ಮನರಂಜನೆ

ಪ್ರೇಮಿಗಳ ದಿನದಂದು ಮತ್ತೆ ಬರಲಿದ್ದಾನೆ ‘ಸಿದ್ಲಿಂಗು’ …

ಯೋಗಿ ಅಭಿನಯದ ‘ಸಿದ್ಲಿಂಗು 2’ ಚಿತ್ರದ ಚಿತ್ರೀಕರಣವು ಕೆಲವು ತಿಂಗಳುಗಳ ಹಿಂದೆಯೇ ಮುಗಿದಿತ್ತು. ಆದರೆ, ಚಿತ್ರದ ಬಿಡುಗಡೆ ಯಾವಾಗ ಎಂದು ಚಿತ್ರತಂಡ ಘೋಷಣೆಯಾಗಿರಲಿಲ್ಲ. ಇದೀಗ ಪ್ರೇಮಿಗಳ ದಿನದಂದು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ.

ದಸರಾ ಹೊತ್ತಿಗೆ ಚಿತ್ರದ ಬಿಡುಗಡೆ ಮಾಡುವುದಾಗಿ ಹೇಳಿದ್ದರು ನಿರ್ದೇಶಕ ವಿಜಯಪ್ರಸಾದ್‍ ಮುಹೂರ್ತ ಸಮಾರಂಭದಲ್ಲೇ ಘೋಷಿಸಿದ್ದರು. ಆದರೆ, ಅವರು ಅಂದುಕೊಂಡಂತೆ ಆಗಲಿಲ್ಲ. ಇದೀಗ ಫೆಬ್ರವರಿ 14ರಂದು ʻಸಿದ್ಲಿಂಗು 2’ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.

2012ರಲ್ಲಿ ಯೋಗಿ ಅಭಿನಯದ ‘ಸಿದ್ಲಿಂಗು’ ಚಿತ್ರ ಬಿಡುಗಡೆಯಾಗಿತ್ತು. ಯೋಗಿ ಜೊತೆಗೆ ರಮ್ಯಾ, ಸುಮನ್‍ ರಂಗನಾಥ್‍, ಕೆ.ಎಸ್‍. ಶ್ರೀಧರ್‍, ಗಿರಿಜಾ ಲೋಕೇಶ್‍ ಮುಂತಾದವರು ಆ ಚಿತ್ರದಲ್ಲಿ ನಟಿಸಿದ್ದರು. ಇದೀಗ 13 ವರ್ಷಗಳ ನಂತರ ಚಿತ್ರದ ಮುಂದುವರೆದ ಭಾಗದೊಂದಿಗೆ ವಿಜಯಪ್ರಸಾದ್‍ ವಾಪಸ್ಸಾಗುತ್ತಿದ್ದಾರೆ. ಯೋಗಿ ಇಲ್ಲೂ ಮುಂದುವರೆಯಲಿದ್ದು, ಆ ಚಿತ್ರದ ಕೊನೆಯಲ್ಲಿ ರಮ್ಯಾ ಅವರ ಪಾತ್ರ ನಿಧನವಾಗುವುದರಿಂದ, ರಮ್ಯಾ ಪಾತ್ರ ಇಲ್ಲಿ ಮುಂದುವರೆಯುವುದಿಲ್ಲ. ಅದರ ಬದಲು ನಾಯಕಿಯಾಗಿ ಸೋನು ಕಾಣಿಸಿಕೊಂಡಿದ್ದಾರೆ. ಜೊತೆಗೆ ಆ ಚಿತ್ರದಲ್ಲಿ ಅಭಿನಯಿಸಿದ್ದ ಗಿರಿಜಾ ಲೋಕೇಶ್, ಸುಮನ್‍ ರಂಗನಾಥ್‍ ಮುಂತಾದವರು ಈ ಚಿತ್ರದಲ್ಲಿ ಮುಂದುವರೆಯಲಿದ್ದಾರೆ.

ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿರುವ ‘ಸಿದ್ಲಿಂಗು 2’ ಚಿತ್ರತಂಡ, ಡಬ್ಬಿಂಗ್ ಕಾರ್ಯವನ್ನೂ ಮುಗಿಸುವ ಹಂತಕ್ಕೆ ತಲುಪಿದ್ದು, ಮುಂದಿನ ವಾರದಲ್ಲಿ ನಾಯಕಿ ಸೋನುಗೌಡ ಅವರ ಮೊದಲನೋಟವನ್ನ ಅನಾವರಣಗೊಳಿಸಲು ಸಜ್ಜಾಗಿದೆ. ಇದರ ಜೊತೆಗೆ ಹಾಡಿನ ಲಿರೀಕಲ್ ವಿಡೀಯೋವನ್ನೂ ಬಿಡುಗಡೆ ಮಾಡಲು ತಯಾರಿ ನಡೆಸಿದೆ.

‘ಸಿದ್ಲಿಂಗು 2’ ಚಿತ್ರವನ್ನು ಶ್ರೀಹರಿ ಮತ್ತು ರಾಜು ಶೆರಿಗಾರ್‍ ಜೊತೆಯಾಗಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಅನೂಪ ಸೀಳಿನ್‍ ಸಂಗೀತ ಮತ್ತು ಪ್ರಸನ್ನ ಗುರಳಕೆರೆ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

4 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

5 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

5 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

6 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

6 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

6 hours ago