ಮನರಂಜನೆ

‘ಲವ್ ಯು ಮುದ್ದು’ ಎಂದ ಸಿದ್ದು ಮೂಲಿಮನಿ …

ಕೆಲವು ದಿನಗಳ ಹಿಂದಷ್ಟೇ ‘ಸೀಟ್‍ ಎಡ್ಜ್’ ಎಂಬ ಚಿತ್ರದಲ್ಲಿ ಸಿದ್ದು ಮೂಲಿಮನಿ ನಾಯಕನಾಗಿ ನಟಿಸುತ್ತಿರುವ ಸುದ್ದಿ ಬಂದಿತ್ತು. ‘ವಿಕ್ರಾಂತ್‍ ರೋಣ’, ‘ರಂಗಿ ತರಂಗ’, ‘ಅಜ್ಞಾತವಾಸಿ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ಸಿದ್ದು ಮೂಲಿಮನಿ, ಹಾರರ್ ಕಾಮಿಡಿಯಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಅದರಲ್ಲಿ ಹೆದರಿಸುವ ಜೊತೆಗೆ ಕಾಮಿಡಿ ಮಾಡಿದ್ದ ಸಿದ್ದು, ಇದೀಗ ಪ್ರೀತಿ ಮಾಡುವುದಕ್ಕೆ ಮುಂದಾಗಿದ್ದಾರೆ. ‘ಲವ್‍ ಯೂ ಮುದ್ದು’ ಎಂದು ಪ್ರೀತಿಸುವುದಕ್ಕೆ ರೆಡಿಯಾಗಿದ್ದಾರೆ.

‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್‍ ಕೀರ್ತನೆಗಳು’ ಮುಂತಾದ ವಿಭಿನ್ನ ಹೆಸರಿನ ಮತ್ತು ಕಥೆಗಳಿದ್ದ ಚಿತ್ರಗಳನ್ನು ನಿರ್ದೇಶಿಸಿದ್ದ ಕುಮಾರ್ ನಿರ್ದೇಶನದ ಇದೀಗ ಪ್ರೇಮಕಥೆಯೊಂದಿಗೆ ಬಂದಿದ್ದಾರೆ. ಅವರ ಹೊಸ ಸಿನಿಮಾ ‘ಲವ್ ಯು ಮುದ್ದು’ ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ. MRT ಮ್ಯೂಸಿಕ್ ಯೂಟ್ಯೂಬ್ ನಲ್ಲಿ ‘ಲವ್ ಯು ಮುದ್ದು’ ಚಿತ್ರದ ಮೆಲೋಡಿ ಗೀತೆ ಬಿಡುಗಡೆ ಆಗಿದೆ.

ಇದನ್ನು ಓದಿ: ‘ಮಾರುತ’ ಚಿತ್ರದಲ್ಲಿ ನಾಯಕ ನಾನಲ್ಲ ಎಂದ ‘ದುನಿಯಾ’ ವಿಜಯ್

ಅನಿರುದ್ಧ್ ಶಾಸ್ತ್ತೀ ಸಾಹಿತ್ಯ ಬರೆದು ಸಂಗೀತ ಸಂಯೋಜಿಸಿರುವ ಹಾಡಿಗೆ ಸೋನು ನಿಗಮ್, ಐಶ್ವರ್ಯ ರಂಗರಾಜನ್ ಹಾಗೂ ಸುರಭಿ ಭಾರದ್ವಾಜ್ ಧ್ವನಿಯಾಗಿದ್ದಾರೆ. ‘ಲವ್ ಯು ಮುದ್ದು’ ಹಾಡಿಗೆ ಸಿದ್ದು ಮೂಲಿಮನಿ ಮತ್ತು ರೇಷ್ಮಾ ಹೆಜ್ಜೆ ಹಾಕಿದ್ದಾರೆ.

‘ಲವ್ ಯು ಮುದ್ದು’ ಮಹಾರಾಷ್ಟ್ರದಲ್ಲಿ ನಡೆದ ನೈಜ ಪ್ರೇಮ ಕಥಾ ಹಂದರ ಒಳಗೊಂಡಿದೆ. ಸಿದ್ದು ಮತ್ತು ರೇಷ್ಮಾ ಜೊತೆಗೆ ರಾಜೇಶ್ ನಟರಂಗ, ತಬಲಾ ನಾಣಿ, ಗಿರೀಶ್ ಶಿವಣ್ಣ, ಶ್ರೀವತ್ಸ ಮತ್ತು ಉಷಾ ಚಿತ್ರದಲ್ಲಿದ್ದಾರೆ.

ಕಿಶನ್ ಎಂಟರ್‌ಟೈನ್ಮೆಂಟ್ ಬ್ಯಾನರ್‌ನಡಿ ಕಿಶನ್ ಟಿ.ಎನ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಕೃಷ್ಣ ದೀಪಕ್ ಛಾಯಾಗ್ರಹಣ, ಅನಿರುದ್ಧ್ ಶಾಸ್ತ್ರೀ ಸಂಗೀತವಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

29 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

31 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

34 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

38 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

42 mins ago