ಮನರಂಜನೆ

ಪ್ರೇಮಿಗಳ ದಿನದಂದು ಮತ್ತೆ ಬರಲಿದ್ದಾನೆ ‘ಸಿದ್ಲಿಂಗು’ …

ಯೋಗಿ ಅಭಿನಯದ ‘ಸಿದ್ಲಿಂಗು 2’ ಚಿತ್ರದ ಚಿತ್ರೀಕರಣವು ಕೆಲವು ತಿಂಗಳುಗಳ ಹಿಂದೆಯೇ ಮುಗಿದಿತ್ತು. ಆದರೆ, ಚಿತ್ರದ ಬಿಡುಗಡೆ ಯಾವಾಗ ಎಂದು ಚಿತ್ರತಂಡ ಘೋಷಣೆಯಾಗಿರಲಿಲ್ಲ. ಇದೀಗ ಪ್ರೇಮಿಗಳ ದಿನದಂದು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ.

ದಸರಾ ಹೊತ್ತಿಗೆ ಚಿತ್ರದ ಬಿಡುಗಡೆ ಮಾಡುವುದಾಗಿ ಹೇಳಿದ್ದರು ನಿರ್ದೇಶಕ ವಿಜಯಪ್ರಸಾದ್‍ ಮುಹೂರ್ತ ಸಮಾರಂಭದಲ್ಲೇ ಘೋಷಿಸಿದ್ದರು. ಆದರೆ, ಅವರು ಅಂದುಕೊಂಡಂತೆ ಆಗಲಿಲ್ಲ. ಇದೀಗ ಫೆಬ್ರವರಿ 14ರಂದು ʻಸಿದ್ಲಿಂಗು 2’ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.

2012ರಲ್ಲಿ ಯೋಗಿ ಅಭಿನಯದ ‘ಸಿದ್ಲಿಂಗು’ ಚಿತ್ರ ಬಿಡುಗಡೆಯಾಗಿತ್ತು. ಯೋಗಿ ಜೊತೆಗೆ ರಮ್ಯಾ, ಸುಮನ್‍ ರಂಗನಾಥ್‍, ಕೆ.ಎಸ್‍. ಶ್ರೀಧರ್‍, ಗಿರಿಜಾ ಲೋಕೇಶ್‍ ಮುಂತಾದವರು ಆ ಚಿತ್ರದಲ್ಲಿ ನಟಿಸಿದ್ದರು. ಇದೀಗ 13 ವರ್ಷಗಳ ನಂತರ ಚಿತ್ರದ ಮುಂದುವರೆದ ಭಾಗದೊಂದಿಗೆ ವಿಜಯಪ್ರಸಾದ್‍ ವಾಪಸ್ಸಾಗುತ್ತಿದ್ದಾರೆ. ಯೋಗಿ ಇಲ್ಲೂ ಮುಂದುವರೆಯಲಿದ್ದು, ಆ ಚಿತ್ರದ ಕೊನೆಯಲ್ಲಿ ರಮ್ಯಾ ಅವರ ಪಾತ್ರ ನಿಧನವಾಗುವುದರಿಂದ, ರಮ್ಯಾ ಪಾತ್ರ ಇಲ್ಲಿ ಮುಂದುವರೆಯುವುದಿಲ್ಲ. ಅದರ ಬದಲು ನಾಯಕಿಯಾಗಿ ಸೋನು ಕಾಣಿಸಿಕೊಂಡಿದ್ದಾರೆ. ಜೊತೆಗೆ ಆ ಚಿತ್ರದಲ್ಲಿ ಅಭಿನಯಿಸಿದ್ದ ಗಿರಿಜಾ ಲೋಕೇಶ್, ಸುಮನ್‍ ರಂಗನಾಥ್‍ ಮುಂತಾದವರು ಈ ಚಿತ್ರದಲ್ಲಿ ಮುಂದುವರೆಯಲಿದ್ದಾರೆ.

ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿರುವ ‘ಸಿದ್ಲಿಂಗು 2’ ಚಿತ್ರತಂಡ, ಡಬ್ಬಿಂಗ್ ಕಾರ್ಯವನ್ನೂ ಮುಗಿಸುವ ಹಂತಕ್ಕೆ ತಲುಪಿದ್ದು, ಮುಂದಿನ ವಾರದಲ್ಲಿ ನಾಯಕಿ ಸೋನುಗೌಡ ಅವರ ಮೊದಲನೋಟವನ್ನ ಅನಾವರಣಗೊಳಿಸಲು ಸಜ್ಜಾಗಿದೆ. ಇದರ ಜೊತೆಗೆ ಹಾಡಿನ ಲಿರೀಕಲ್ ವಿಡೀಯೋವನ್ನೂ ಬಿಡುಗಡೆ ಮಾಡಲು ತಯಾರಿ ನಡೆಸಿದೆ.

‘ಸಿದ್ಲಿಂಗು 2’ ಚಿತ್ರವನ್ನು ಶ್ರೀಹರಿ ಮತ್ತು ರಾಜು ಶೆರಿಗಾರ್‍ ಜೊತೆಯಾಗಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಅನೂಪ ಸೀಳಿನ್‍ ಸಂಗೀತ ಮತ್ತು ಪ್ರಸನ್ನ ಗುರಳಕೆರೆ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago