ಮನರಂಜನೆ

ಕಾರ್ತಿಕ್‍ ಮಹೇಶ್‍ ಅಭಿನಯದಲ್ಲಿ ‘ಸಿಂಪಲ್’ ಸುನಿ ಹೊಸ ಚಿತ್ರ

‘ಸಿಂಪಲ್‍’ ಸುನಿ ಅಭಿನಯದ ‘ಗತವವೈಭವ’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಸುನಿ ತಿಳಿಸಿದ್ದಾರೆ. ಈ ಮಧ್ಯೆ, ‘ಬಿಗ್‍ ಬಾಸ್‍’ನ ಕಾರ್ತಿಕ್‍ ಮಹೇಶ್ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಪ್ರಾರಂಭಿಸುವುದಕ್ಕೆ ಸಜ್ಜಾಗಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಸಿನಿಮಾಗಳನ್ನು ನಿರ್ಮಿಸುವ ಆಶಯದೊಂದಿಗೆ ಬೆಂಗಳೂರಿನ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ತಮ್ಮದೇ ಎ.ವಿ.ಆರ್ ಎಂಟರ್‍ಟೈನರ್ಸ್ ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದು, ಈ ಬ್ಯಾನರ್ ಅಡಿ ಏಕಕಾಲಕ್ಕೆ ಎರಡು ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ.

ಈ ಪೈಕಿ ‘ಸಿಂಪಲ್‍’ ಸುನಿ ಮತ್ತು ಕಾರ್ತಿಕ್‍ ಮಹೇಶ್‍ ಚಿತರವೂ ಒಂದು. ಈ ಚಿತ್ರಕ್ಕೆ ‘ರಿಚಿ ರಿಚ್’ ಎಂಬ ಹೆಸರನ್ನು ಇಡಲಾಗಿದೆ. ಈ ಚಿತ್ರದಲ್ಲಿ ಕಾರ್ತಿಕ್‍, ರಿದ್ದೇಶ್ ಚಿನ್ನಯ್ಯ ಎಂಬ ಪಾತ್ರದಲ್ಲಿ ಕಾರ್ತಿಕ್ ನಟಿಸುತ್ತಿದ್ದಾರೆ. ಕೌಟಂಬಿಕ ಜೊತೆಗೆ ಎಮೋಷನಲ್ ಅಂಶಗಳನ್ನು ಸೇರಿಸಿ ಸುನಿ ಕಥೆ ಬರೆದಿದ್ದಾರೆ. ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ಮತ್ತು ಅಭಿಲಾಷ್ ಕಳತ್ತಿ ಛಾಯಾಗ್ರಹಣವಿರಲಿದೆ.

AVR Entertainers ಬ್ಯಾನರ್ ಅಡಿ ನಿರ್ಮಾಣವಾಗುತ್ತಿರುವ ಎರಡನೇ ಸಿನಿಮಾಗೆ ಸುಜಯ್ ಶಾಸ್ತ್ರಿ ನಿರ್ದೇಶಕರು. ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ‘ಎಲ್ರ ಕಾಲೆಳೆಯುತ್ತೆ ಕಾಲ’ ಚಿತ್ರಗಳನ್ನು ನಿರ್ದೇಶಿಸಿರುವ ಸುಜಯ್ ಈ ಬಾರಿ ಕ್ರೀಡಾ ಕಥೆಯನ್ನು ತೆರೆಯ ಮೇಲೆ ತರುವುದಕ್ಕೆ ಹೊರಟಿದ್ದಾರೆ. ಈ ಚಿತ್ರಕ್ಕೆ ಅವರೇ ಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. ‘8’ ಹೆಸರಿನ ಈ ಚಿತ್ರಕ್ಕೆ ಪುಟ್ಭಲ್ ಹಿನ್ನೆಲೆಯ ಕಥೆ ಇದೆ. ಈ ಚಿತ್ರದ ನಾಯಕ ಯಾರು? ಅನ್ನೋದನ್ನು ಸದ್ಯಕ್ಕೆ ಸಸ್ಪೆನ್ಸ್ ಆಗಿ ಇಡಲಾಗಿದೆ. ಟೀಂ ರೆಡಿ ಇದೆ. ಕೋಚ್ ಯಾರು ಅನ್ನೋದನ್ನು ಸ್ಪಲ್ಪ ದಿನದಲ್ಲೇ ಹೇಳೋದಾಗಿ ಚಿತ್ರತಂಡ ತಿಳಿಸಿದೆ.

‘ರಿಚಿ ರಿಚ್‍’ ಮತ್ತು ‘8’ ಚಿತ್ರಗಳು ಸದ್ಯದಲ್ಲೇ ಪ್ರಾರಂಭವಾಗಲಿದೆ.

ಭೂಮಿಕಾ

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

6 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

7 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

8 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

8 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

9 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

9 hours ago