ಮನರಂಜನೆ

ಈ ಸಿನಿಮಾದಲ್ಲಿ ಸಿಕ್ಕ ತೃಪ್ತಿ, ಇದುವರೆಗೂ ಸಿಕ್ಕಿಲ್ಲ ಎಂದ ಶ್ರುತಿ

ನಟಿ ಶ್ರುತಿ ಹಲವಾರು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಹೆಚ್ಚಾಗಿ ಸೆಂಟಿಮೆಂಟ್‍ ಪಾತ್ರಗಳಲ್ಲೇ ನಟಿಸಿದ್ದ ಅವರು, ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳತೊಡಗಿದ ನಂತರ ವಿಭಿನ್ನ ಪಾತ್ರಗಳು ಸಿಕ್ಕಿವೆಯಂತೆ. ಅದರಲ್ಲೂ ‘ಮಾದೇವ’ ಚಿತ್ರದಲ್ಲಿ ಸಿಕ್ಕ ತೃಪ್ತಿ ಯಾವ ಚಿತ್ರದಲ್ಲೂ ಸಿಗಲಿಲ್ಲ ಎಂದು ಹೇಳಿಕೊಂಡಿದ್ದಾರೆ.

ವಿನೋದ್‍ ಪ್ರಭಾಕರ್ ಅಭಿನಯದ ‘ಮಾದೇವ’ ಚಿತ್ರವು ಜೂನ್‍.06ರರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ, ಚಿತ್ರದ ಪ್ರೀ-ರಿಲೀಸ್‍ ಕಾರ್ಯಕ್ರಮ ನಡೆದಿದೆ. ಈ ಸಂದರ್ಭದಲ್ಲಿ ‘ಎದೇಲಿ ತಂಗಾಳಿ …’ ಎಂಬ ಹಾಡು ಬಿಡುಗಡೆಯಾಗಿದೆ. ಪ್ರಸನ್ನ ಕುಮಾರ್ ‍ಬರೆದಿರುವ ಹಾಡಿಗೆ, ಅನನ್ಯ ಭಟ್‍ ಧ್ವನಿಯಾಗಿದ್ದು, ಪ್ರದ್ಯೋತ್ತನ್‍ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡಿನಲ್ಲಿ ವಿನೋದ್‍ ಪ್ರಭಾಕರ್ ಮತ್ತು ಸೋನಲ್‍ ಕಾಣಿಸಿಕೊಂಡಿದ್ದಾರೆ

ಈ ಸಂದರ್ಭದಲ್ಲಿ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಶ್ರುತಿ ಮಾತನಾಡಿದರು. ‘ನಾನು ಚಿತ್ರರಂಗಕ್ಕೆ ಬಂದು 35 ವರ್ಷಗಳಾಗಿವೆ. 130 ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೂ ಆ ಸಿನಿಮಾಗಳಲ್ಲಿ ಸಿಕ್ಕ ತೃಪ್ತಿ, ಇದರಲ್ಲಿ ಜಾಸ್ತಿಯೇ ಸಿಕ್ಕಿದೆ. ಈ ತರಹದ ವಿಭಿನ್ನ ಪಾತ್ರಗಳನ್ನು ಮಾಡುವುದಕ್ಕೆ ನಿರ್ದೇಶಕರು ನನ್ನನ್ನು ಕಲ್ಪಿಸಿಕೊಳ್ಳುತ್ತಾರೆ ಎಂಬುದೇ ಸಂತೋಷ. ಕಲಾವಿದೆಯಾಗಿ ನಾನು ಗೆದ್ದೆ ಎಂದು ನನಗೆ ಅನಿಸುವುದೇ ಆಗ. ಏಕತಾನತೆಯ ಪಾತ್ರಗಳಿದ್ದರೆ ಕಲಿಕೆ ಸಾಧ್ಯವಿರುವುದಿಲ್ಲ. ನಾಯಕಿಯಾಗಿದ್ದಾಗ ಈ ತರಹದ ವಿಭಿನ್ನ ಪಾತ್ರ ಮಾಡುವುದಕ್ಕೆ ಅವಕಾಶ ಸಿಗುತ್ತಿತ್ತೋ ಇಲ್ಲವೋ ಗೊತ್ತಿಲ್ಲ. ಈ ಚಿತ್ರದಲ್ಲಿ ವಿಭಿನ್ನ ಪಾತ್ರ ಸಿಕ್ಕಿದೆ. ಆ ಸವಾಲು ತೆಗೆದುಕೊಂಡೆ. ನಿರೀಕ್ಷೆಗೆ ತಕ್ಕಂತೆ ನಟಿಸಿದ್ದೀನಿ ಎಂದು ಅವರು ನಿರ್ದೇಶಕರು ಹೇಳಿದ್ದು ಕೇಳಿ ಖುಷಿಯಾಯಿತು’ ಎಂದರು.

ನಿರ್ದೇಶಕ ನವೀನ್‍ ರೆಡ್ಡಿ ಮಾತನಾಡಿ, ‘ಈ ಚಿತ್ರ ನೋಡಿ ಹೊರ ಬಂದ ಮೇಲೆ, ವಿನೋದ್‍ ಪ್ರಭಾಕರ್ ಜೊತೆಗೆ ಶ್ರುತಿ ಸಹ ಮನಸ್ಸಲ್ಲಿ ಉಳಿಯುತ್ತಾರೆ. ಅವರು ಪಾತ್ರ ಭಯ ಹುಟ್ಟಿಸುತ್ತದೆ. ಅವರು ಎಲ್ಲರಿಗೂ ಇಷ್ಟವಾಗುತ್ತಾರೆ ಎಂಬ ನಂಬಿಕೆ ಇದೆ. ನಮಗೆ ಒಳ್ಳೆಯ ಪಾತ್ರಧಾರಿಗಳು ಸಿಕ್ಕರು. ಅವರು ಅಭಿನಯಿಸುತ್ತಿದ್ದರೆ ಕರೆಕ್ಷನ್‍ ಹೇಳುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಚಿತ್ರ ನೋಡಿ ಪ್ರೇಕ್ಷಕರು ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನಾಡುತ್ತಾರೆ ಎಂಬ ನಂಬಿಕೆ ಇದೆ’ ಎಂದರು.

ಈ ಕಾರ್ಯಕ್ರಮದಲ್ಲಿ ವಿನೋದ್‍ ಪ್ರಭಾಕರ್, ಸೋನಾಲ್ ಮಾಂತೇರೋ, ನಿರ್ಮಾಪಕ ಕೇಶವ, ಸೋನಾಲ್‍, ಸಂಗೀತ ನಿರ್ದೇಶಕ ಪ್ರದ್ಯೋತ್ತನ್‍ ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

6 mins ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

52 mins ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

1 hour ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

1 hour ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

2 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

11 hours ago