ಮನರಂಜನೆ

ಸಹಾಯಕ ನಿರ್ದೇಶಕನನ್ನು ನಾಯಕ ಮಾಡಿದ ‘ಸಿಂಪಲ್‍’ ಸುನಿ …

‘ಸಿಂಪಲ್‍’ ಸುನಿ ಸದ್ದಿಲ್ಲದೆ ಒಂದು ಚಿತ್ರವನ್ನು ಮುಗಿಸಿದ್ದಾರೆ. ಹೆಸರು ಮೋಡ ಕವಿದ ವಾತಾವರಣ. ಈ ಚಿತ್ರದ ಮೂಲಕ ಅವರು ಶಿವಂ ಎಂಬ ಹೊಸ ನಾಯಕನನ್ನು ಪರಿಚಯಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಮುಗಿದಿದೆ.

‘ಒಂದು ಸರಳ ಪ್ರೇಮಕಥೆ’ ಚಿತ್ರವನ್ನು ನಿರ್ಮಿಸಿದ್ದ ರಮೇಶ್‍ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಮತ್ತು ಜೂಡಾ ಸ್ಯಾಂಡಿ ಹಾಗೂ ಜೇಡ್‍ ಸಂಗೀತ ಈ ಚಿತ್ರಕ್ಕಿದೆ.

ಈ ಚಿತ್ರದ ಕುರಿತು ಮಾತನಾಡುವ ಸುನಿ, ‘‘ಒಂದು ಸರಳ ಪ್ರೇಮ ಕಥೆ’ ನನ್ನ ಚಿತ್ರಜೀವನದಲ್ಲೊಂದು ವಿಭಿನ್ನ ಸಿನಿಮಾ. ಆ ಸಿನಿಮಾ ಮಾಡುವಾಗ ರೂಪುಗೊಂಡಿದ್ದೇ ಈ ಚಿತ್ರ. ಚಿತ್ರದ ಹೀರೋ ನಮ್ಮನೆ ಮಗ. ನಮ್ಮ ಪ್ರೊಡಕ್ಷನ್ ಹುಡುಗ. ಅವನನ್ನು ಕರೆಯುವಾಗ ನನ್ಮಗನೆ, ನನ್ಮಗನೆ ಎಂದು ಕರೆದು ಅಭ್ಯಾಸ. 2014ರಿಂದ ನನ್ನ ಎಲ್ಲಾ ಚಿತ್ರಗಳಲ್ಲೂ ಒಂದಲ್ಲ ಒಂದು ರೀತಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಿರ್ದೇಶನ, ಮಾರ್ಕೆಟಿಂಗ್‍ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿ ಬಾರಿ ಕಥೆ ಕೇಳಿದಾಗಲೂ, ಹೀರೋ ಯಾರು ಅಂತ ಕೇಳುತ್ತಿದ್ದರು. ನಾನು ಹೆಸರು ಹೇಳುವಾಗ, Burning Smell ಬರುತ್ತಿತ್ತು. ಏಕೆಂದರೆ, ಅವರು ಬಂದಿದ್ದು ನಟನಾಗಬೇಕು ಎಂದು. ಈ ಚಿತ್ರದ ಕಥೆ ಕೇಳಿದಾಗ, ಹೀರೋ ಯಾರೆಂದರು. ಈ ಬಾರಿ ನೀವೇ ಹೀರೋ ಎಂದೆ. ಅವರ ಮನೆ ದೇವರು ಶ್ರೀಶೈಲಂ. ಅದಕ್ಕೆ ಅವರಿಗೆ ಶೀಲಂ ಎಂದು ಹೆಸರಿಟ್ಟಿದ್ದಾರೆ’ ಎಂದರು.

ಮೂರ್ನಾಲ್ಕು ವರ್ಷಗಳ ಹಿಂದೆ ಚಿತ್ರದ ಒಂದೆಳೆ ಬರೆದೆ ಎನ್ನುವ ಸುನಿ, ‘ದಿನಾ ಬರೆಯುತ್ತಲೇ ಇದ್ದೆ. ಶೀಲಂ ಆಫೀಸ್‍ನಲ್ಲೇ ಇದ್ದರು. ಕಥೆ ಚರ್ಚೆ ಮಾಡುತ್ತಾ ಚಿತ್ರಕಥೆ ತಯಾರಾಯಿತು. ನಮ್ಮದೇ ಪ್ರೊಡಕ್ಷನ್‍ ಆದ ಕಾರಣ ಒಂದು ಹಂತದ ಚಿತ್ರೀಕರಣ ಮುಗಿಯಿತು. ರಷಸ್‍ ನೋಡಿ, ಚಿತ್ರವನ್ನು ಮುಂದುವರೆಸಿದೆವು’ ಎಂದರು.

ಇದನ್ನೂ ಓದಿ: ಭದ್ರಾ ನಾಲಾ ಸೀಳುವ ಯೋಜನೆಗೆ ರೈತರಿಂದ ಬೃಹತ್ ಪ್ರತಿಭಟನೆ : ಸಿ.ಎಂ, ಡಿಸಿಎಂ ಮನೆಗೆ ಮತ್ತಿಗೆ ಯತ್ನ

ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿರುವುದು ನನ್ನ ಅದೃಷ್ಟ ಎಂದ ಶೀಲಂ, ‘ಈ ಚಿತ್ರದಲ್ಲಿ ಕೆಲಸ ಮಾಡಿರುವ ಟೆಕ್ನಿಷಿಯನ್‌ ದೊಡ್ಡ ಹೀರೋಗಳ ಜೊತೆ ಕೆಲಸ ಮಾಡಿದ್ದಾರೆ. ಒಂದೊಳ್ಳೆ ತಂಡದ ಜೊತೆಗೆ ಚಿತ್ರರಂಗಕ್ಕೆ ನಾಯಕನಾಗಿ ಪರಿಚಿತವಾಗುತ್ತಿರುವುದು ಖುಷಿ ಇದೆ’ ಎಂದರು.

ಶೀಲಂಗೆ ನಾಯಕಿಯಾಗಿ ಸಾತ್ವಿಕಾ (ಶ್ರಾವ್ಯ ರಾವ್‍) ಅಭಿನಯಿಸಿದ್ದಾರೆ. ‘ಇದು ನನ್ನ ಡ್ರೀಮ್‌ ಪ್ರಾಜೆಕ್ಟ್.‌ ಸುನಿ ಸರ್‌ ಜೊತೆ ಕೆಲಸ ಮಾಡಬೇಕೆಂದು ಕೇಳಿಕೊಂಡಿದ್ದೆ. ಅವರ ಬಳಿ ಕಲಿಯುವುದು ತುಂಬಾನೇ ಇದೆ. ಈ ಜರ್ನಿಯಲ್ಲಿ ಬಹಳಷ್ಟು ಕಲಿತಿದ್ದೇನೆ’ ಎಂದರು.

‘ಮೋಡ ಕವಿದ ವಾತಾವರಣʼ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಹುತೇಕ ಮುಗಿದು ಚಿತ್ರ ಬಿಡುಗಡೆಗೆ ತಯಾರಾಗಿದೆ. ಸೈನ್ಸ್ ಫಿಕ್ಷನ್‍ ಕಥಾಹಂದರ ಹೊಂದಿರುವ ಚಿತ್ರವನ್ನು ‘ಒಂದು ಸರಳ ಪ್ರೇಮಕಥೆ’ ಸಿನಿಮಾ ನಿರ್ಮಾಣ ಮಾಡಿದ್ದ ರಾಮ್‌ ಮೂವೀಸ್ ಈ ಸಿನಿಮಾ ನಿರ್ಮಾಣ ಮಾಡಿದೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ ಹಾಗೂ ಗೋವಾ ರಮೇಶ್ ನಿರ್ಮಾಣ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…

1 min ago

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

12 mins ago

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…

22 mins ago

ಒಂದು ಎಕರೆಯಲ್ಲಿ 102 ವಿವಿಧ ಬೆಳೆ : ರೋಗರಹಿತ ಬೆಳೆಗಳ ತಳಿ ಪ್ರದರ್ಶನ

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…

34 mins ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

2 hours ago

ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…

2 hours ago