ಮನರಂಜನೆ

‘ನಾನು ಮತ್ತು ಗುಂಡ ೨’ ಚಿತ್ರಕ್ಕೆ ಡಬ್ಬಿಂಗ್‍ ಮಾಡಿದ ಸಿಂಬ

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ಶಿವರಾಜ್‍ ಕೆ.ಆರ್‍. ಪೇಟೆ ಅಭಿನಯದ ‘ನಾನು ‘ಮತ್ತು ಗುಂಡ’ ಚಿತ್ರದ ಮುಂದುವರೆದ ಭಾಗ ಬಂದಿರುವ ವಿಷಯ ಗೊತ್ತೇ ಇದೆ. ಈಗ ಆ ಚಿತ್ರದ ಮುಂದುವರೆದ ಭಾಗ ಬರುತ್ತಿದ್ದು, ಅದರಲ್ಲಿ ರಾಕೇಶ್‍ ಅಡಿಗ ಜೊತೆಗೆ ಸಿಂಬ ಹೆಸರಿನ ಶ್ವಾನ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ.

ರಘು ಹಾಸನ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಮುಗಿದಿದ್ದು, ಡಬ್ಬಿಂಗ್ ಕೆಲಸ ಈಗಷ್ಟೇ ಶುರುವಾಗಿದೆ. ವಿಶೇಷವೆಂದರೆ, ಈ ಚಿತ್ರದಲ್ಲಿನ ತನ್ನ ಪಾತ್ರಕ್ಕಾಗಿ ಸಿಂಬಾ ತಾನೇ ಡಬ್ ಮಾಡುತ್ತಿದೆ. ಇಡೀ ಚಿತ್ರದಲ್ಲಿ ಸಿಂಬಾನ ಒರಿಜಿನಲ್ ಸೌಂಡ್ ಇರುತ್ತದೆ. ಡಬ್ಬಿಂಗ್ ಅಂದರೆ, ಚಿತ್ರದಲ್ಲಿ ಎಲ್ಲಿ ಅವಶ್ಯಕತೆ ಇದೆಯೋ, ಅಲ್ಲಿ ಅದರ ಬೊಗಳೋ ಸೌಂಡ್ ರೆಕಾರ್ಡ್ ಮಾಡಲಾಗುತ್ತಿದೆ.

ಈ ಕುರಿತು ಮಾತನಾಡುವ ನಿರ್ದೇಶಕ ರಘು ಹಾಸನ್‍, ‘ಸಿಂಬಾನ ನೈಜ ಶಬ್ಧವನ್ನೇ ನಾವು ರೆಕಾರ್ಡ್ ಮಾಡುತ್ತಿದ್ದೇವೆ. ಎಮೋಷನಲ್ ದೃಶ್ಯಗಳಲ್ಲೂ ಸಿಂಬಾ ಡಬ್ಬಿಂಗ್ ಮಾಡುತ್ತಿದೆ. ಪ್ರತಿ ಜಾತಿಯ ನಾಯಿಯದೂ ಒಂದೊಂದು ರೀತಿ ಸೌಂಡ್ ಇರುತ್ತದೆ. ಹಾಗಾಗಿಯೇ ನಾವು ನಮ್ಮ ಗುಂಡನ ಪಾತ್ರ ಮಾಡಿರೋ ಸಿಂಬಾನಿಂದಲೇ ಡಬ್ಬಿಂಗ್ ಮಾಡಿಸುತ್ತಿದ್ದೇವೆ. ಭಾರತೀಯ ಚಿತ್ರರಂಗದಲ್ಲೇ, ಶ್ವಾನದಿಂದ ಡಬ್‍ ಮಾಡಿಸುತ್ತಿರುವ ಪ್ರಯತ್ನ ಇದೇ ಮೊದಲು ಎನ್ನಬಹುದು. ಮೊದಲ ಭಾಗದ ಕೆಲವು ದೃಶ್ಯಗಳಲ್ಲೂ ಡಬ್‍ ಮಾಡಿಸಲಾಗಿತ್ತು. ಮುಂದುವರೆದ ಭಾಗದಲ್ಲಿ ಪೂರ್ತಿ ಸಿಂಬ ಡಬ್‍ ಮಾಡುತ್ತಿದೆ’ ಎನ್ನುತ್ತಾರೆ.

ಡಬ್ಬಿಂಗ್ ಕೆಲಸ ಆದ್ಮೇಲೆ ಚಿತ್ರದ DI ಮತ್ತು ಹಿನ್ನೆಲೆ ಸಂಗೀತದ ಕೆಲಸ ಶುರು ಮಾಡಲಾಗುತ್ತದೆ. ಈ ಚಿತ್ರವು ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ.

‘ನಾನು ಮತ್ತು ಗುಂಡ 2’ ಚಿತ್ರವನ್ನು ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ರಘು ಹಾಸನ್‍ ನಿರ್ಮಾಣ ಮಾಡುತ್ತಿದ್ದು, ಆರ್.ಪಿ. ಪಟ್ನಾಯಕ್ ಸಂಗೀತ, ರುತ್ವಿಕ್ ಮುರಳೀಧರ್ ಹಿನ್ನೆಲೆ ಸಂಗೀತ, ತನ್ವಿಕ್ ಅವರ ಛಾಯಾಗ್ರಹಣವಿದೆ. ರಾಕೇಶ್ ಅಡಿಗಗೆ ನಾಯಕಿಯಾಗಿ ರಚನಾ ಇಂದರ್‍ ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

2 mins ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

11 mins ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

26 mins ago

400ಕೋಟಿ ಲೂಟಿ ಪ್ರಕರಣ : ಆರೋಪವೇ ನಕಲಿ ಎಂದ ಎಸ್‌ಐಟಿ ವರದಿ

ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…

1 hour ago

ಕೋಲಾರದಲ್ಲಿ ದೇಶದ ಮೊದಲ ಹೆಲಿಕಾಪ್ಟರ್‌ ತಯಾರಕ ಘಟಕ : ನಾಳೆ ಮೋದಿ-ಮ್ಯಾಕ್ರಾಂ ಚಾಲನೆ

ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…

1 hour ago

ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಶ್ಯ : ರೇಡಿಯೋ ಕಿಶಾನ್‌ ಕಾರ್ಯಕ್ರಮದಲ್ಲಿ ಹರಿಣಿಕುಮಾರ್‌

ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…

2 hours ago