ಶೀರ್ಷಿಕೆಗಳು ವಿಶಿಷ್ಟವಾಗಿರುವುಷ್ಟೇ ಅಲ್ಲ, ಅಚ್ಚಕನ್ನಡದ ಶೀರ್ಷಿಕೆಗಳಾಗಿರುತ್ತವೆ. ‘ಭೈರವನ ಕೊನೆ ಪಾಠ’ ಸಹ ಇದಕ್ಕೆ ಹೊರತಾಗಿಲ್ಲ. ಈ ಕುರಿತು ಮಾತನಾಡುವ ಅವರು, ‘ನಮ್ಮ ಆಡುಭಾಷೆಗೆ ಹತ್ತಿರವಾದ ಶೀರ್ಷಿಕೆಗಳು ನನಗೆ ಇಷ್ಟವಾಗುತ್ತವೆ. ಈ ಹಿಂದೆ ಕನ್ನಡ ಸಿನೆಮಾ ಶೀರ್ಷಿಕೆಗಳು ಕೇಳಲಿಕ್ಕೂ ಮಧುರವಾಗಿದ್ದು ಕುತೂಹಲ ಕೆರಳಿಸುವಂತೆ ಇರುತ್ತಿದ್ದವು. ನನ್ನ ನಿರ್ದೇಶನದ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’, ಸಪ್ತ ಸಾಗರದಾಚೆ ಎಲ್ಲೋ’ ಸಿನೆಮಾ ಶೀರ್ಷಿಕೆಗಳು ಸಾಕಷ್ಟು ಜನ ಮೆಚ್ಚುಗೆಗೆ ಪಾತ್ರವಾದವು. ‘ಭೈರವನ ಕೊನೆ ಪಾಠ’ ಕೂಡಾ ಆ ಸಾಲಿಗೆ ಸೇರಲಿದೆ. ಕನ್ನಡ ಸಿನೆಮಾ ಜಗತ್ತಿನ ವಿಶಿಷ್ಟ ಶೀರ್ಷಿಕೆಗಳ ಪರಂಪರೆಯನ್ನು ಮುಂದಿನ ತಲೆಮಾರುಗಳಿಗೂ ತಲುಪಿಸುವ ಉದ್ದೇಶ ನಮ್ಮದು. ಅದರಲ್ಲೂ ನಾನು ಬಹಳವಾಗಿ ಇಷ್ಟಪಡುವ ಶಿವಣ್ಣ ಅವರ ಸಿನೆಮಾ ಶೀರ್ಷಿಕೆಗಳ ಸೌಂದರ್ಯವನ್ನು ಸದಾ ಕಾಲ ನೆನಪಿರುವಂತೆ ಮಾಡುವುದು ನನ್ನ ಬಯಕೆ’ ಎನ್ನುತ್ತಾರೆ.

ಚಿತ್ರದ ಕುರಿತು ಮಾತನಾಡುವ ಹೇಮಂತ್‍, ‘ಈ ಚಿತ್ರದಲ್ಲಿ ಭೈರವನೇ ಕೇಂದ್ರ ಪಾತ್ರವಾಗಿದ್ದು, ಕಥೆಗೆ ಈ ಶೀರ್ಷಿಕೆ ಅಚ್ಚುಕಟ್ಟಾಗಿ ಹೊಂದುತ್ತದೆ. ಅವನು ಮಾಡುವ ಪಾಠ ಯಾವುದು? ಅದನ್ನು ಕೊನೆ ಪಾಠ ಅಂದಿರೋದು ಯಾಕೆ ಅನ್ನುವುದೇ ಈ ಚಿತ್ರದ ಮುಖ್ಯ ತಿರುಳು. ನಮ್ಮ ಶೀರ್ಷಿಕೆ ವೀಕ್ಷಕರಲ್ಲಿ ಈ ಪ್ರಶ್ನೆಗಳನ್ನು ಯಶಸ್ವಿಯಾಗಿ ಹುಟ್ಟುಹಾಕುತ್ತದೆ ಅನ್ನುವುದು ನಮ್ಮ ನಂಬಿಕೆ’ ಎಂದು ವಿವರಿಸುತ್ತಾರೆ.

ಅಂದಹಾಗೆ, ವೈಶಾಖ್‍ ಜೆ ಫಿಲಂಸ್‍ ಬ್ಯಾನರ್‍ನಡಿಯಲ್ಲಿ ಈ ಚಿತ್ರವನ್ನು ಡಾ. ವೈಶಾಖ್‍ ಜೆ ಗೌಡ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯದಲ್ಲೇ ಶಿವರಾಜಕುಮಾರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಚಿತ್ರದ ಫಸ್ಟ್ ಲುಕ್‍ ಪೋಸ್ಟರ್‍ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಚಿತ್ರವು ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ತಯಾರಾಗಿ ಬಿಡುಗಡೆಯಾಗಲಿದೆ.

‘ಭೈರತಿ ರಣಗಲ್’ ಮತ್ತು ‘ಉತ್ತಕಾಂಡ’ ಚಿತ್ರಗಳ ಚಿತ್ರೀಕರಣ ಮುಗಿದ ನಂತರ ‘ಭೈರವನ ಕೊನೆ ಪಾಠ’ ಶುರುವಾಗುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

27 mins ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

42 mins ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

2 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

2 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

4 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

7 hours ago