ಮನರಂಜನೆ

ಚಿತ್ರರಂಗದ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಶ್ರುತಿ

ಸಿನಿಮಾ ನಾಯಕರಂತೆ, ನಾಯಕಿಯರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಅದರಲ್ಲೂ ಕಳೆದ ಮೂರು ವರ್ಷಗಳಿಂದ ಚಿತ್ರರಂಗದಲ್ಲಿರುವ ಮತ್ತು ಹಿರಿಯ ನಟಿಯಾಗಿರುವ ಶ್ರುತಿ, ಇತ್ತೀಚಿನ ವರ್ಷಗಳಲ್ಲಿ ಬಹಿರಂಗವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ.

ಹೀಗಿರುವಾಗಲೇ ಶ್ರುತಿ, ಗುರುವಾರ (ಸೆ.18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ. ತಮ್ಮ ನಿಜಜೀವನದಲ್ಲಿ 50 ವರ್ಷ ಪೂರೈಸಿರುವ ಶ್ರುತಿ, ವೃತ್ತಿ ಬದುಕಿನಲ್ಲಿ 35 ವರ್ಷಗಳನ್ನು ಪೂರೈಸಿದ್ದಾರೆ. ಅವರು ನಟಿಸಿದ ಮೊದಲ ಚಿತ್ರ ‘ಆಸೆಗೊಬ್ಬ ಮೀಸೆಗೊಬ್ಬ’ ಚಿತ್ರವು 1990ರಲ್ಲಿ ಬಿಡುಗಡೆಯಾಗಿ 35 ವರ್ಷಗಳನ್ನು ಪೂರೈಸಿದೆ. ಈ ಚಿತ್ರದಲ್ಲಿ ಅವರು ಪ್ರಿಯದರ್ಶಿನಿ ಎಂಬ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈಗಾಗಲೇ ಮಾರ್ಚ್‍ ತಿಂಗಳಲ್ಲೇ ಈ ಚಿತ್ರ ಬಿಡುಗಡೆಯಾಗಿ 35 ವರ್ಷಗಳಾಗಿವೆ.

ಇದನ್ನೂ ಓದಿ: ಬಾಲಕಿ ಸೇರಿದಂತೆ 8 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ : ಬೆಂಗಳೂರಿನ ಯೋಗ ಗುರು ಬಂಧನ

ಈ ಡಬ್ಬಲ್‍ ಸಂಭ್ರಮವನ್ನು ಶ್ರುತಿ ಚಿತ್ರರಂಗದ ಬಾಂಧವರ ಜೊತೆಗೆ ಹಂಚಿಕೊಂಡಿದ್ದಾರೆ. ಇಸ್ಕಾನ್‍ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಶಿವರಾಜಕುಮಾರ್, ರವಿಚಂದ್ರನ್‍, ಮಾಲಾಶ್ರೀ, ಮಾಳವಿಕಾ ಅವಿನಾಶ್‍, ಡಾ. ಜಯಮಾಲಾ, ಅನು ಪ್ರಭಾಕರ್‍, ರವಿಶಂಕರ್,‍ ಬಿ.ಸಿ. ಪಾಟೀಲ್‍, ಶರಣ್‍, ಆರಾಧನಾ ರಾಮ್‍, ಉಮಾಶ್ರೀ ಸೇರಿದಂತೆ ಹಲವರು ಹಾಜರಿದ್ದರು. ಅವರೆಲ್ಲರ ಸಮ್ಮುಖದಲ್ಲಿ ಶ್ರುತಿ ತಮ್ಮ ಕೇಕ್‍ ಕತ್ತರಿಸಿ, ಹುಟ್ಟುಹಬ್ಬ ಆಚರಿಸಿಕೊಂಡರು.

ಈ ಕಾರ್ಯಕ್ರಮವನ್ನು ಶ್ರುತಿ ಅವರ ಮಗಳು ಗೌರಿ ಆಯೋಜಿಸಿದ್ದು ವಿಶೇಷವಾಗಿತ್ತು.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

8 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

8 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

9 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

9 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

9 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

10 hours ago