ಮನರಂಜನೆ

ಪುಟ್ಟಣ್ಣನ ಕತ್ತೆ’ಯ ಜೊತೆಗೆ ಬಂದ ಸಿದ್ದು ಪೂರ್ಣಚಂದ್ರ

‘ದಾರಿ ಯಾವುದಯ್ಯ ವೈಕುಂಠಕೆ’, ‘ತಾರಿಣಿ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಸಿದ್ದು ಪೂರ್ಣಚಂದ್ರ, ಈ ಚಿತ್ರಗಳ ನಂತರ ‘ಬ್ರಹ್ಮಕಮಲ’ ಮತ್ತು ‘ಈ ಪಾದ ಪುಣ್ಯ ಪಾದ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿ ಬಂದಿತ್ತು. ಈ ಎರಡೂ ಚಿತ್ರಗಳ ಬಿಡುಗಡೆಗೂ ಮೊದಲೇ ಅವರು ಸದ್ದಿಲ್ಲದೆ ಇನ್ನೊಂದು ಚಿತ್ರ ಶುರು ಮಾಡಿದ್ದು, ಈ ಚಿತ್ರದ ಅರ್ಧ ಚಿತ್ರೀಕರಣವಾಗಿದೆ.

ಸಿದ್ದು ನಿರ್ದೇಶಿಸುತ್ತಿರುವ ಹೊಸ ಚಿತ್ರದ ಹೆಸರು ‘ಪುಟ್ಟಣ್ಣನ ಕತ್ತೆ’. ಈ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ ಆಗಿದೆ. ಈ ಪೋಸ್ಟರ್‌ನಲ್ಲಿ ಕತ್ತೆಯನ್ನು ತೋರಿಸಿರುವುದು ಚಿತ್ರದ ಶುಭ ಸೂಚನೆ ಎಂದು ಚಿತ್ರ ತಂಡ ಹೇಳಿಕೊಂಡಿದೆ. ಮುಂದಿನ ಪೋಸ್ಟರ್‌ನಲ್ಲಿ ಕಲಾವಿದರನ್ನು ತೋರಿಸಲಾಗುತ್ತದೆಯಂತೆ.

ಈ ಚಿತ್ರದ ಕುರಿತು ಮಾತನಾಡುವ ಸಿದ್ದು ಪೂರ್ಣಚಂದ್ರ, ‘ಎಲ್ಲರೂ ನಾಯಿ ಮೇಲೆ ಚಿತ್ರ ಮಾಡಿದರೆ, ನಾನ್ಯಾಕೆ ಕತ್ತೆ ಮೇಲೆ ಕತೆ ಬರೆದು ಚಿತ್ರ ಮಾಡಬಾರದು ಎಂದು ಐಡಿಯಾ ಬಂದಾಗ ಈ ಕಥೆ ಹೊಳೆಯಿತು. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಮನುಷ್ಯರ ಜೊತೆ ಕತ್ತೆಯನ್ನು ಬಳಸಲಾಗಿದೆ. ಮೊದಲಿಗೆ ಇದು ಸಾವಾಲಾಗಿತ್ತು. ಕ್ರಮೇಣ, ಕತ್ತೆಯ ಜೊತೆಗೆ ನಟರನ್ನು ಬಿಟ್ಟು ಅಭ್ಯಾಸ ಮಾಡಿಸಿದೆವು. ಅದರೊಂದಿಗೆ ಬಾಂಧವ್ಯ ಬೆಳೆಸಿಕೊಂಡ ನಂತರ ಚಿತ್ರೀಕರಣ ಮಾಡಲಾಯಿತು’ ಎಂದು ಹೇಳಿಕೊಂಡಿದ್ದಾರೆ.

ಕತ್ತೆಯ ಜೊತೆಗಿನ ಒಡನಾಟ ಹೊಸದಾದ್ದರಿಂದ, ಅದರ ಮನಸ್ಥಿತಿ ನೋಡಿಕೊಂಡು ಚಿತ್ರೀಕರಣ ಮಾಡಿದೆವು ಎನ್ನುವ ಸಿದ್ದು, ‘ಮುಂದಿನ ಇನ್ನೊಂದು ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ. ಪ್ರಾರಂಭದಲ್ಲಿ ಕಷ್ಟವೆನಿಸಿದರೂ ಒಂದೆರಡು ದಿನಗಳಲ್ಲಿ ಕತ್ತೆಯೂ ನಮ್ಮೊಂದಿಗೆ ಸಹಕರಿಸಿದ್ದು ವಿಶೇಷ’ ಎಂದಿರುವ ಸಿದ್ದು ಪೂರ್ಣಚಂದ್ರ, ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಪೂರ್ಣಚಂದ್ರ ಫಿಲಂಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ತನ್ಮಯ್ ಎಸ್. ಗೌಡ ಬಂಡವಾಳ ಹೂಡಿದ್ದಾರೆ. ಮುಖ್ಯ ಪಾತ್ರದಲ್ಲಿ ಅನಿಶ್ ಆರ್ಯನ್, ಭೀಮೇಶ್ ಅಭಿನಯಿಸಿದ್ದಾರೆ. ಉಳಿದಂತೆ ಕಲಾರತಿ ಮಹದೇವ್, ಸಿದ್ದು ಮಂಡ್ಯ, ರಶ್ಮಿ ಮೈಸೂರು, ಬಾಬು, ರೋಹಿಣಿ, ಎನ್.ಟಿ.ರಾಮಸ್ವಾಮಿ, ಲಕ್ಕಿ ಶಂಕರ್, ಶೃತಿ ಗಗನ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ಅನಂತ್ ಆರ್ಯನ್‍ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

4 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

5 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

5 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

6 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

6 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

6 hours ago