ಮನರಂಜನೆ

ಶಿವರಾಜಕುಮಾರ್ ಅಭಿನಯದ ‘ಬೇಲ್‍’ ಪ್ರಾರಂಭ: KVN ಪ್ರೊಡಕ್ಷನ್ಸ್ ನಿರ್ಮಾಣ

ಶಿವರಾಜಕುಮಾರ್ ಅಭಿನಯದಲ್ಲಿ ಪವನ್‍ ಒಡೆಯರ್ ಒಂದು ಚಿತ್ರ ನಿರ್ಮಿಸಿ-ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಕಳೆದ ವರ್ಷದ ಕೊನೆಯಲ್ಲಿ ಬಂದಿತ್ತು. ಆ ಚಿತ್ರಕ್ಕೆ ‘ಬೇಲ್‍’ (ಜಾಮೀನು’) ಎಂದು ಹೆಸರಿಡಲಾಗಿದ್ದು ಇಡಲಾಗಿದ್ದು, ಶುಕ್ರವಾರ ಮುಹೂರ್ತವಾಗಿದೆ.

‘ಬೇಲ್‍’ ಚಿತ್ರದ ಮುಹೂರ್ತ ಸಮಾರಂಭ ಪಂಚಮುಖ ಗಣಪತಿ ದೇವಸ್ಥಾನದಲ್ಲಿ ಶುಕ್ರವಾರ ನೆರವೇರಿತು. ಈ ಸಂದರ್ಭದಲ್ಲಿ ಶಿವರಾಜಕುಮಾರ್, ಗೀತಾ ಶಿವರಾಜಕುಮಾರ್, ಪವನ್ ಒಡೆಯರ್, ಕೆ. ವೆಂಕಟನಾರಾಯಣ್‍ ಮುಂತಾದವರು ಹಾಜರಿದ್ದರು.

ವಿಶೇಷವೆಂದರೆ, ಕನ್ನಡ ಸೇರಿದಂತೆ ಬೇರೆ ಭಾಷೆಗಳಲ್ಲಿ ‘ಟಾಕ್ಸಿಕ್’, ‘ಕೆಡಿ – ದಿ ಡೆವಿಲ್‍’, ‘ಜನ ನಾಯಗನ್’ ಮುಂತಾದ ದೊಡ್ಡ ಬಜೆಟ್‍ ಚಿತ್ರಗಳನ್ನು ನಿರ್ಮಿಸುತ್ತಿರುವ KVN ಪ್ರೊಡಕ್ಷನ್ಸ್ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸುತ್ತಿದೆ. ವಿಶೇಷವೆಂದರೆ, ಕಳೆದ ಒಂದು ವಾರದಲ್ಲಿ ಕೆ.ವಿ.ಎನ್‍ ಸಂಸ್ಥೆಯಿಂದ ಘೋಷಣೆಯಾಗುತ್ತಿರುವ ಮೂರನೆಯ ಚಿತ್ರ ಇದು. ಇದಕ್ಕೂ ಮೊದಲು ಕಳೆದ ಶುಕ್ರವಾರ ಚಿರಂಜೀವಿ ಅಭಿನಯದ ಚಿತ್ರವನ್ನು ಕೆವಿಎನ್‍ ಘೋಷಿಸಿತ್ತು. ಅದರ ಮರುದಿನವೇ ಅಕ್ಷಯ್‍ ಕುಮಾರ್ ಮತ್ತು ಸೈಫ್‍ ಅಲಿ ಖಾನ್‍ ಅಭಿನಯದಲ್ಲಿ ‘ಹೈವಾನ್‍’ ಎಂಬ ಚಿತ್ರ ಪ್ರಾರಂಭಿಸಿತ್ತು. ಈಗ ‘ಬೇಲ್‍’ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಚಿತ್ರವನ್ನು ವೆಂಕಟನಾರಾಯಣ್‍ ಮತ್ತು ಪವನ್‍ ಒಡೆಯರ್‍ ಜೊತೆಯಾಗ ಿನಿರ್ಮಿಸುತ್ತಿದ್ದರೆ ಎಂದು ಹೇಳಲಾಗಿದೆ.

‘ಬೇಲ್‍’ ಒಂದು ಕ್ರೈಮ್‍ ಥ್ರಿಲ್ಲರ್ ಚಿತ್ರವಾಗಿದ್ದು, ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ 3ರಿಂದ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ನಡೆಯಲಿದ್ದು, ನಂತರದ ದಿನಗಳಲ್ಲಿ ಮಂಡ್ಯ, ಹಿಮಾಚಲ ಪ್ರದೇಶ, ಮುಂಬೈ ಹಾಗೂ ಹೈದರಾಬಾದ್‍ನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಚಿತ್ರದಲ್ಲಿ ಶಿವರಾಜಕುಮಾರ್ ಜೊತೆಗೆ ಜಯರಾಮ್, ಸಾಯಿಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಪ್ರಕಾಶ್ ಬೆಳವಾಡಿ, ಸಂಜನಾ ಆನಂದ್, ದೀಕ್ಷಿತ್ ಶೆಟ್ಟಿ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ, ಶಶಾಂಕ್ ನಾರಾಯಣ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

4 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

4 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

5 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

5 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

5 hours ago