ಮನರಂಜನೆ

ದ್ವಾರಕೀಶ್‌ ಜತೆಗಿನ ಒಡನಾಟ ಸ್ಮರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದ್ವಾರಕೀಶ್‌ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ದ್ವಾರಕೀಶ್‌ ಅವರೊಂದಿಗೆ ಹೋಗಿದ್ದೆ ಎಂದು ಹಾಸ್ಯ ನಟ ದ್ವಾರಕೀಶ್‌ ಅವರೊಂದಿಗಿದ್ದ ತಮ್ಮ ಒಡನಾಟವನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ದ್ವಾರಕೀಶ್ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಒಬ್ಬ ನಟನಾಗಿ, ನಿರ್ಮಾಪಕ ಮತ್ತು ನಿರ್ದೇಶಕನಾಗಿ ಅವರು ಕನ್ನಡ ಚಿತ್ರರಂಗಕ್ಕೆ ಬಹು ದೊಡ್ಡ ಕಾಣಿಕೆ ಸಲ್ಲಿಸಿದ್ದಾರೆ. ದ್ವಾರಕೀಶ್ ಅವರು ಡಾ ರಾಜ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಅವರೊಂದಿಗೆ ನಟಿಸಿದ ಚಿತ್ರಗಳನ್ನು ನೋಡಿದ್ದೇನೆ ಎಂದು ಹೇಳಿದರು.

ದ್ವಾರಕೀಶ್‌ ಸಿನಿಮಾದಲ್ಲಿ ಹಲವಾರು ಏಳುಬೀಳು ಕಂಡಿದ್ದಾರೆ. ಸೋತಾಗ ಎದೆಗುಂದದೇ ಮುಂದೆ ಸಾಗಿದ ಅವರ ಆತ್ಮಸ್ಥೈರ್ಯ ಅಭಿನಂದನೀಯ. ಕನ್ನಡ ಚಿತ್ರರಂಗಕ್ಕೆ ನಟ, ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿ ದ್ವಾರಕೀಶ್ ಅಪಾರ ಸೇವೆಯನ್ನು ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ಹಾಸ್ಯನಟರಾಗಿ, ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದವರು ಎಂದರು.

ದ್ವಾರಕೀಶ್‌ ನಮ್ಮೂರಿನವ್ರು, ತುಂಬಾ ಕಷ್ಟ ಜೀವಿ, ಒಮ್ಮೆ ಅವರೊಂದಿಗೆ ಮೈಸೂರಿಗೆ ಹೆಲಿಕಾಪ್ಟರ್‌ ನಲ್ಲಿ ಪ್ರಯಾಣಿಸುವಾಗ ಸಿನಿಮಾ, ರಾಜಕೀಯ, ಸಾಮಾಜಿಕ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ ಎಂದು ಅವರೊಂದಿಗಿನ ಹಳೇ ನೆನಪುಗಳನ್ನು ಮೆಲುಕು ಹಾಕಿದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

3 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

3 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

3 hours ago