ಮನರಂಜನೆ

ಶಿವರಾಜಕುಮಾರ್ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆ

ಶಿವರಾಜಕುಮಾರ್‍ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಮನೆಯಲ್ಲಿರುವುದಿಲ್ಲ, ಮನೆಯತ್ತ ಬರಬೇಡಿ, ಇದ್ದೇಲ್ಲೇ ಹಾರೈಸಿ ಎಂದು ಮೊದಲೇ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡಿದ್ದರು. ಹಾಗಾಗಿ, ಯಾವುದೇ ಸಂಭ್ರಮಾಚರಣೆ ಇರಲಿಲ್ಲ.

ಆದರೆ, ಶಿವರಾಜಕುಮಾರ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಭೈರತಿ ರಣಗಲ್‍’ ಚಿತ್ರದ ಟೀಸರ್‍, ‘45’ ಚಿತ್ರದ ಮೊದಲ ನೋಟ, ‘ಉತ್ತರಕಾಂಡ’ ಚಿತ್ರದ ಫಸ್ಟ್ ಲುಕ್‍ ಬಿಡುಗಡೆಯಾಗಿದೆ. ಇನ್ನು, ‘ಶಿವಗಣ’, ‘ದಳವಾಯಿ, ‘ಜಾವ’ ಮುಂತಾದ ಚಿತ್ರಗಳು ಘೋಷಣೆಯಾಗಿವೆ.
ಕಳೆದ ವರ್ಷ ಶಿವರಾಜಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಇನ್ಸ್ಪೆಕ್ಟರ್ ವಿಕ್ರಮ್ ರಿಟರ್ನ್ಸ್’, ಅಜೇಯ್ ರಾವ್ ಜೊತೆಗೆ ಒಂದು ಚಿತ್ರ, ‘ಧೀರ’ ಸೇರಿದಂತೆ ಕೆಲವು ಚಿತ್ರಗಳು ಘೋಷಣೆಯಾಗಿದ್ದವು. ಈ ಒಂದು ವರ್ಷದಲ್ಲಿ ಸಂದೇಶ್‍ ನಾಗರಾಜ್‍ ನಿರ್ಮಾಣದಲ್ಲಿ ಒಂದು ಚಿತ್ರ, ಆರ್‍. ಚಂದ್ರು ನಿರ್ಮಾಣದಲ್ಲಿ ಒಂದು ಚಿತ್ರ, ದಿನಕರ್ ತೂಗುದೀಪ ನಿರ್ದೇಶನದ ಒಂದು ಚಿತ್ರ, ಹೇಮಂತ್‍ ರಾವ್ ನಿರ್ದೇಶನದ ‘ಭೈರವನ ಕೊನೆಯ ಪಾಠ’, ಕಾರ್ತಿಕ್‍ ಅದ್ವೈತ್‍ ನಿರ್ದೇಶನದ ಹೊಸ ಚಿತ್ರಗಳು ಘೋಷಣೆಯಾಗಿವೆ.

ಇಷ್ಟೊಂದು ಚಿತ್ರಗಳ ಪೈಕಿ ‘ಭೈರವನ ಕೊನೆಯ ಪಾಠ’ ಚಿತ್ರ ಮೊದಲು ಶುರುವಾಗುವ ಸಾಧ್ಯತೆ. ಈಗಾಗಲೇ ಇತ್ತೀಚೆಗೆ ಚಿತ್ರದ ಮೊದಲ ನೋಟ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಶಿವರಾಜಕುಮಾರ್‍, ಭೈರವ ಎಂಬ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಆಗಸ್ಟ್ನಿಂದ ಚಿತ್ರೀಕರಣ ಶುರುವಾಗಲಿದೆ.

ಇನ್ನು, ಆಗಸ್ಟ್ 15ರಂದು ‘ಭೈರತಿ ರಣಗಲ್’ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಇಂದು ಚಿತ್ರದ ಟೀಸರ್‍ ಬಿಡುಗಡೆ ಆಗಿದ್ದು, ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಆಗಸ್ಟ್ 15ರಂದು ಬಿಡುಗಡೆ ಆಗಬೇಕಿದ್ದ ಚಿತ್ರ, ಇದೀಗ ಸೆಪ್ಟೆಂಬರ್‍ಗೆ ಮುಂದೂಡಲಾಗಿದೆ.

ಭೂಮಿಕಾ

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

7 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

8 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

8 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

8 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

9 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

9 hours ago