shruti
ನಟಿ ಶ್ರುತಿ ಹಲವಾರು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಹೆಚ್ಚಾಗಿ ಸೆಂಟಿಮೆಂಟ್ ಪಾತ್ರಗಳಲ್ಲೇ ನಟಿಸಿದ್ದ ಅವರು, ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳತೊಡಗಿದ ನಂತರ ವಿಭಿನ್ನ ಪಾತ್ರಗಳು ಸಿಕ್ಕಿವೆಯಂತೆ. ಅದರಲ್ಲೂ ‘ಮಾದೇವ’ ಚಿತ್ರದಲ್ಲಿ ಸಿಕ್ಕ ತೃಪ್ತಿ ಯಾವ ಚಿತ್ರದಲ್ಲೂ ಸಿಗಲಿಲ್ಲ ಎಂದು ಹೇಳಿಕೊಂಡಿದ್ದಾರೆ.
ವಿನೋದ್ ಪ್ರಭಾಕರ್ ಅಭಿನಯದ ‘ಮಾದೇವ’ ಚಿತ್ರವು ಜೂನ್.06ರರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ, ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆದಿದೆ. ಈ ಸಂದರ್ಭದಲ್ಲಿ ‘ಎದೇಲಿ ತಂಗಾಳಿ …’ ಎಂಬ ಹಾಡು ಬಿಡುಗಡೆಯಾಗಿದೆ. ಪ್ರಸನ್ನ ಕುಮಾರ್ ಬರೆದಿರುವ ಹಾಡಿಗೆ, ಅನನ್ಯ ಭಟ್ ಧ್ವನಿಯಾಗಿದ್ದು, ಪ್ರದ್ಯೋತ್ತನ್ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡಿನಲ್ಲಿ ವಿನೋದ್ ಪ್ರಭಾಕರ್ ಮತ್ತು ಸೋನಲ್ ಕಾಣಿಸಿಕೊಂಡಿದ್ದಾರೆ
ಈ ಸಂದರ್ಭದಲ್ಲಿ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಶ್ರುತಿ ಮಾತನಾಡಿದರು. ‘ನಾನು ಚಿತ್ರರಂಗಕ್ಕೆ ಬಂದು 35 ವರ್ಷಗಳಾಗಿವೆ. 130 ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೂ ಆ ಸಿನಿಮಾಗಳಲ್ಲಿ ಸಿಕ್ಕ ತೃಪ್ತಿ, ಇದರಲ್ಲಿ ಜಾಸ್ತಿಯೇ ಸಿಕ್ಕಿದೆ. ಈ ತರಹದ ವಿಭಿನ್ನ ಪಾತ್ರಗಳನ್ನು ಮಾಡುವುದಕ್ಕೆ ನಿರ್ದೇಶಕರು ನನ್ನನ್ನು ಕಲ್ಪಿಸಿಕೊಳ್ಳುತ್ತಾರೆ ಎಂಬುದೇ ಸಂತೋಷ. ಕಲಾವಿದೆಯಾಗಿ ನಾನು ಗೆದ್ದೆ ಎಂದು ನನಗೆ ಅನಿಸುವುದೇ ಆಗ. ಏಕತಾನತೆಯ ಪಾತ್ರಗಳಿದ್ದರೆ ಕಲಿಕೆ ಸಾಧ್ಯವಿರುವುದಿಲ್ಲ. ನಾಯಕಿಯಾಗಿದ್ದಾಗ ಈ ತರಹದ ವಿಭಿನ್ನ ಪಾತ್ರ ಮಾಡುವುದಕ್ಕೆ ಅವಕಾಶ ಸಿಗುತ್ತಿತ್ತೋ ಇಲ್ಲವೋ ಗೊತ್ತಿಲ್ಲ. ಈ ಚಿತ್ರದಲ್ಲಿ ವಿಭಿನ್ನ ಪಾತ್ರ ಸಿಕ್ಕಿದೆ. ಆ ಸವಾಲು ತೆಗೆದುಕೊಂಡೆ. ನಿರೀಕ್ಷೆಗೆ ತಕ್ಕಂತೆ ನಟಿಸಿದ್ದೀನಿ ಎಂದು ಅವರು ನಿರ್ದೇಶಕರು ಹೇಳಿದ್ದು ಕೇಳಿ ಖುಷಿಯಾಯಿತು’ ಎಂದರು.
ನಿರ್ದೇಶಕ ನವೀನ್ ರೆಡ್ಡಿ ಮಾತನಾಡಿ, ‘ಈ ಚಿತ್ರ ನೋಡಿ ಹೊರ ಬಂದ ಮೇಲೆ, ವಿನೋದ್ ಪ್ರಭಾಕರ್ ಜೊತೆಗೆ ಶ್ರುತಿ ಸಹ ಮನಸ್ಸಲ್ಲಿ ಉಳಿಯುತ್ತಾರೆ. ಅವರು ಪಾತ್ರ ಭಯ ಹುಟ್ಟಿಸುತ್ತದೆ. ಅವರು ಎಲ್ಲರಿಗೂ ಇಷ್ಟವಾಗುತ್ತಾರೆ ಎಂಬ ನಂಬಿಕೆ ಇದೆ. ನಮಗೆ ಒಳ್ಳೆಯ ಪಾತ್ರಧಾರಿಗಳು ಸಿಕ್ಕರು. ಅವರು ಅಭಿನಯಿಸುತ್ತಿದ್ದರೆ ಕರೆಕ್ಷನ್ ಹೇಳುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಚಿತ್ರ ನೋಡಿ ಪ್ರೇಕ್ಷಕರು ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನಾಡುತ್ತಾರೆ ಎಂಬ ನಂಬಿಕೆ ಇದೆ’ ಎಂದರು.
ಈ ಕಾರ್ಯಕ್ರಮದಲ್ಲಿ ವಿನೋದ್ ಪ್ರಭಾಕರ್, ಸೋನಾಲ್ ಮಾಂತೇರೋ, ನಿರ್ಮಾಪಕ ಕೇಶವ, ಸೋನಾಲ್, ಸಂಗೀತ ನಿರ್ದೇಶಕ ಪ್ರದ್ಯೋತ್ತನ್ ಮುಂತಾದವರು ಹಾಜರಿದ್ದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…