ಮನರಂಜನೆ

‘ದೇವರು ರುಜು ಮಾಡಿದನು’ ಎಂದ ಸಿಂಪಲ್ ಸುನಿ; ಶೀರ್ಷಿಕೆ ಅನಾವರಣ

ಈ ವರ್ಷ ಬಿಡುಗಡೆಯಾದ ವಿನಯ್‍ ರಾಜಕುಮಾರ್‍ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರದ ನಂತರ ಒಂದಿಷ್ಟು ಹೊಸ ಚಿತ್ರದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ‘ಸಿಂಪಲ್‍’ ಸುನಿ, ಇದೀಗ ತಮ್ಮ ಹೊಸ ಚಿತ್ರವನ್ನು ಘೋಷಿಸಿದ್ದಾರೆ. ಈ ಬಾರಿ ಅವರು ಬೆಳ್ಳಿತೆರೆಗೆ ಹೊಸ ನಾಯಕನನ್ನು ಪರಿಚಯಿಸುತ್ತಿದ್ದು, ಚಿತ್ರಕ್ಕೆ ‘ದೇವರು ರುಜು ಮಾಡಿದನು’ ಎಂಬ ಹೆಸರನ್ನು ಇಡಲಾಗಿದೆ.

ಕುವೆಂಪುರ ‘ದೇವರು ರುಜು ಮಾಡಿದನು, ರಸವಶನಾಗುತ ಕವಿ ಅದ ನೋಡಿದನು …’ ಎಂಬ ಜನಪ್ರಿಯ ಕಾವ್ಯದಿಂದ ಪ್ರೇರಿತರಾಗಿ ಸುನಿ, ಈ ಚಿತ್ರಕ್ಕೆ ‘ದೇವರು ರುಜು ಮಾಡಿದನು’ ಎಂಬ ಚೆಂದದ ಹೆಸರನ್ನು ಇಟ್ಟಿದ್ದಾರೆ.

‘ದೇವರು ರುಜು ಮಾಡಿದನು’ ಚಿತ್ರದ ಮೂಲಕ ಬೆಳ್ಳಿಪರದೆಗೆ ನವ ನಾಯಕನ್ನು ಪರಿಚಯಿಸಿದ್ದಾರೆ. ರಂಗಭೂಮಿ ಹಿನ್ನೆಲೆಯ ವೀರಾಜ್ ಅವರು ಹೀರೋ ಆಗಿ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಕೈಯಲ್ಲಿ ಗಿಟಾರ್ ಹಿಡಿದು ರಕ್ತಸಿಕ್ತರಾಗಿ ಕಾಣಿಸಿಕೊಂಡಿರುವ ವೀರಾಜ್ ಅವರ ಮೊದಲ ಪೋಸ್ಟರ್‍ ಇತ್ತೀಚೆಗೆ ಬಿಡುಗಡೆ ಆಗಿದೆ.

ಇದೇ ತಿಂಗಳ 20ರಂದು ಸಿನಿಮಾದ ಮುಹೂರ್ತ ನಡೆಯಲಿದ್ದು, ಮುಹೂರ್ತದ ನಂತರ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ. ಸಿಂಪಲ್ ಸುನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ರಚಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ.

ಗ್ರೀನ್ ಹೌಸ್ ಮೂವೀಸ್ ಬ್ಯಾನರ್ ನಡಿಯಲ್ಲಿ ‘ದೇವರು ರುಜು ಮಾಡಿದನು’ ಚಿತ್ರಕ್ಕೆ ಗೋವಿಂದರಾಜ್ ಸಿಟಿ ನಿರ್ಮಾಣ ಮಾಡುತ್ತಿದ್ದಾರೆ. ಜೆಜೆ ಮತ್ತು ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಸಂತೋಷ್ ರೈ ಪತಾಜೆ ಛಾಯಾಗ್ರಹಣ, ವಿನಯ್ ಸಂಕಲನ ಚಿತ್ರಕ್ಕಿದೆ. ಬೆಂಗಳೂರು, ಉತ್ತರ ಕನ್ನಡ, ಗೋವಾ ಸುತ್ತಮುತ್ತ ‘ದೇವರು ರುಜು ಮಾಡಿದನು’ ಚಿತ್ರದ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಭೂಮಿಕಾ

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago