ಮನರಂಜನೆ

ಒಂದೇ ಸಂಸ್ಥೆಯ ಎರಡು ಚಿತ್ರಗಳು ಏಕಕಾಲಕ್ಕೆ ಆರಂಭ

ಕೆಲವು ವರ್ಷಗಳ ಹಿಂದೆ ರವಿಚಂದ್ರನ್‍ ಅಭಿನಯದ ‘ದಶರಥ’, ‘ರಾಜೇಂದ್ರ ಪೊನ್ನಪ್ಪ’ ಮತ್ತು ‘ಬಕಾಸುರ’ ಚಿತ್ರಗಳು ಒಟ್ಟಿಗೆ ಮುಹೂರ್ತವಾಗಿತ್ತು. ಈಗ ಹೊಸಬರ ತಂಡವೊಂದು ಇಂಥದ್ದೊಂದು ಸಾಹಸಕ್ಕೆ ಕೈ ಹಾಕಿದೆ. ಒಂದೇ ದಿನ ಎರಡು ಚಿತ್ರಗಳನ್ನು ಒಟ್ಟಿಗೆ ಪ್ರಾರಂಭಿಸಿದೆ. ಆರ್‌.ಎಸ್‌.ಪಿ ಪ್ರೊಡಕ್ಷನ್ಸ್ ಹಾಗೂ ಚಿನ್ಮಯ್ ಸಿನಿ ಕ್ರಿಯೇಶನ್ಸ್ ಸಂಸ್ಥೆಗಳಡಿ ಲಕ್ಷ್ಮೀ ಹರೀಶ್‍ ಈ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ.

ಈ ಚಿತ್ರಗಳಿಗೆ ‘ಆ ಈ’ ಮತ್ತು ‘ರಾಜ ದೇವ ಸಿಂಧು’ ಎಂದು ಹೆಸರಿಡಲಾಗಿದ್ದು, ಎರಡೂ ಚಿತ್ರಗಳಿಗೆ ದುರ್ಗಾ ಮೋಹನ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಎರಡೂ ಚಿತ್ರಗಳಲ್ಲಿ ಭಾರ್ಗವ್‍ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ವಿಶೇಷವೆಂದರೆ, ಈ ಎರಡೂ ಚಿತ್ರಗಳಲ್ಲಿ ಭಾರ್ಗವ್‍ ದ್ವಿಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಈ ಪೈಕಿ ‘ಅ … ಈ …’ ಕುರಿತು ಮಾತನಾಡುವ ನಿರ್ದೇಶಕ ದುರ್ಗಾ ಮೋಹನ್‍, ‘ಆ ದಿನಗಳು ಚೆನ್ನಾಗಿತ್ತು ಎಂದು ಕೆಲವರು ಹೇಳುತ್ತಾರೆ. ಕೆಲವರು ಈಗಲೇ ಚೆನ್ನಾಗಿದೆ ಎನ್ನುತ್ತಾರೆ. ಎರಡನ್ನೂ ತೆಗೆದುಕೊಂಡರೇ ಜೀವನ ಎಂದು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಕಾಶೀನಾಥ್‍ ಅವರ ಚಿತ್ರಗಳಲ್ಲಿ ಸಂದೇಶದ ಜೊತೆಗೆ ಹಾಸ್ಯವಿರುತ್ತಿತ್ತು. ಈ ಚಿತ್ರದಲ್ಲಿ ನಾವು ಆ ತರಹದ ಪ್ರಯತ್ನ ಮಾಡಿದ್ದೇವೆ. ಬೆಂಗಳೂರಿನಲ್ಲೇ ಬಹುತೇಕ ಚಿತ್ರೀಕರಣ ನಡೆಯಲಿದೆ. ಇನ್ನೊಂದು ಹಂತದಲ್ಲಿ ಬೆಂಗಳೂರು ಸುತ್ತಮುತ್ತದ ಹಳ್ಳಿಯಲ್ಲಿ ಚಿತ್ರೀಕರಣ ಮಾಡಲಿದ್ದೇವೆ. ಭಾರ್ಗವ್‍ ಇಲ್ಲಿ ಅಪ್ಪ-ಮಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಡೀ ಚಿತ್ರದಲ್ಲಿ ಅವರಿಗೆ ಮೂರು ಶೇಡ್‍ಗಳಿರುವ ಪಾತ್ರವಿದೆ. ಒಬ್ಬ ಕಾಲೇಜು ಹುಡುಗನಿಂದ 50 ವರ್ಷದ ವಯಸ್ಸಿನವರೆಗೂ ನಟಿಸುತ್ತಿದ್ದಾರೆ. ಜೊತೆಗೆ ಶ್ವೇತಾ, ಮೊನಿಕಾ, ಚಾವಿ, ಆರಾ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್‍ ಮತ್ತು ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ’ ಎಂದರು.

ಇನ್ನು, ‘ರಾಜ ದೇವ ಸಿಂಧು’ ಬಗ್ಗೆ ಮಾತನಾಡುವ ದುರ್ಗಾ ಮೋಹನ್‍, ‘ಕರ್ನಾಟಕದಲ್ಲಿ ಮಹಾರಾಜರು ಎಂದರೆ ನಮಗೆ ಮೊದಲು ನೆನಪಿಗೆ ಬರುವುದು ಕೃಷ್ಣದೇವರಾಯರು. ಅವರು ಮಾಡಿದ ಕೆಲಸಗಳು, ಸಾಧನೆಗಳು ನಮಗೆಲ್ಲಾ ಸ್ಫೂರ್ತಿಯಾಗಿವೆ. ಅವೆಲ್ಲವನ್ನೂ ಇಟ್ಟುಕೊಂಡು ಕಾಲ್ಪನಿಕ ಕಥೆ ಹೆಣೆದಿದ್ದೇವೆ. ಈ ಶೀರ್ಷಿಕೆಯಲ್ಲಿ ಮೂರು ಹೆಸರುಗಳಿವೆ. ರಾಜ ಎನ್ನುವವನು ಈಗಿನವನು. ಡೆಲಿವರಿ ಬಾಯ್‍ ಆಗಿರುತ್ತಾನೆ. ದೇವರಾಯ ಎಂಬುದು ಫ್ಲಾಶ್‍ಬ್ಯಾಕ್‍ನಲ್ಲಿ ಬರುವ ಒಂದು ಪಾತ್ರ. ಸಿಂಧು ಎನ್ನುವುದು ಸಿಂಧೂಜಾ ಎಂಬ ಪಾತ್ರ. ಮೂರೂ ಸೇರಿ ‘ರಾಜ ದೇವ ಸಿಂಧು’ ಎಂದು ಹೆಸರಿಟ್ಟಿದ್ದೇವೆ. ಇದೊಂದು ಕಾಲ್ಪನಿಕ ಚಿತ್ರ. ಏಳು ಜನ್ಮಗಳಿಗೊಮ್ಮೆ ಮನುಷ್ಯ ಜನ್ಮ ಬರುತ್ತದೆ ಎಂಬ ನಂಬಿಕೆ ಇದೆ. ಹಾಗಿರುವಾಗ, ಏಳು ಜನ್ಮಗಳ ಹಿಂದೆ ನಾವೇನು ಆಗಿರಬಹುದು ಎಂದು ಕಲ್ಪನೆಯೊಂದಿಗೆ ಮಾಡಿದ ಚಿತ್ರ. ಆಗಿನ ಜನ್ಮದಲ್ಲಿ ಆಗುವ ಸನ್ನಿವೇಶಗಳು ಪುನಃ ಈಗ ರಿಪೀಟ್‍ ಆಗುತ್ತದಾ? ಅಲ್ಲಿ ಒಳ್ಳೆಯವನಾಗಿದ್ದವನು ಇಲ್ಲಿ ಕೆಟ್ಟವನಾಗಿರುತ್ತಾನಾ? ಇಲ್ಲಿ ಇವನು ಏನಾಗಿರುತ್ತಾನೆ? ಎಂಬ ಅಂಶಗಳನ್ನಿಟ್ಟುಕೊಂಡು ಕಥೆ ಮಾಡಿದ್ದೇವೆ’ ಎಂದರು.

ಭಾರ್ಗವ್‍ ಮಾತನಾಡಿ, ‘’ಆ … ಈ …’ ನನ್ನ 7ನೇ ಚಿತ್ರ. ಈ ಚಿತ್ರದಲ್ಲಿ ಸವಾಲಿನ ಪಾತ್ರವಿದೆ. ಮೊದಲ ಬಾರಿಗೆ ದ್ವಿಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಚಿತ್ರದಲ್ಲಿ ನಾಲ್ಕು ರೀತಿಯ ಪ್ರೀತಿ ಇದೆ. ಪ್ರತಿಯೊಬ್ಬರಿಗೂ ಒಂದು ಪಾಠವಿದೆ. ನವೆಂಬರ್‍ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿತ್ರಕ್ಕೆ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಇನ್ನು, ನಿರ್ದೇಶಕರು ‘ರಾಜ ದೇವ ಸಿಂಧು’ ಚಿತ್ರದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಇದು ಮುಂದಿನ ಜನವರಿಯಲ್ಲಿ ಚಿತ್ರೀಕರಣ ನಡೆಯಲಿದೆ. ಬೆಂಗಳೂರು, ಮಂಗಳೂರು, ಮಡಿಕೇರಿ ಮುಂತಾದ ಕಡೆ ಚಿತ್ರೀಕರಣ ಮಾಡಲಾಗುತ್ತದೆ. ಇದೊಂದು ಸವಾಲಿನ ಪಾತ್ರ. ಸಾಕಷ್ಟು ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದೇನೆ. ಈ ಚಿತ್ರದಲ್ಲೂ ದ್ವಿಪಾತ್ರಗಳಿವೆ. ಇದೊಂದು ಸೋಷಿಯಲ್‍ ಫ್ಯಾಂಟಸಿ ಚಿತ್ರ. ಇಂಥದ್ದೊಂದು ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟ’ ಎಂದರು.

ಭೂಮಿಕಾ

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

5 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

5 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

6 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

7 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

7 hours ago