ಮನರಂಜನೆ

ಚಿತ್ರರಂಗದ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಶ್ರುತಿ

ಸಿನಿಮಾ ನಾಯಕರಂತೆ, ನಾಯಕಿಯರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಅದರಲ್ಲೂ ಕಳೆದ ಮೂರು ವರ್ಷಗಳಿಂದ ಚಿತ್ರರಂಗದಲ್ಲಿರುವ ಮತ್ತು ಹಿರಿಯ ನಟಿಯಾಗಿರುವ ಶ್ರುತಿ, ಇತ್ತೀಚಿನ ವರ್ಷಗಳಲ್ಲಿ ಬಹಿರಂಗವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ.

ಹೀಗಿರುವಾಗಲೇ ಶ್ರುತಿ, ಗುರುವಾರ (ಸೆ.18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ. ತಮ್ಮ ನಿಜಜೀವನದಲ್ಲಿ 50 ವರ್ಷ ಪೂರೈಸಿರುವ ಶ್ರುತಿ, ವೃತ್ತಿ ಬದುಕಿನಲ್ಲಿ 35 ವರ್ಷಗಳನ್ನು ಪೂರೈಸಿದ್ದಾರೆ. ಅವರು ನಟಿಸಿದ ಮೊದಲ ಚಿತ್ರ ‘ಆಸೆಗೊಬ್ಬ ಮೀಸೆಗೊಬ್ಬ’ ಚಿತ್ರವು 1990ರಲ್ಲಿ ಬಿಡುಗಡೆಯಾಗಿ 35 ವರ್ಷಗಳನ್ನು ಪೂರೈಸಿದೆ. ಈ ಚಿತ್ರದಲ್ಲಿ ಅವರು ಪ್ರಿಯದರ್ಶಿನಿ ಎಂಬ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈಗಾಗಲೇ ಮಾರ್ಚ್‍ ತಿಂಗಳಲ್ಲೇ ಈ ಚಿತ್ರ ಬಿಡುಗಡೆಯಾಗಿ 35 ವರ್ಷಗಳಾಗಿವೆ.

ಇದನ್ನೂ ಓದಿ: ಬಾಲಕಿ ಸೇರಿದಂತೆ 8 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ : ಬೆಂಗಳೂರಿನ ಯೋಗ ಗುರು ಬಂಧನ

ಈ ಡಬ್ಬಲ್‍ ಸಂಭ್ರಮವನ್ನು ಶ್ರುತಿ ಚಿತ್ರರಂಗದ ಬಾಂಧವರ ಜೊತೆಗೆ ಹಂಚಿಕೊಂಡಿದ್ದಾರೆ. ಇಸ್ಕಾನ್‍ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಶಿವರಾಜಕುಮಾರ್, ರವಿಚಂದ್ರನ್‍, ಮಾಲಾಶ್ರೀ, ಮಾಳವಿಕಾ ಅವಿನಾಶ್‍, ಡಾ. ಜಯಮಾಲಾ, ಅನು ಪ್ರಭಾಕರ್‍, ರವಿಶಂಕರ್,‍ ಬಿ.ಸಿ. ಪಾಟೀಲ್‍, ಶರಣ್‍, ಆರಾಧನಾ ರಾಮ್‍, ಉಮಾಶ್ರೀ ಸೇರಿದಂತೆ ಹಲವರು ಹಾಜರಿದ್ದರು. ಅವರೆಲ್ಲರ ಸಮ್ಮುಖದಲ್ಲಿ ಶ್ರುತಿ ತಮ್ಮ ಕೇಕ್‍ ಕತ್ತರಿಸಿ, ಹುಟ್ಟುಹಬ್ಬ ಆಚರಿಸಿಕೊಂಡರು.

ಈ ಕಾರ್ಯಕ್ರಮವನ್ನು ಶ್ರುತಿ ಅವರ ಮಗಳು ಗೌರಿ ಆಯೋಜಿಸಿದ್ದು ವಿಶೇಷವಾಗಿತ್ತು.

ಆಂದೋಲನ ಡೆಸ್ಕ್

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

50 seconds ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

4 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

10 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

10 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

11 hours ago