ಮನರಂಜನೆ

ಸಹಾಯಕ ನಿರ್ದೇಶಕನನ್ನು ನಾಯಕ ಮಾಡಿದ ‘ಸಿಂಪಲ್‍’ ಸುನಿ …

‘ಸಿಂಪಲ್‍’ ಸುನಿ ಸದ್ದಿಲ್ಲದೆ ಒಂದು ಚಿತ್ರವನ್ನು ಮುಗಿಸಿದ್ದಾರೆ. ಹೆಸರು ಮೋಡ ಕವಿದ ವಾತಾವರಣ. ಈ ಚಿತ್ರದ ಮೂಲಕ ಅವರು ಶಿವಂ ಎಂಬ ಹೊಸ ನಾಯಕನನ್ನು ಪರಿಚಯಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಮುಗಿದಿದೆ.

‘ಒಂದು ಸರಳ ಪ್ರೇಮಕಥೆ’ ಚಿತ್ರವನ್ನು ನಿರ್ಮಿಸಿದ್ದ ರಮೇಶ್‍ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಮತ್ತು ಜೂಡಾ ಸ್ಯಾಂಡಿ ಹಾಗೂ ಜೇಡ್‍ ಸಂಗೀತ ಈ ಚಿತ್ರಕ್ಕಿದೆ.

ಈ ಚಿತ್ರದ ಕುರಿತು ಮಾತನಾಡುವ ಸುನಿ, ‘‘ಒಂದು ಸರಳ ಪ್ರೇಮ ಕಥೆ’ ನನ್ನ ಚಿತ್ರಜೀವನದಲ್ಲೊಂದು ವಿಭಿನ್ನ ಸಿನಿಮಾ. ಆ ಸಿನಿಮಾ ಮಾಡುವಾಗ ರೂಪುಗೊಂಡಿದ್ದೇ ಈ ಚಿತ್ರ. ಚಿತ್ರದ ಹೀರೋ ನಮ್ಮನೆ ಮಗ. ನಮ್ಮ ಪ್ರೊಡಕ್ಷನ್ ಹುಡುಗ. ಅವನನ್ನು ಕರೆಯುವಾಗ ನನ್ಮಗನೆ, ನನ್ಮಗನೆ ಎಂದು ಕರೆದು ಅಭ್ಯಾಸ. 2014ರಿಂದ ನನ್ನ ಎಲ್ಲಾ ಚಿತ್ರಗಳಲ್ಲೂ ಒಂದಲ್ಲ ಒಂದು ರೀತಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಿರ್ದೇಶನ, ಮಾರ್ಕೆಟಿಂಗ್‍ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿ ಬಾರಿ ಕಥೆ ಕೇಳಿದಾಗಲೂ, ಹೀರೋ ಯಾರು ಅಂತ ಕೇಳುತ್ತಿದ್ದರು. ನಾನು ಹೆಸರು ಹೇಳುವಾಗ, Burning Smell ಬರುತ್ತಿತ್ತು. ಏಕೆಂದರೆ, ಅವರು ಬಂದಿದ್ದು ನಟನಾಗಬೇಕು ಎಂದು. ಈ ಚಿತ್ರದ ಕಥೆ ಕೇಳಿದಾಗ, ಹೀರೋ ಯಾರೆಂದರು. ಈ ಬಾರಿ ನೀವೇ ಹೀರೋ ಎಂದೆ. ಅವರ ಮನೆ ದೇವರು ಶ್ರೀಶೈಲಂ. ಅದಕ್ಕೆ ಅವರಿಗೆ ಶೀಲಂ ಎಂದು ಹೆಸರಿಟ್ಟಿದ್ದಾರೆ’ ಎಂದರು.

ಮೂರ್ನಾಲ್ಕು ವರ್ಷಗಳ ಹಿಂದೆ ಚಿತ್ರದ ಒಂದೆಳೆ ಬರೆದೆ ಎನ್ನುವ ಸುನಿ, ‘ದಿನಾ ಬರೆಯುತ್ತಲೇ ಇದ್ದೆ. ಶೀಲಂ ಆಫೀಸ್‍ನಲ್ಲೇ ಇದ್ದರು. ಕಥೆ ಚರ್ಚೆ ಮಾಡುತ್ತಾ ಚಿತ್ರಕಥೆ ತಯಾರಾಯಿತು. ನಮ್ಮದೇ ಪ್ರೊಡಕ್ಷನ್‍ ಆದ ಕಾರಣ ಒಂದು ಹಂತದ ಚಿತ್ರೀಕರಣ ಮುಗಿಯಿತು. ರಷಸ್‍ ನೋಡಿ, ಚಿತ್ರವನ್ನು ಮುಂದುವರೆಸಿದೆವು’ ಎಂದರು.

ಇದನ್ನೂ ಓದಿ: ಭದ್ರಾ ನಾಲಾ ಸೀಳುವ ಯೋಜನೆಗೆ ರೈತರಿಂದ ಬೃಹತ್ ಪ್ರತಿಭಟನೆ : ಸಿ.ಎಂ, ಡಿಸಿಎಂ ಮನೆಗೆ ಮತ್ತಿಗೆ ಯತ್ನ

ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿರುವುದು ನನ್ನ ಅದೃಷ್ಟ ಎಂದ ಶೀಲಂ, ‘ಈ ಚಿತ್ರದಲ್ಲಿ ಕೆಲಸ ಮಾಡಿರುವ ಟೆಕ್ನಿಷಿಯನ್‌ ದೊಡ್ಡ ಹೀರೋಗಳ ಜೊತೆ ಕೆಲಸ ಮಾಡಿದ್ದಾರೆ. ಒಂದೊಳ್ಳೆ ತಂಡದ ಜೊತೆಗೆ ಚಿತ್ರರಂಗಕ್ಕೆ ನಾಯಕನಾಗಿ ಪರಿಚಿತವಾಗುತ್ತಿರುವುದು ಖುಷಿ ಇದೆ’ ಎಂದರು.

ಶೀಲಂಗೆ ನಾಯಕಿಯಾಗಿ ಸಾತ್ವಿಕಾ (ಶ್ರಾವ್ಯ ರಾವ್‍) ಅಭಿನಯಿಸಿದ್ದಾರೆ. ‘ಇದು ನನ್ನ ಡ್ರೀಮ್‌ ಪ್ರಾಜೆಕ್ಟ್.‌ ಸುನಿ ಸರ್‌ ಜೊತೆ ಕೆಲಸ ಮಾಡಬೇಕೆಂದು ಕೇಳಿಕೊಂಡಿದ್ದೆ. ಅವರ ಬಳಿ ಕಲಿಯುವುದು ತುಂಬಾನೇ ಇದೆ. ಈ ಜರ್ನಿಯಲ್ಲಿ ಬಹಳಷ್ಟು ಕಲಿತಿದ್ದೇನೆ’ ಎಂದರು.

‘ಮೋಡ ಕವಿದ ವಾತಾವರಣʼ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಹುತೇಕ ಮುಗಿದು ಚಿತ್ರ ಬಿಡುಗಡೆಗೆ ತಯಾರಾಗಿದೆ. ಸೈನ್ಸ್ ಫಿಕ್ಷನ್‍ ಕಥಾಹಂದರ ಹೊಂದಿರುವ ಚಿತ್ರವನ್ನು ‘ಒಂದು ಸರಳ ಪ್ರೇಮಕಥೆ’ ಸಿನಿಮಾ ನಿರ್ಮಾಣ ಮಾಡಿದ್ದ ರಾಮ್‌ ಮೂವೀಸ್ ಈ ಸಿನಿಮಾ ನಿರ್ಮಾಣ ಮಾಡಿದೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ ಹಾಗೂ ಗೋವಾ ರಮೇಶ್ ನಿರ್ಮಾಣ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

30 mins ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

42 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

2 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

3 hours ago