ಮನರಂಜನೆ

ಕಾರ್ತಿಕ್‍ ಮಹೇಶ್‍ ಅಭಿನಯದಲ್ಲಿ ‘ಸಿಂಪಲ್’ ಸುನಿ ಹೊಸ ಚಿತ್ರ

‘ಸಿಂಪಲ್‍’ ಸುನಿ ಅಭಿನಯದ ‘ಗತವವೈಭವ’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಸುನಿ ತಿಳಿಸಿದ್ದಾರೆ. ಈ ಮಧ್ಯೆ, ‘ಬಿಗ್‍ ಬಾಸ್‍’ನ ಕಾರ್ತಿಕ್‍ ಮಹೇಶ್ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಪ್ರಾರಂಭಿಸುವುದಕ್ಕೆ ಸಜ್ಜಾಗಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಸಿನಿಮಾಗಳನ್ನು ನಿರ್ಮಿಸುವ ಆಶಯದೊಂದಿಗೆ ಬೆಂಗಳೂರಿನ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ತಮ್ಮದೇ ಎ.ವಿ.ಆರ್ ಎಂಟರ್‍ಟೈನರ್ಸ್ ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದು, ಈ ಬ್ಯಾನರ್ ಅಡಿ ಏಕಕಾಲಕ್ಕೆ ಎರಡು ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ.

ಈ ಪೈಕಿ ‘ಸಿಂಪಲ್‍’ ಸುನಿ ಮತ್ತು ಕಾರ್ತಿಕ್‍ ಮಹೇಶ್‍ ಚಿತರವೂ ಒಂದು. ಈ ಚಿತ್ರಕ್ಕೆ ‘ರಿಚಿ ರಿಚ್’ ಎಂಬ ಹೆಸರನ್ನು ಇಡಲಾಗಿದೆ. ಈ ಚಿತ್ರದಲ್ಲಿ ಕಾರ್ತಿಕ್‍, ರಿದ್ದೇಶ್ ಚಿನ್ನಯ್ಯ ಎಂಬ ಪಾತ್ರದಲ್ಲಿ ಕಾರ್ತಿಕ್ ನಟಿಸುತ್ತಿದ್ದಾರೆ. ಕೌಟಂಬಿಕ ಜೊತೆಗೆ ಎಮೋಷನಲ್ ಅಂಶಗಳನ್ನು ಸೇರಿಸಿ ಸುನಿ ಕಥೆ ಬರೆದಿದ್ದಾರೆ. ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ಮತ್ತು ಅಭಿಲಾಷ್ ಕಳತ್ತಿ ಛಾಯಾಗ್ರಹಣವಿರಲಿದೆ.

AVR Entertainers ಬ್ಯಾನರ್ ಅಡಿ ನಿರ್ಮಾಣವಾಗುತ್ತಿರುವ ಎರಡನೇ ಸಿನಿಮಾಗೆ ಸುಜಯ್ ಶಾಸ್ತ್ರಿ ನಿರ್ದೇಶಕರು. ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ‘ಎಲ್ರ ಕಾಲೆಳೆಯುತ್ತೆ ಕಾಲ’ ಚಿತ್ರಗಳನ್ನು ನಿರ್ದೇಶಿಸಿರುವ ಸುಜಯ್ ಈ ಬಾರಿ ಕ್ರೀಡಾ ಕಥೆಯನ್ನು ತೆರೆಯ ಮೇಲೆ ತರುವುದಕ್ಕೆ ಹೊರಟಿದ್ದಾರೆ. ಈ ಚಿತ್ರಕ್ಕೆ ಅವರೇ ಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. ‘8’ ಹೆಸರಿನ ಈ ಚಿತ್ರಕ್ಕೆ ಪುಟ್ಭಲ್ ಹಿನ್ನೆಲೆಯ ಕಥೆ ಇದೆ. ಈ ಚಿತ್ರದ ನಾಯಕ ಯಾರು? ಅನ್ನೋದನ್ನು ಸದ್ಯಕ್ಕೆ ಸಸ್ಪೆನ್ಸ್ ಆಗಿ ಇಡಲಾಗಿದೆ. ಟೀಂ ರೆಡಿ ಇದೆ. ಕೋಚ್ ಯಾರು ಅನ್ನೋದನ್ನು ಸ್ಪಲ್ಪ ದಿನದಲ್ಲೇ ಹೇಳೋದಾಗಿ ಚಿತ್ರತಂಡ ತಿಳಿಸಿದೆ.

‘ರಿಚಿ ರಿಚ್‍’ ಮತ್ತು ‘8’ ಚಿತ್ರಗಳು ಸದ್ಯದಲ್ಲೇ ಪ್ರಾರಂಭವಾಗಲಿದೆ.

ಭೂಮಿಕಾ

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

7 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

8 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

9 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

9 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

9 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

9 hours ago