ಮನರಂಜನೆ

ಪ್ರೇಮಿಗಳ ದಿನದಂದು ಮತ್ತೆ ಬರಲಿದ್ದಾನೆ ‘ಸಿದ್ಲಿಂಗು’ …

ಯೋಗಿ ಅಭಿನಯದ ‘ಸಿದ್ಲಿಂಗು 2’ ಚಿತ್ರದ ಚಿತ್ರೀಕರಣವು ಕೆಲವು ತಿಂಗಳುಗಳ ಹಿಂದೆಯೇ ಮುಗಿದಿತ್ತು. ಆದರೆ, ಚಿತ್ರದ ಬಿಡುಗಡೆ ಯಾವಾಗ ಎಂದು ಚಿತ್ರತಂಡ ಘೋಷಣೆಯಾಗಿರಲಿಲ್ಲ. ಇದೀಗ ಪ್ರೇಮಿಗಳ ದಿನದಂದು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ.

ದಸರಾ ಹೊತ್ತಿಗೆ ಚಿತ್ರದ ಬಿಡುಗಡೆ ಮಾಡುವುದಾಗಿ ಹೇಳಿದ್ದರು ನಿರ್ದೇಶಕ ವಿಜಯಪ್ರಸಾದ್‍ ಮುಹೂರ್ತ ಸಮಾರಂಭದಲ್ಲೇ ಘೋಷಿಸಿದ್ದರು. ಆದರೆ, ಅವರು ಅಂದುಕೊಂಡಂತೆ ಆಗಲಿಲ್ಲ. ಇದೀಗ ಫೆಬ್ರವರಿ 14ರಂದು ʻಸಿದ್ಲಿಂಗು 2’ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.

2012ರಲ್ಲಿ ಯೋಗಿ ಅಭಿನಯದ ‘ಸಿದ್ಲಿಂಗು’ ಚಿತ್ರ ಬಿಡುಗಡೆಯಾಗಿತ್ತು. ಯೋಗಿ ಜೊತೆಗೆ ರಮ್ಯಾ, ಸುಮನ್‍ ರಂಗನಾಥ್‍, ಕೆ.ಎಸ್‍. ಶ್ರೀಧರ್‍, ಗಿರಿಜಾ ಲೋಕೇಶ್‍ ಮುಂತಾದವರು ಆ ಚಿತ್ರದಲ್ಲಿ ನಟಿಸಿದ್ದರು. ಇದೀಗ 13 ವರ್ಷಗಳ ನಂತರ ಚಿತ್ರದ ಮುಂದುವರೆದ ಭಾಗದೊಂದಿಗೆ ವಿಜಯಪ್ರಸಾದ್‍ ವಾಪಸ್ಸಾಗುತ್ತಿದ್ದಾರೆ. ಯೋಗಿ ಇಲ್ಲೂ ಮುಂದುವರೆಯಲಿದ್ದು, ಆ ಚಿತ್ರದ ಕೊನೆಯಲ್ಲಿ ರಮ್ಯಾ ಅವರ ಪಾತ್ರ ನಿಧನವಾಗುವುದರಿಂದ, ರಮ್ಯಾ ಪಾತ್ರ ಇಲ್ಲಿ ಮುಂದುವರೆಯುವುದಿಲ್ಲ. ಅದರ ಬದಲು ನಾಯಕಿಯಾಗಿ ಸೋನು ಕಾಣಿಸಿಕೊಂಡಿದ್ದಾರೆ. ಜೊತೆಗೆ ಆ ಚಿತ್ರದಲ್ಲಿ ಅಭಿನಯಿಸಿದ್ದ ಗಿರಿಜಾ ಲೋಕೇಶ್, ಸುಮನ್‍ ರಂಗನಾಥ್‍ ಮುಂತಾದವರು ಈ ಚಿತ್ರದಲ್ಲಿ ಮುಂದುವರೆಯಲಿದ್ದಾರೆ.

ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿರುವ ‘ಸಿದ್ಲಿಂಗು 2’ ಚಿತ್ರತಂಡ, ಡಬ್ಬಿಂಗ್ ಕಾರ್ಯವನ್ನೂ ಮುಗಿಸುವ ಹಂತಕ್ಕೆ ತಲುಪಿದ್ದು, ಮುಂದಿನ ವಾರದಲ್ಲಿ ನಾಯಕಿ ಸೋನುಗೌಡ ಅವರ ಮೊದಲನೋಟವನ್ನ ಅನಾವರಣಗೊಳಿಸಲು ಸಜ್ಜಾಗಿದೆ. ಇದರ ಜೊತೆಗೆ ಹಾಡಿನ ಲಿರೀಕಲ್ ವಿಡೀಯೋವನ್ನೂ ಬಿಡುಗಡೆ ಮಾಡಲು ತಯಾರಿ ನಡೆಸಿದೆ.

‘ಸಿದ್ಲಿಂಗು 2’ ಚಿತ್ರವನ್ನು ಶ್ರೀಹರಿ ಮತ್ತು ರಾಜು ಶೆರಿಗಾರ್‍ ಜೊತೆಯಾಗಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಅನೂಪ ಸೀಳಿನ್‍ ಸಂಗೀತ ಮತ್ತು ಪ್ರಸನ್ನ ಗುರಳಕೆರೆ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

32 mins ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

40 mins ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

1 hour ago

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

3 hours ago

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…

4 hours ago

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

5 hours ago