ಮನರಂಜನೆ

ಶಿವರಾಜಕುಮಾರ್ ಅಭಿನಯದ ‘ಬೇಲ್‍’ ಪ್ರಾರಂಭ: KVN ಪ್ರೊಡಕ್ಷನ್ಸ್ ನಿರ್ಮಾಣ

ಶಿವರಾಜಕುಮಾರ್ ಅಭಿನಯದಲ್ಲಿ ಪವನ್‍ ಒಡೆಯರ್ ಒಂದು ಚಿತ್ರ ನಿರ್ಮಿಸಿ-ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಕಳೆದ ವರ್ಷದ ಕೊನೆಯಲ್ಲಿ ಬಂದಿತ್ತು. ಆ ಚಿತ್ರಕ್ಕೆ ‘ಬೇಲ್‍’ (ಜಾಮೀನು’) ಎಂದು ಹೆಸರಿಡಲಾಗಿದ್ದು ಇಡಲಾಗಿದ್ದು, ಶುಕ್ರವಾರ ಮುಹೂರ್ತವಾಗಿದೆ.

‘ಬೇಲ್‍’ ಚಿತ್ರದ ಮುಹೂರ್ತ ಸಮಾರಂಭ ಪಂಚಮುಖ ಗಣಪತಿ ದೇವಸ್ಥಾನದಲ್ಲಿ ಶುಕ್ರವಾರ ನೆರವೇರಿತು. ಈ ಸಂದರ್ಭದಲ್ಲಿ ಶಿವರಾಜಕುಮಾರ್, ಗೀತಾ ಶಿವರಾಜಕುಮಾರ್, ಪವನ್ ಒಡೆಯರ್, ಕೆ. ವೆಂಕಟನಾರಾಯಣ್‍ ಮುಂತಾದವರು ಹಾಜರಿದ್ದರು.

ವಿಶೇಷವೆಂದರೆ, ಕನ್ನಡ ಸೇರಿದಂತೆ ಬೇರೆ ಭಾಷೆಗಳಲ್ಲಿ ‘ಟಾಕ್ಸಿಕ್’, ‘ಕೆಡಿ – ದಿ ಡೆವಿಲ್‍’, ‘ಜನ ನಾಯಗನ್’ ಮುಂತಾದ ದೊಡ್ಡ ಬಜೆಟ್‍ ಚಿತ್ರಗಳನ್ನು ನಿರ್ಮಿಸುತ್ತಿರುವ KVN ಪ್ರೊಡಕ್ಷನ್ಸ್ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸುತ್ತಿದೆ. ವಿಶೇಷವೆಂದರೆ, ಕಳೆದ ಒಂದು ವಾರದಲ್ಲಿ ಕೆ.ವಿ.ಎನ್‍ ಸಂಸ್ಥೆಯಿಂದ ಘೋಷಣೆಯಾಗುತ್ತಿರುವ ಮೂರನೆಯ ಚಿತ್ರ ಇದು. ಇದಕ್ಕೂ ಮೊದಲು ಕಳೆದ ಶುಕ್ರವಾರ ಚಿರಂಜೀವಿ ಅಭಿನಯದ ಚಿತ್ರವನ್ನು ಕೆವಿಎನ್‍ ಘೋಷಿಸಿತ್ತು. ಅದರ ಮರುದಿನವೇ ಅಕ್ಷಯ್‍ ಕುಮಾರ್ ಮತ್ತು ಸೈಫ್‍ ಅಲಿ ಖಾನ್‍ ಅಭಿನಯದಲ್ಲಿ ‘ಹೈವಾನ್‍’ ಎಂಬ ಚಿತ್ರ ಪ್ರಾರಂಭಿಸಿತ್ತು. ಈಗ ‘ಬೇಲ್‍’ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಚಿತ್ರವನ್ನು ವೆಂಕಟನಾರಾಯಣ್‍ ಮತ್ತು ಪವನ್‍ ಒಡೆಯರ್‍ ಜೊತೆಯಾಗ ಿನಿರ್ಮಿಸುತ್ತಿದ್ದರೆ ಎಂದು ಹೇಳಲಾಗಿದೆ.

‘ಬೇಲ್‍’ ಒಂದು ಕ್ರೈಮ್‍ ಥ್ರಿಲ್ಲರ್ ಚಿತ್ರವಾಗಿದ್ದು, ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ 3ರಿಂದ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ನಡೆಯಲಿದ್ದು, ನಂತರದ ದಿನಗಳಲ್ಲಿ ಮಂಡ್ಯ, ಹಿಮಾಚಲ ಪ್ರದೇಶ, ಮುಂಬೈ ಹಾಗೂ ಹೈದರಾಬಾದ್‍ನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಚಿತ್ರದಲ್ಲಿ ಶಿವರಾಜಕುಮಾರ್ ಜೊತೆಗೆ ಜಯರಾಮ್, ಸಾಯಿಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಪ್ರಕಾಶ್ ಬೆಳವಾಡಿ, ಸಂಜನಾ ಆನಂದ್, ದೀಕ್ಷಿತ್ ಶೆಟ್ಟಿ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ, ಶಶಾಂಕ್ ನಾರಾಯಣ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

10 mins ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

20 mins ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

42 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

1 hour ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

1 hour ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago