bail shivaraj kumar
ಶಿವರಾಜಕುಮಾರ್ ಅಭಿನಯದಲ್ಲಿ ಪವನ್ ಒಡೆಯರ್ ಒಂದು ಚಿತ್ರ ನಿರ್ಮಿಸಿ-ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಕಳೆದ ವರ್ಷದ ಕೊನೆಯಲ್ಲಿ ಬಂದಿತ್ತು. ಆ ಚಿತ್ರಕ್ಕೆ ‘ಬೇಲ್’ (ಜಾಮೀನು’) ಎಂದು ಹೆಸರಿಡಲಾಗಿದ್ದು ಇಡಲಾಗಿದ್ದು, ಶುಕ್ರವಾರ ಮುಹೂರ್ತವಾಗಿದೆ.
‘ಬೇಲ್’ ಚಿತ್ರದ ಮುಹೂರ್ತ ಸಮಾರಂಭ ಪಂಚಮುಖ ಗಣಪತಿ ದೇವಸ್ಥಾನದಲ್ಲಿ ಶುಕ್ರವಾರ ನೆರವೇರಿತು. ಈ ಸಂದರ್ಭದಲ್ಲಿ ಶಿವರಾಜಕುಮಾರ್, ಗೀತಾ ಶಿವರಾಜಕುಮಾರ್, ಪವನ್ ಒಡೆಯರ್, ಕೆ. ವೆಂಕಟನಾರಾಯಣ್ ಮುಂತಾದವರು ಹಾಜರಿದ್ದರು.
ವಿಶೇಷವೆಂದರೆ, ಕನ್ನಡ ಸೇರಿದಂತೆ ಬೇರೆ ಭಾಷೆಗಳಲ್ಲಿ ‘ಟಾಕ್ಸಿಕ್’, ‘ಕೆಡಿ – ದಿ ಡೆವಿಲ್’, ‘ಜನ ನಾಯಗನ್’ ಮುಂತಾದ ದೊಡ್ಡ ಬಜೆಟ್ ಚಿತ್ರಗಳನ್ನು ನಿರ್ಮಿಸುತ್ತಿರುವ KVN ಪ್ರೊಡಕ್ಷನ್ಸ್ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸುತ್ತಿದೆ. ವಿಶೇಷವೆಂದರೆ, ಕಳೆದ ಒಂದು ವಾರದಲ್ಲಿ ಕೆ.ವಿ.ಎನ್ ಸಂಸ್ಥೆಯಿಂದ ಘೋಷಣೆಯಾಗುತ್ತಿರುವ ಮೂರನೆಯ ಚಿತ್ರ ಇದು. ಇದಕ್ಕೂ ಮೊದಲು ಕಳೆದ ಶುಕ್ರವಾರ ಚಿರಂಜೀವಿ ಅಭಿನಯದ ಚಿತ್ರವನ್ನು ಕೆವಿಎನ್ ಘೋಷಿಸಿತ್ತು. ಅದರ ಮರುದಿನವೇ ಅಕ್ಷಯ್ ಕುಮಾರ್ ಮತ್ತು ಸೈಫ್ ಅಲಿ ಖಾನ್ ಅಭಿನಯದಲ್ಲಿ ‘ಹೈವಾನ್’ ಎಂಬ ಚಿತ್ರ ಪ್ರಾರಂಭಿಸಿತ್ತು. ಈಗ ‘ಬೇಲ್’ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಚಿತ್ರವನ್ನು ವೆಂಕಟನಾರಾಯಣ್ ಮತ್ತು ಪವನ್ ಒಡೆಯರ್ ಜೊತೆಯಾಗ ಿನಿರ್ಮಿಸುತ್ತಿದ್ದರೆ ಎಂದು ಹೇಳಲಾಗಿದೆ.
‘ಬೇಲ್’ ಒಂದು ಕ್ರೈಮ್ ಥ್ರಿಲ್ಲರ್ ಚಿತ್ರವಾಗಿದ್ದು, ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ 3ರಿಂದ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ನಡೆಯಲಿದ್ದು, ನಂತರದ ದಿನಗಳಲ್ಲಿ ಮಂಡ್ಯ, ಹಿಮಾಚಲ ಪ್ರದೇಶ, ಮುಂಬೈ ಹಾಗೂ ಹೈದರಾಬಾದ್ನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಚಿತ್ರದಲ್ಲಿ ಶಿವರಾಜಕುಮಾರ್ ಜೊತೆಗೆ ಜಯರಾಮ್, ಸಾಯಿಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಪ್ರಕಾಶ್ ಬೆಳವಾಡಿ, ಸಂಜನಾ ಆನಂದ್, ದೀಕ್ಷಿತ್ ಶೆಟ್ಟಿ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ, ಶಶಾಂಕ್ ನಾರಾಯಣ್ ಸಂಕಲನವಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…