ಮನರಂಜನೆ

ಸಂಗೀತದ ಕಥೆ ಜೊತೆಗೆ ರಕ್ತ ಚರಿತ್ರೆ; ‘ದೇವರು ರುಜು ಮಾಡಿದನು’ ಪ್ರಾರಂಭ

‘ಸಿಂಪಲ್‍’ ಸುನಿ ಹೊಸಬರನ್ನಿಟ್ಟುಕೊಂಡು ‘ದೇವರು ರುಜು ಮಾಡಿದನು’ ಎಂಬ ಚಿತ್ರ ಮಾಡುತ್ತಿರುವುದು ಗೊತ್ತಿರುವ ವಿಷಯವೇ. ಇತ್ತೀಚೆಗೆ ಆ ಚಿತ್ರದ ಮುಹೂರ್ತ ಸದ್ದಿಲ್ಲದೆ ನಡೆದಿದೆ. ನಾಯಕ ವೀರಾಜ್ ಅಜ್ಜಿ ಕ್ಯಾಮೆರಾಗೆ ಚಾಲನೆ ನೀಡುವ ಮೂಲಕ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಚಿತ್ರದ ಟೀಸರ್ ಸಹ ಬಿಡುಗಡೆ ಆಗಿದೆ.

ಎಲ್ಲಾ ಸರಿ, ‘ದೇವರು ರುಜು ಮಾಡಿದನು’ ಚಿತ್ರದ ಕಥೆ ಏನು? ಎಂಬ ಪ್ರಶ್ನೆ ಸಹಜ. ಸಂಗೀತವೇ ಉಸಿರು ಎಂದು ಜೀವಿಸುವ ಇಬ್ಬರು ನಾಯಕಿರು ಹಾಗೂ ಸಂಗೀತ ಇಷ್ಟವಿಲ್ಲದಿದ್ದರೂ ಅದನ್ನು ಪ್ರೀತಿಸುವ ನಾಯಕ. ಒಂದೇ ಮಾತಿನಲ್ಲಿ ಹೇಳುವುದಾದರೆ ಸಂಗೀತದ ಕಥೆ ಜೊತೆಗೆ ರಕ್ತ ಚರಿತ್ರೆಯನ್ನು ಈ ಚಿತ್ರದ ಮೂಲಕ ಸುನಿ ಹೇಳುವುದಕ್ಕೆ ಹೊರಟಿದ್ದಾರೆ. ಚಿತ್ರದಲ್ಲಿ ವೀರಾಜ್ ನಾಯಕನಾಗಿ ಅಭಿನಯಿಸಿದರೆ ಕೀರ್ತಿ ಕೃಷ್ಣ ಹಾಗೂ ದಿವಿತಾ ರೈ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

‘ದೇವರು ರುಜು ಮಾಡಿದನು’ ಚಿತ್ರದ ಕುರಿತು ಮಾತನಾಡುವ ಸುನಿ, ‘ವೀರಾಜ್‍ ಅವರಿಗೆ ನಾಲ್ಕು ಕಥೆಗಳನ್ನು ಹೇಳಿದ್ದೆ. 10 ಜನರಿಂದ ಕಥೆ ಹೇಳಿಸಿದ್ದೆ. ಯಾವುದೂ ಓಕೆ ಆಗಿರಲಿಲ್ಲ. ಈಗ ಇದು ಓಕೆಯಾಗಿದೆ. ದೇವರೇ ನನಗೆ ಕಥೆ ಕೊಟ್ಟಿದ್ದಾರೆ. 2012ರಲ್ಲಿ ನಾನು ಸಹಾಯಕ ನಿರ್ದೇಶಕನಾಗಿದ್ದಾಗ ಮಾಡಿಕೊಂಡ ಕಥೆ ಇದು. ಶ್ರೀನಗರ ಕಿಟ್ಟಿ ಅವರಿಗೆ ಆಗಲೇ ರೀಡಿಂಗ್‍ ಕೊಟ್ಟಿದ್ದೆ. ಎರಡು ಸೀನ್‍ ಮೇಲೆ ಹೇಳಲೇ ಆಗಿದ್ದೆ. ಬಹಳ ನರ್ವಸ್‍ ಆಗಿದ್ದೆ. ಕಿಟ್ಟಣ್ಣ ಆಮೇಲೆ ಮಾಡೋಣ ಎಂದು ಹೇಳಿದ್ದರು. ಈ ಕಥೆಗೆ ಹೊಸಬರು ಬೇಕಿತ್ತು. ಹುಡುಕಿ ತೆಗೆದುಕೊಂಡಿದ್ದೇನೆ.

ವೀರಾಜ್ ರಂಗಭೂಮಿ ಕಲಾವಿದ. ರಂಗಭೂಮಿಯಲ್ಲಿ ಸಾಕಷ್ಟು ಅನುಭವಗಳನ್ನು ಪಡೆದುಕೊಂಡಿರುವ ವೀರಾಜ್ ಈಗ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಒಂದಿಷ್ಟು ತಯಾರಿಗಳನ್ನು ಮಾಡಿಕೊಂಡೇ ಎಂಟ್ರಿ ಕೊಡುತ್ತಿದ್ದಾರೆ.

ಇನ್ನು ಗ್ರೀನ್ ಹೌಸ್ ಮೂವೀಸ್ ಅಡಿಯಲ್ಲಿ ಈ ಚಿತ್ರವನ್ನು ಗೋವಿಂದ್ ರಾಜ್ ಸಿ.ಟಿ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಜೇಡ್ ಸ್ಯಾಂಡಿ ಹಾಗೂ ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸಂತೋಷ್ ರೈ ಪತಾಜೆ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

16 mins ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

3 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

11 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

12 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

13 hours ago