ಬೆಂಗಳೂರು: ದ್ವಾರಕೀಶ್ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ದ್ವಾರಕೀಶ್ ಅವರೊಂದಿಗೆ ಹೋಗಿದ್ದೆ ಎಂದು ಹಾಸ್ಯ ನಟ ದ್ವಾರಕೀಶ್ ಅವರೊಂದಿಗಿದ್ದ ತಮ್ಮ ಒಡನಾಟವನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.
ದ್ವಾರಕೀಶ್ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಒಬ್ಬ ನಟನಾಗಿ, ನಿರ್ಮಾಪಕ ಮತ್ತು ನಿರ್ದೇಶಕನಾಗಿ ಅವರು ಕನ್ನಡ ಚಿತ್ರರಂಗಕ್ಕೆ ಬಹು ದೊಡ್ಡ ಕಾಣಿಕೆ ಸಲ್ಲಿಸಿದ್ದಾರೆ. ದ್ವಾರಕೀಶ್ ಅವರು ಡಾ ರಾಜ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಅವರೊಂದಿಗೆ ನಟಿಸಿದ ಚಿತ್ರಗಳನ್ನು ನೋಡಿದ್ದೇನೆ ಎಂದು ಹೇಳಿದರು.
ದ್ವಾರಕೀಶ್ ಸಿನಿಮಾದಲ್ಲಿ ಹಲವಾರು ಏಳುಬೀಳು ಕಂಡಿದ್ದಾರೆ. ಸೋತಾಗ ಎದೆಗುಂದದೇ ಮುಂದೆ ಸಾಗಿದ ಅವರ ಆತ್ಮಸ್ಥೈರ್ಯ ಅಭಿನಂದನೀಯ. ಕನ್ನಡ ಚಿತ್ರರಂಗಕ್ಕೆ ನಟ, ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿ ದ್ವಾರಕೀಶ್ ಅಪಾರ ಸೇವೆಯನ್ನು ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ಹಾಸ್ಯನಟರಾಗಿ, ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದವರು ಎಂದರು.
ದ್ವಾರಕೀಶ್ ನಮ್ಮೂರಿನವ್ರು, ತುಂಬಾ ಕಷ್ಟ ಜೀವಿ, ಒಮ್ಮೆ ಅವರೊಂದಿಗೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುವಾಗ ಸಿನಿಮಾ, ರಾಜಕೀಯ, ಸಾಮಾಜಿಕ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ ಎಂದು ಅವರೊಂದಿಗಿನ ಹಳೇ ನೆನಪುಗಳನ್ನು ಮೆಲುಕು ಹಾಕಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…