ಬೆಂಗಳೂರು: ದ್ವಾರಕೀಶ್ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ದ್ವಾರಕೀಶ್ ಅವರೊಂದಿಗೆ ಹೋಗಿದ್ದೆ ಎಂದು ಹಾಸ್ಯ ನಟ ದ್ವಾರಕೀಶ್ ಅವರೊಂದಿಗಿದ್ದ ತಮ್ಮ ಒಡನಾಟವನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.
ದ್ವಾರಕೀಶ್ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಒಬ್ಬ ನಟನಾಗಿ, ನಿರ್ಮಾಪಕ ಮತ್ತು ನಿರ್ದೇಶಕನಾಗಿ ಅವರು ಕನ್ನಡ ಚಿತ್ರರಂಗಕ್ಕೆ ಬಹು ದೊಡ್ಡ ಕಾಣಿಕೆ ಸಲ್ಲಿಸಿದ್ದಾರೆ. ದ್ವಾರಕೀಶ್ ಅವರು ಡಾ ರಾಜ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಅವರೊಂದಿಗೆ ನಟಿಸಿದ ಚಿತ್ರಗಳನ್ನು ನೋಡಿದ್ದೇನೆ ಎಂದು ಹೇಳಿದರು.
ದ್ವಾರಕೀಶ್ ಸಿನಿಮಾದಲ್ಲಿ ಹಲವಾರು ಏಳುಬೀಳು ಕಂಡಿದ್ದಾರೆ. ಸೋತಾಗ ಎದೆಗುಂದದೇ ಮುಂದೆ ಸಾಗಿದ ಅವರ ಆತ್ಮಸ್ಥೈರ್ಯ ಅಭಿನಂದನೀಯ. ಕನ್ನಡ ಚಿತ್ರರಂಗಕ್ಕೆ ನಟ, ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿ ದ್ವಾರಕೀಶ್ ಅಪಾರ ಸೇವೆಯನ್ನು ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ಹಾಸ್ಯನಟರಾಗಿ, ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದವರು ಎಂದರು.
ದ್ವಾರಕೀಶ್ ನಮ್ಮೂರಿನವ್ರು, ತುಂಬಾ ಕಷ್ಟ ಜೀವಿ, ಒಮ್ಮೆ ಅವರೊಂದಿಗೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುವಾಗ ಸಿನಿಮಾ, ರಾಜಕೀಯ, ಸಾಮಾಜಿಕ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ ಎಂದು ಅವರೊಂದಿಗಿನ ಹಳೇ ನೆನಪುಗಳನ್ನು ಮೆಲುಕು ಹಾಕಿದರು.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…