ಮನರಂಜನೆ

ಪ್ರೇಮಿಗಳ ದಿನದಂದು ಮತ್ತೆ ಬರಲಿದ್ದಾನೆ ‘ಸಿದ್ಲಿಂಗು’ …

ಯೋಗಿ ಅಭಿನಯದ ‘ಸಿದ್ಲಿಂಗು 2’ ಚಿತ್ರದ ಚಿತ್ರೀಕರಣವು ಕೆಲವು ತಿಂಗಳುಗಳ ಹಿಂದೆಯೇ ಮುಗಿದಿತ್ತು. ಆದರೆ, ಚಿತ್ರದ ಬಿಡುಗಡೆ ಯಾವಾಗ ಎಂದು ಚಿತ್ರತಂಡ ಘೋಷಣೆಯಾಗಿರಲಿಲ್ಲ. ಇದೀಗ ಪ್ರೇಮಿಗಳ ದಿನದಂದು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ.

ದಸರಾ ಹೊತ್ತಿಗೆ ಚಿತ್ರದ ಬಿಡುಗಡೆ ಮಾಡುವುದಾಗಿ ಹೇಳಿದ್ದರು ನಿರ್ದೇಶಕ ವಿಜಯಪ್ರಸಾದ್‍ ಮುಹೂರ್ತ ಸಮಾರಂಭದಲ್ಲೇ ಘೋಷಿಸಿದ್ದರು. ಆದರೆ, ಅವರು ಅಂದುಕೊಂಡಂತೆ ಆಗಲಿಲ್ಲ. ಇದೀಗ ಫೆಬ್ರವರಿ 14ರಂದು ʻಸಿದ್ಲಿಂಗು 2’ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.

2012ರಲ್ಲಿ ಯೋಗಿ ಅಭಿನಯದ ‘ಸಿದ್ಲಿಂಗು’ ಚಿತ್ರ ಬಿಡುಗಡೆಯಾಗಿತ್ತು. ಯೋಗಿ ಜೊತೆಗೆ ರಮ್ಯಾ, ಸುಮನ್‍ ರಂಗನಾಥ್‍, ಕೆ.ಎಸ್‍. ಶ್ರೀಧರ್‍, ಗಿರಿಜಾ ಲೋಕೇಶ್‍ ಮುಂತಾದವರು ಆ ಚಿತ್ರದಲ್ಲಿ ನಟಿಸಿದ್ದರು. ಇದೀಗ 13 ವರ್ಷಗಳ ನಂತರ ಚಿತ್ರದ ಮುಂದುವರೆದ ಭಾಗದೊಂದಿಗೆ ವಿಜಯಪ್ರಸಾದ್‍ ವಾಪಸ್ಸಾಗುತ್ತಿದ್ದಾರೆ. ಯೋಗಿ ಇಲ್ಲೂ ಮುಂದುವರೆಯಲಿದ್ದು, ಆ ಚಿತ್ರದ ಕೊನೆಯಲ್ಲಿ ರಮ್ಯಾ ಅವರ ಪಾತ್ರ ನಿಧನವಾಗುವುದರಿಂದ, ರಮ್ಯಾ ಪಾತ್ರ ಇಲ್ಲಿ ಮುಂದುವರೆಯುವುದಿಲ್ಲ. ಅದರ ಬದಲು ನಾಯಕಿಯಾಗಿ ಸೋನು ಕಾಣಿಸಿಕೊಂಡಿದ್ದಾರೆ. ಜೊತೆಗೆ ಆ ಚಿತ್ರದಲ್ಲಿ ಅಭಿನಯಿಸಿದ್ದ ಗಿರಿಜಾ ಲೋಕೇಶ್, ಸುಮನ್‍ ರಂಗನಾಥ್‍ ಮುಂತಾದವರು ಈ ಚಿತ್ರದಲ್ಲಿ ಮುಂದುವರೆಯಲಿದ್ದಾರೆ.

ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿರುವ ‘ಸಿದ್ಲಿಂಗು 2’ ಚಿತ್ರತಂಡ, ಡಬ್ಬಿಂಗ್ ಕಾರ್ಯವನ್ನೂ ಮುಗಿಸುವ ಹಂತಕ್ಕೆ ತಲುಪಿದ್ದು, ಮುಂದಿನ ವಾರದಲ್ಲಿ ನಾಯಕಿ ಸೋನುಗೌಡ ಅವರ ಮೊದಲನೋಟವನ್ನ ಅನಾವರಣಗೊಳಿಸಲು ಸಜ್ಜಾಗಿದೆ. ಇದರ ಜೊತೆಗೆ ಹಾಡಿನ ಲಿರೀಕಲ್ ವಿಡೀಯೋವನ್ನೂ ಬಿಡುಗಡೆ ಮಾಡಲು ತಯಾರಿ ನಡೆಸಿದೆ.

‘ಸಿದ್ಲಿಂಗು 2’ ಚಿತ್ರವನ್ನು ಶ್ರೀಹರಿ ಮತ್ತು ರಾಜು ಶೆರಿಗಾರ್‍ ಜೊತೆಯಾಗಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಅನೂಪ ಸೀಳಿನ್‍ ಸಂಗೀತ ಮತ್ತು ಪ್ರಸನ್ನ ಗುರಳಕೆರೆ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

7 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

7 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

7 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

7 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

7 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

7 hours ago