ಮನರಂಜನೆ

ಶಿವರಾಜಕುಮಾರ್ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆ

ಶಿವರಾಜಕುಮಾರ್‍ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಮನೆಯಲ್ಲಿರುವುದಿಲ್ಲ, ಮನೆಯತ್ತ ಬರಬೇಡಿ, ಇದ್ದೇಲ್ಲೇ ಹಾರೈಸಿ ಎಂದು ಮೊದಲೇ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡಿದ್ದರು. ಹಾಗಾಗಿ, ಯಾವುದೇ ಸಂಭ್ರಮಾಚರಣೆ ಇರಲಿಲ್ಲ.

ಆದರೆ, ಶಿವರಾಜಕುಮಾರ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಭೈರತಿ ರಣಗಲ್‍’ ಚಿತ್ರದ ಟೀಸರ್‍, ‘45’ ಚಿತ್ರದ ಮೊದಲ ನೋಟ, ‘ಉತ್ತರಕಾಂಡ’ ಚಿತ್ರದ ಫಸ್ಟ್ ಲುಕ್‍ ಬಿಡುಗಡೆಯಾಗಿದೆ. ಇನ್ನು, ‘ಶಿವಗಣ’, ‘ದಳವಾಯಿ, ‘ಜಾವ’ ಮುಂತಾದ ಚಿತ್ರಗಳು ಘೋಷಣೆಯಾಗಿವೆ.
ಕಳೆದ ವರ್ಷ ಶಿವರಾಜಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಇನ್ಸ್ಪೆಕ್ಟರ್ ವಿಕ್ರಮ್ ರಿಟರ್ನ್ಸ್’, ಅಜೇಯ್ ರಾವ್ ಜೊತೆಗೆ ಒಂದು ಚಿತ್ರ, ‘ಧೀರ’ ಸೇರಿದಂತೆ ಕೆಲವು ಚಿತ್ರಗಳು ಘೋಷಣೆಯಾಗಿದ್ದವು. ಈ ಒಂದು ವರ್ಷದಲ್ಲಿ ಸಂದೇಶ್‍ ನಾಗರಾಜ್‍ ನಿರ್ಮಾಣದಲ್ಲಿ ಒಂದು ಚಿತ್ರ, ಆರ್‍. ಚಂದ್ರು ನಿರ್ಮಾಣದಲ್ಲಿ ಒಂದು ಚಿತ್ರ, ದಿನಕರ್ ತೂಗುದೀಪ ನಿರ್ದೇಶನದ ಒಂದು ಚಿತ್ರ, ಹೇಮಂತ್‍ ರಾವ್ ನಿರ್ದೇಶನದ ‘ಭೈರವನ ಕೊನೆಯ ಪಾಠ’, ಕಾರ್ತಿಕ್‍ ಅದ್ವೈತ್‍ ನಿರ್ದೇಶನದ ಹೊಸ ಚಿತ್ರಗಳು ಘೋಷಣೆಯಾಗಿವೆ.

ಇಷ್ಟೊಂದು ಚಿತ್ರಗಳ ಪೈಕಿ ‘ಭೈರವನ ಕೊನೆಯ ಪಾಠ’ ಚಿತ್ರ ಮೊದಲು ಶುರುವಾಗುವ ಸಾಧ್ಯತೆ. ಈಗಾಗಲೇ ಇತ್ತೀಚೆಗೆ ಚಿತ್ರದ ಮೊದಲ ನೋಟ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಶಿವರಾಜಕುಮಾರ್‍, ಭೈರವ ಎಂಬ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಆಗಸ್ಟ್ನಿಂದ ಚಿತ್ರೀಕರಣ ಶುರುವಾಗಲಿದೆ.

ಇನ್ನು, ಆಗಸ್ಟ್ 15ರಂದು ‘ಭೈರತಿ ರಣಗಲ್’ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಇಂದು ಚಿತ್ರದ ಟೀಸರ್‍ ಬಿಡುಗಡೆ ಆಗಿದ್ದು, ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಆಗಸ್ಟ್ 15ರಂದು ಬಿಡುಗಡೆ ಆಗಬೇಕಿದ್ದ ಚಿತ್ರ, ಇದೀಗ ಸೆಪ್ಟೆಂಬರ್‍ಗೆ ಮುಂದೂಡಲಾಗಿದೆ.

ಭೂಮಿಕಾ

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

22 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago