ಮನರಂಜನೆ

‘ನಾನು ಮತ್ತು ಗುಂಡ ೨’ ಚಿತ್ರಕ್ಕೆ ಡಬ್ಬಿಂಗ್‍ ಮಾಡಿದ ಸಿಂಬ

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ಶಿವರಾಜ್‍ ಕೆ.ಆರ್‍. ಪೇಟೆ ಅಭಿನಯದ ‘ನಾನು ‘ಮತ್ತು ಗುಂಡ’ ಚಿತ್ರದ ಮುಂದುವರೆದ ಭಾಗ ಬಂದಿರುವ ವಿಷಯ ಗೊತ್ತೇ ಇದೆ. ಈಗ ಆ ಚಿತ್ರದ ಮುಂದುವರೆದ ಭಾಗ ಬರುತ್ತಿದ್ದು, ಅದರಲ್ಲಿ ರಾಕೇಶ್‍ ಅಡಿಗ ಜೊತೆಗೆ ಸಿಂಬ ಹೆಸರಿನ ಶ್ವಾನ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ.

ರಘು ಹಾಸನ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಮುಗಿದಿದ್ದು, ಡಬ್ಬಿಂಗ್ ಕೆಲಸ ಈಗಷ್ಟೇ ಶುರುವಾಗಿದೆ. ವಿಶೇಷವೆಂದರೆ, ಈ ಚಿತ್ರದಲ್ಲಿನ ತನ್ನ ಪಾತ್ರಕ್ಕಾಗಿ ಸಿಂಬಾ ತಾನೇ ಡಬ್ ಮಾಡುತ್ತಿದೆ. ಇಡೀ ಚಿತ್ರದಲ್ಲಿ ಸಿಂಬಾನ ಒರಿಜಿನಲ್ ಸೌಂಡ್ ಇರುತ್ತದೆ. ಡಬ್ಬಿಂಗ್ ಅಂದರೆ, ಚಿತ್ರದಲ್ಲಿ ಎಲ್ಲಿ ಅವಶ್ಯಕತೆ ಇದೆಯೋ, ಅಲ್ಲಿ ಅದರ ಬೊಗಳೋ ಸೌಂಡ್ ರೆಕಾರ್ಡ್ ಮಾಡಲಾಗುತ್ತಿದೆ.

ಈ ಕುರಿತು ಮಾತನಾಡುವ ನಿರ್ದೇಶಕ ರಘು ಹಾಸನ್‍, ‘ಸಿಂಬಾನ ನೈಜ ಶಬ್ಧವನ್ನೇ ನಾವು ರೆಕಾರ್ಡ್ ಮಾಡುತ್ತಿದ್ದೇವೆ. ಎಮೋಷನಲ್ ದೃಶ್ಯಗಳಲ್ಲೂ ಸಿಂಬಾ ಡಬ್ಬಿಂಗ್ ಮಾಡುತ್ತಿದೆ. ಪ್ರತಿ ಜಾತಿಯ ನಾಯಿಯದೂ ಒಂದೊಂದು ರೀತಿ ಸೌಂಡ್ ಇರುತ್ತದೆ. ಹಾಗಾಗಿಯೇ ನಾವು ನಮ್ಮ ಗುಂಡನ ಪಾತ್ರ ಮಾಡಿರೋ ಸಿಂಬಾನಿಂದಲೇ ಡಬ್ಬಿಂಗ್ ಮಾಡಿಸುತ್ತಿದ್ದೇವೆ. ಭಾರತೀಯ ಚಿತ್ರರಂಗದಲ್ಲೇ, ಶ್ವಾನದಿಂದ ಡಬ್‍ ಮಾಡಿಸುತ್ತಿರುವ ಪ್ರಯತ್ನ ಇದೇ ಮೊದಲು ಎನ್ನಬಹುದು. ಮೊದಲ ಭಾಗದ ಕೆಲವು ದೃಶ್ಯಗಳಲ್ಲೂ ಡಬ್‍ ಮಾಡಿಸಲಾಗಿತ್ತು. ಮುಂದುವರೆದ ಭಾಗದಲ್ಲಿ ಪೂರ್ತಿ ಸಿಂಬ ಡಬ್‍ ಮಾಡುತ್ತಿದೆ’ ಎನ್ನುತ್ತಾರೆ.

ಡಬ್ಬಿಂಗ್ ಕೆಲಸ ಆದ್ಮೇಲೆ ಚಿತ್ರದ DI ಮತ್ತು ಹಿನ್ನೆಲೆ ಸಂಗೀತದ ಕೆಲಸ ಶುರು ಮಾಡಲಾಗುತ್ತದೆ. ಈ ಚಿತ್ರವು ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ.

‘ನಾನು ಮತ್ತು ಗುಂಡ 2’ ಚಿತ್ರವನ್ನು ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ರಘು ಹಾಸನ್‍ ನಿರ್ಮಾಣ ಮಾಡುತ್ತಿದ್ದು, ಆರ್.ಪಿ. ಪಟ್ನಾಯಕ್ ಸಂಗೀತ, ರುತ್ವಿಕ್ ಮುರಳೀಧರ್ ಹಿನ್ನೆಲೆ ಸಂಗೀತ, ತನ್ವಿಕ್ ಅವರ ಛಾಯಾಗ್ರಹಣವಿದೆ. ರಾಕೇಶ್ ಅಡಿಗಗೆ ನಾಯಕಿಯಾಗಿ ರಚನಾ ಇಂದರ್‍ ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

6 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

6 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

8 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

10 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

10 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

11 hours ago