ಮನರಂಜನೆ

ಹೊಸ ಪಾಠ ಕಲಿಸಲು ಸಜ್ಜಾದ ಶಿವರಾಜ್‌ಕುಮಾರ್

ಶಿವರಾಜ್‌ಕುಮಾರ್ ಮುಂದಿನ ಚಿತ್ರ ಯಾರಿಗೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ದಿನಕರ್ ತೂಗುದೀಪ, ಲಕ್ಕಿ ಗೋಪಾಲ್‍, ಹೇಮಂತ್ ರಾವ್‍ ಸೇರಿದಂತೆ ಹಲವು ನಿರ್ದೇಶಕರು, ಶಿವರಾಜಕುಮಾರ್ ಜೊತೆಗೆ ಚಿತ್ರ ಮಾಡುವುದಕ್ಕೆ ಘೋಷಿಸಿದ್ದಾರೆ. ಈ ಪೈಕಿ ‘ಭೈರತಿ ರಣಗಲ್‍’ ಚಿತ್ರದ ನಂತರ ಶಿವರಾಜಕುಮಾರ್ ಯಾರ ಜೊತೆಗೆ ಸಿನಿಮಾ ಮಾಡುತ್ತಾರೆ ಎಂಬ ಪ್ರಶ್ನೆ ಸಹಜವಾಗಿಯೇ ಕೇಳಿಬಂದಿತ್ತು. ಅದಕ್ಕೆ ಸರಿಯಾಗಿ ಉತ್ತರ ಸಿಕ್ಕಿದ್ದು, ಹೇಮಂತ್ ರಾವ್ ಜೊತೆಗೆ ಶಿವರಾಜಕುಮಾರ್ ಚಿತ್ರ ಮಾಡುತ್ತಾರಂತೆ.

ಶಿವರಾಜಕುಮಾರ್‍ ಅಭಿನಯದಲ್ಲಿ ಹೇಮಂತ್‍ ರಾವ್‍ ಒಂದು ಚಿತ್ರ ನಿರ್ದೇಶಿಸುತ್ತಾರೆ ಎಂಬ ಸುದ್ದಿ ಫೆಬ್ರವರಿಯಲ್ಲೇ ಕೇಳಿ ಬಂದಿತ್ತು. ಆದರೆ, ಆ ಚಿತ್ರದ ಹೆಸರೇನು, ಯಾವಾಗ ಶುರುವಾಗುತ್ತದೆ ಎಂಬ ವಿಷಯವನ್ನು ಚಿತ್ರತಂಡದವರು ಬಿಟ್ಟುಕೊಟ್ಟಿರಲಿಲ್ಲ. ಚಿತ್ರದ ಹೆಸರು ಘೋಷಣೆಯಾಗಿದ್ದು, ಚಿತ್ರಕ್ಕೆ ‘ಭೈರವನ ಹೊಸ ಪಾಠ’ ಎಂಬ ಹೆಸರನ್ನು ಇಡಲಾಗಿದೆ. ಟೈಟಲ್‍ ಪೋಸ್ಟರ್‍ ಸಹ ಗುರುವಾರ ಬಿಡುಗಡೆ ಮಾಡಲಾಗಿದೆ.

ಹೇಮಂತ್ ರಾವ್ ಸಿನಿಮಾಗಳ ಶೀರ್ಷಿಕೆಗಳು ವಿಶಿಷ್ಟವಾಗಿರುವುಷ್ಟೇ ಅಲ್ಲ, ಅಚ್ಚಕನ್ನಡದ ಶೀರ್ಷಿಕೆಗಳಾಗಿರುತ್ತವೆ. ‘ಭೈರವನ ಕೊನೆ ಪಾಠ’ ಸಹ ಇದಕ್ಕೆ ಹೊರತಾಗಿಲ್ಲ. ಈ ಕುರಿತು ಮಾತನಾಡುವ ಅವರು, ‘ನಮ್ಮ ಆಡುಭಾಷೆಗೆ ಹತ್ತಿರವಾದ ಶೀರ್ಷಿಕೆಗಳು ನನಗೆ ಇಷ್ಟವಾಗುತ್ತವೆ. ಈ ಹಿಂದೆ ಕನ್ನಡ ಸಿನೆಮಾ ಶೀರ್ಷಿಕೆಗಳು ಕೇಳಲಿಕ್ಕೂ ಮಧುರವಾಗಿದ್ದು ಕುತೂಹಲ ಕೆರಳಿಸುವಂತೆ ಇರುತ್ತಿದ್ದವು. ನನ್ನ ನಿರ್ದೇಶನದ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’, ಸಪ್ತ ಸಾಗರದಾಚೆ ಎಲ್ಲೋ’ ಸಿನೆಮಾ ಶೀರ್ಷಿಕೆಗಳು ಸಾಕಷ್ಟು ಜನ ಮೆಚ್ಚುಗೆಗೆ ಪಾತ್ರವಾದವು. ‘ಭೈರವನ ಕೊನೆ ಪಾಠ’ ಕೂಡಾ ಆ ಸಾಲಿಗೆ ಸೇರಲಿದೆ. ಕನ್ನಡ ಸಿನೆಮಾ ಜಗತ್ತಿನ ವಿಶಿಷ್ಟ ಶೀರ್ಷಿಕೆಗಳ ಪರಂಪರೆಯನ್ನು ಮುಂದಿನ ತಲೆಮಾರುಗಳಿಗೂ ತಲುಪಿಸುವ ಉದ್ದೇಶ ನಮ್ಮದು. ಅದರಲ್ಲೂ ನಾನು ಬಹಳವಾಗಿ ಇಷ್ಟಪಡುವ ಶಿವಣ್ಣ ಅವರ ಸಿನೆಮಾ ಶೀರ್ಷಿಕೆಗಳ ಸೌಂದರ್ಯವನ್ನು ಸದಾ ಕಾಲ ನೆನಪಿರುವಂತೆ ಮಾಡುವುದು ನನ್ನ ಬಯಕೆ’ ಎನ್ನುತ್ತಾರೆ.

ಚಿತ್ರದ ಕುರಿತು ಮಾತನಾಡುವ ಹೇಮಂತ್‍, ‘ಈ ಚಿತ್ರದಲ್ಲಿ ಭೈರವನೇ ಕೇಂದ್ರ ಪಾತ್ರವಾಗಿದ್ದು, ಕಥೆಗೆ ಈ ಶೀರ್ಷಿಕೆ ಅಚ್ಚುಕಟ್ಟಾಗಿ ಹೊಂದುತ್ತದೆ. ಅವನು ಮಾಡುವ ಪಾಠ ಯಾವುದು? ಅದನ್ನು ಕೊನೆ ಪಾಠ ಅಂದಿರೋದು ಯಾಕೆ ಅನ್ನುವುದೇ ಈ ಚಿತ್ರದ ಮುಖ್ಯ ತಿರುಳು. ನಮ್ಮ ಶೀರ್ಷಿಕೆ ವೀಕ್ಷಕರಲ್ಲಿ ಈ ಪ್ರಶ್ನೆಗಳನ್ನು ಯಶಸ್ವಿಯಾಗಿ ಹುಟ್ಟುಹಾಕುತ್ತದೆ ಅನ್ನುವುದು ನಮ್ಮ ನಂಬಿಕೆ’ ಎಂದು ವಿವರಿಸುತ್ತಾರೆ.

ಅಂದಹಾಗೆ, ವೈಶಾಖ್‍ ಜೆ ಫಿಲಂಸ್‍ ಬ್ಯಾನರ್‍ನಡಿಯಲ್ಲಿ ಈ ಚಿತ್ರವನ್ನು ಡಾ. ವೈಶಾಖ್‍ ಜೆ ಗೌಡ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯದಲ್ಲೇ ಶಿವರಾಜಕುಮಾರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಚಿತ್ರದ ಫಸ್ಟ್ ಲುಕ್‍ ಪೋಸ್ಟರ್‍ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಚಿತ್ರವು ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ತಯಾರಾಗಿ ಬಿಡುಗಡೆಯಾಗಲಿದೆ.

‘ಭೈರತಿ ರಣಗಲ್’ ಮತ್ತು ‘ಉತ್ತಕಾಂಡ’ ಚಿತ್ರಗಳ ಚಿತ್ರೀಕರಣ ಮುಗಿದ ನಂತರ ‘ಭೈರವನ ಕೊನೆ ಪಾಠ’ ಶುರುವಾಗುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago